ಮುಂದಿನ 4 ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್.

ಮೈಸೂರು : “ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ ನಡೆಸಲಾಗುವುದು. ಮೊದಲು ಮೀಸಲಾತಿ ಹಾಗೂ ವಲಯವಾರು ವಿಭಾಗಗಳನ್ನು ರಚಿಸಲಾಗುವುದು. ಚುನಾವಣೆ ವಿಳಂಬ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ ದೊರಕಿದ್ದು ಚುನಾವಣೆ ಯಾವಾಗ ನಡೆಸಲಾಗುತ್ತದೆ ಎಂದು ಕೇಳಿದಾಗ, “ಈ ಬಗ್ಗೆ ಸರ್ವಪಕ್ಷ ಸಭೆ ನಡೆಸಲಾಗುವುದು. ಯಾವ ರೀತಿ ವಿಭಾಗಗಳನ್ನು ಮಾಡಬೇಕು ಎಂದು ಅವರ ಬಳಿಯೂ ಸಲಹೆ ಕೇಳಲಾಗುವುದು. ಸದನದಲ್ಲಿಈ ಬಗ್ಗೆ ಎಲ್ಲರೂ ತಮ್ಮ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಕ್ಯಾಬಿನೆಟ್ ಉಪ ಸಮಿತಿ ರಚನೆ ಮಾಡಲಾಗಿತ್ತು. ಅವರ ಶೇ 90 ರಷ್ಟು ಅಭಿಪ್ರಾಯಗಳನ್ನು ಪರಿಗಣಿಸಲಾಗಿದೆ. ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಚುನಾವಣೆ ನಡೆಸಲಾಗುವುದು. ಹೊಸ ಪ್ರದೇಶಗಳನ್ನು ಸೇರಿಸಲು ವಿಳಂಬವಾಗುತ್ತದೆ. ಈಗ ಹೇಗಿದೆಯೋ ಅದೇ ರೀತಿ ಮುಂದುವರೆಯಲಾಗುವುದು” ಎಂದು ತಿಳಿಸಿದರು.

ವಿಪಕ್ಷ ನಾಯಕ ಆರ್.ಅಶೋಕ್ ಅವರು ಇದನ್ನು ಕ್ವಾರ್ಟರ್ ಬೆಂಗಳೂರು ಎಂದು ಲೇವಡಿ ಮಾಡಿರುವ ಬಗ್ಗೆ ಕೇಳಿದಾಗ, “ಈ ವಿಧೇಯಕವು ಮೊದಲಿಗೆ ಬಂದಾಗಲೇ ವಿರೋಧ ವ್ಯಕ್ತಪಡಿಸಬೇಕಿತ್ತು. ಸದನದಲ್ಲೇಕೆ ಜಾರಿಗೆ ತರಲು ಒಪ್ಪಿಗೆ ಸೂಚಿಸಿದರು. ಅವರು ಕ್ವಾರ್ಟರ್ ಬೆಂಗಳೂರು, ಫುಲ್ ಬೆಂಗಳೂರು ಎಂದು ಏನಾದರು ಹೇಳಲಿ. ಆದರೆ ಅವರು ಏಕೆ ಸದನದಲ್ಲಿ ಸಲಹೆಗಳನ್ನು ನೀಡಿದರು. ವಿರೋಧ ಪಕ್ಷದವರು ಅಷ್ಟು ಮಾತನಾಡಲಿಲ್ಲ ಎಂದರೆ ಗೌರವ ಕಡಿಮೆ ಅಲ್ಲವೇ? ಹೀಗಾಗಿ ಮಾತನಾಡುತ್ತಿದ್ದಾರೆ. ಅವರು ಬೆಂಗಳೂರಿನ ಒಂದು ಭಾಗ ಅವರಿಗೆ ಏನು ಗೌರವ ನೀಡಲಾಗುವುದೋ ಅದನ್ನು ನಾವು ನೀಡುತ್ತೇವೆ” ಎಂದು ತಿಳಿಸಿದರು.

ಶಿವಕುಮಾರ್ ಹಿಡಿದ ಕೆಲಸ ಮಾಡಿ ಮುಗಿಸುತ್ತಾರೆ. ಆದರೆ ರಾಮನಗರ ಹೆಸರು ಬದಲಾವಣೆಯಲ್ಲಿ ತಡವಾಗುತ್ತಿರುವ ಬಗ್ಗೆ ಕೇಳಿದಾಗ, “ತಡವಾಗುತ್ತಿದೆ ಎಂದು ಹೇಳಿದವರು ಯಾರು? ಒಳ್ಳೆ ಶುಭ ಮುಹೂರ್ತ, ಶುಭ ಘಳಿಗೆಯಲ್ಲಿ ಕಾನೂನಿನ ಅಡಿಯಲ್ಲಿಯೇ ಘೋಷಣೆ ಮಾಡಲಾಗುವುದು. ಶೀಘ್ರದಲ್ಲಿಯೇ ಸಮಯ ತಿಳಿಸುತ್ತೇನೆ” ಎಂದು ತಿಳಿಸಿದರು.

ಪೆಹಲ್ಗಾಮ್ ದಾಳಿಯನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು ಎಂದು ಕಾಂಗ್ರೆಸ್ ತೀರ್ಮಾನ ಮಾಡಿರುವ ಬಗ್ಗೆ ಕೇಳಿದಾಗ, “ಪಕ್ಷ, ವ್ಯಕ್ತಿಗಿಂತ ದೇಶ ದೊಡ್ಡದು ಎಂಬುದು ನಮ್ಮ ಒಮ್ಮತದ ತೀರ್ಮಾನ. ಪ್ರಧಾನಿಗಳಿಗೆ ನೀವು ಯಾವ ತೀರ್ಮಾನ ತೆಗೆದುಕೊಂಡರೂ ಬೆಂಬಲ ಸೂಚಿಸುವುದಾಗಿ, ಜೊತೆಗೆ ಯಾವ ರಾಷ್ಟ್ರಕ್ಕೂ ಮಣಿಯಬಾರದು ಎಂದು ಹೇಳಿದ್ದೆವು” ಎಂದು ತಿಳಿಸಿದರು.

“ನಮ್ಮ ಸಂಸದರು ಸಹಿ ಮಾಡಿ ಪ್ರಧಾನಿಗಳಿಗೆ ನೀಡುತ್ತಿದ್ದಾರೆ. ಏನು ಬೆಳವಣಿಗೆಯಾಗಿದೆ ಎಂದು ತಿಳಿಸಬೇಕು ಎಂದು ಹೇಳಿದ್ದೇವೆ. ಬೇರೆ ದೇಶದವರು ನಮ್ಮ ದೇಶದ ಸ್ವಾಭಿಮಾನದ ಬಗ್ಗೆ ಮಾತನಾಡುತ್ತಿದ್ದಾರೆ. ಇಂದಿರಾಗಾಂಧಿ ಅವರ ಕಾಲದಿಂದಲೂ ನಾವು ಯಾರ ಹಂಗಿಗೂ ಒಳಗಾದವರಲ್ಲ. ಇಂತಹ ಸಂದರ್ಭದಲ್ಲಿ ಸಂಸತ್ತಿನಲ್ಲಿ ಚರ್ಚೆ ಮಾಡಬೇಕು ಎಂದು ಕೇಳುವುದು ನಮ್ಮ ಹಕ್ಕು” ಎಂದು ತಿಳಿಸಿದರು.
ಕಬಿನಿ ಸಂರಕ್ಷಿತ ಪ್ರದೇಶದಲ್ಲಿ ಅಕ್ರಮ ರೆಸಾರ್ಟ್ ಗಳ ಬಗ್ಗೆ ಕೇಳಿದಾಗ, “ಈ ಬಗ್ಗೆ ಪಟ್ಟಿ ಮಾಡಿ ನನಗೆ ನೀಡಿ ಇದರ ಬಗ್ಗೆ ಚರ್ಚೆ ನಡೆಸಲಾಗುವುದು” ಎಂದು ತಿಳಿಸಿದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!