ಮುಂದಿನ 4 ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್.

ಮೈಸೂರು : “ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ ನಡೆಸಲಾಗುವುದು. ಮೊದಲು ಮೀಸಲಾತಿ ಹಾಗೂ ವಲಯವಾರು ವಿಭಾಗಗಳನ್ನು ರಚಿಸಲಾಗುವುದು. ಚುನಾವಣೆ ವಿಳಂಬ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ ದೊರಕಿದ್ದು ಚುನಾವಣೆ ಯಾವಾಗ ನಡೆಸಲಾಗುತ್ತದೆ ಎಂದು ಕೇಳಿದಾಗ, “ಈ ಬಗ್ಗೆ ಸರ್ವಪಕ್ಷ ಸಭೆ ನಡೆಸಲಾಗುವುದು. ಯಾವ ರೀತಿ ವಿಭಾಗಗಳನ್ನು ಮಾಡಬೇಕು ಎಂದು ಅವರ ಬಳಿಯೂ ಸಲಹೆ ಕೇಳಲಾಗುವುದು. ಸದನದಲ್ಲಿಈ ಬಗ್ಗೆ ಎಲ್ಲರೂ ತಮ್ಮ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಕ್ಯಾಬಿನೆಟ್ ಉಪ ಸಮಿತಿ ರಚನೆ ಮಾಡಲಾಗಿತ್ತು. ಅವರ ಶೇ 90 ರಷ್ಟು ಅಭಿಪ್ರಾಯಗಳನ್ನು ಪರಿಗಣಿಸಲಾಗಿದೆ. ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಚುನಾವಣೆ ನಡೆಸಲಾಗುವುದು. ಹೊಸ ಪ್ರದೇಶಗಳನ್ನು ಸೇರಿಸಲು ವಿಳಂಬವಾಗುತ್ತದೆ. ಈಗ ಹೇಗಿದೆಯೋ ಅದೇ ರೀತಿ ಮುಂದುವರೆಯಲಾಗುವುದು” ಎಂದು ತಿಳಿಸಿದರು.

ವಿಪಕ್ಷ ನಾಯಕ ಆರ್.ಅಶೋಕ್ ಅವರು ಇದನ್ನು ಕ್ವಾರ್ಟರ್ ಬೆಂಗಳೂರು ಎಂದು ಲೇವಡಿ ಮಾಡಿರುವ ಬಗ್ಗೆ ಕೇಳಿದಾಗ, “ಈ ವಿಧೇಯಕವು ಮೊದಲಿಗೆ ಬಂದಾಗಲೇ ವಿರೋಧ ವ್ಯಕ್ತಪಡಿಸಬೇಕಿತ್ತು. ಸದನದಲ್ಲೇಕೆ ಜಾರಿಗೆ ತರಲು ಒಪ್ಪಿಗೆ ಸೂಚಿಸಿದರು. ಅವರು ಕ್ವಾರ್ಟರ್ ಬೆಂಗಳೂರು, ಫುಲ್ ಬೆಂಗಳೂರು ಎಂದು ಏನಾದರು ಹೇಳಲಿ. ಆದರೆ ಅವರು ಏಕೆ ಸದನದಲ್ಲಿ ಸಲಹೆಗಳನ್ನು ನೀಡಿದರು. ವಿರೋಧ ಪಕ್ಷದವರು ಅಷ್ಟು ಮಾತನಾಡಲಿಲ್ಲ ಎಂದರೆ ಗೌರವ ಕಡಿಮೆ ಅಲ್ಲವೇ? ಹೀಗಾಗಿ ಮಾತನಾಡುತ್ತಿದ್ದಾರೆ. ಅವರು ಬೆಂಗಳೂರಿನ ಒಂದು ಭಾಗ ಅವರಿಗೆ ಏನು ಗೌರವ ನೀಡಲಾಗುವುದೋ ಅದನ್ನು ನಾವು ನೀಡುತ್ತೇವೆ” ಎಂದು ತಿಳಿಸಿದರು.

ಶಿವಕುಮಾರ್ ಹಿಡಿದ ಕೆಲಸ ಮಾಡಿ ಮುಗಿಸುತ್ತಾರೆ. ಆದರೆ ರಾಮನಗರ ಹೆಸರು ಬದಲಾವಣೆಯಲ್ಲಿ ತಡವಾಗುತ್ತಿರುವ ಬಗ್ಗೆ ಕೇಳಿದಾಗ, “ತಡವಾಗುತ್ತಿದೆ ಎಂದು ಹೇಳಿದವರು ಯಾರು? ಒಳ್ಳೆ ಶುಭ ಮುಹೂರ್ತ, ಶುಭ ಘಳಿಗೆಯಲ್ಲಿ ಕಾನೂನಿನ ಅಡಿಯಲ್ಲಿಯೇ ಘೋಷಣೆ ಮಾಡಲಾಗುವುದು. ಶೀಘ್ರದಲ್ಲಿಯೇ ಸಮಯ ತಿಳಿಸುತ್ತೇನೆ” ಎಂದು ತಿಳಿಸಿದರು.

ಪೆಹಲ್ಗಾಮ್ ದಾಳಿಯನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು ಎಂದು ಕಾಂಗ್ರೆಸ್ ತೀರ್ಮಾನ ಮಾಡಿರುವ ಬಗ್ಗೆ ಕೇಳಿದಾಗ, “ಪಕ್ಷ, ವ್ಯಕ್ತಿಗಿಂತ ದೇಶ ದೊಡ್ಡದು ಎಂಬುದು ನಮ್ಮ ಒಮ್ಮತದ ತೀರ್ಮಾನ. ಪ್ರಧಾನಿಗಳಿಗೆ ನೀವು ಯಾವ ತೀರ್ಮಾನ ತೆಗೆದುಕೊಂಡರೂ ಬೆಂಬಲ ಸೂಚಿಸುವುದಾಗಿ, ಜೊತೆಗೆ ಯಾವ ರಾಷ್ಟ್ರಕ್ಕೂ ಮಣಿಯಬಾರದು ಎಂದು ಹೇಳಿದ್ದೆವು” ಎಂದು ತಿಳಿಸಿದರು.

“ನಮ್ಮ ಸಂಸದರು ಸಹಿ ಮಾಡಿ ಪ್ರಧಾನಿಗಳಿಗೆ ನೀಡುತ್ತಿದ್ದಾರೆ. ಏನು ಬೆಳವಣಿಗೆಯಾಗಿದೆ ಎಂದು ತಿಳಿಸಬೇಕು ಎಂದು ಹೇಳಿದ್ದೇವೆ. ಬೇರೆ ದೇಶದವರು ನಮ್ಮ ದೇಶದ ಸ್ವಾಭಿಮಾನದ ಬಗ್ಗೆ ಮಾತನಾಡುತ್ತಿದ್ದಾರೆ. ಇಂದಿರಾಗಾಂಧಿ ಅವರ ಕಾಲದಿಂದಲೂ ನಾವು ಯಾರ ಹಂಗಿಗೂ ಒಳಗಾದವರಲ್ಲ. ಇಂತಹ ಸಂದರ್ಭದಲ್ಲಿ ಸಂಸತ್ತಿನಲ್ಲಿ ಚರ್ಚೆ ಮಾಡಬೇಕು ಎಂದು ಕೇಳುವುದು ನಮ್ಮ ಹಕ್ಕು” ಎಂದು ತಿಳಿಸಿದರು.
ಕಬಿನಿ ಸಂರಕ್ಷಿತ ಪ್ರದೇಶದಲ್ಲಿ ಅಕ್ರಮ ರೆಸಾರ್ಟ್ ಗಳ ಬಗ್ಗೆ ಕೇಳಿದಾಗ, “ಈ ಬಗ್ಗೆ ಪಟ್ಟಿ ಮಾಡಿ ನನಗೆ ನೀಡಿ ಇದರ ಬಗ್ಗೆ ಚರ್ಚೆ ನಡೆಸಲಾಗುವುದು” ಎಂದು ತಿಳಿಸಿದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!