ಮುಂದಿನ 4 ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್.

ಮೈಸೂರು : “ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ ನಡೆಸಲಾಗುವುದು. ಮೊದಲು ಮೀಸಲಾತಿ ಹಾಗೂ ವಲಯವಾರು ವಿಭಾಗಗಳನ್ನು ರಚಿಸಲಾಗುವುದು. ಚುನಾವಣೆ ವಿಳಂಬ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ ದೊರಕಿದ್ದು ಚುನಾವಣೆ ಯಾವಾಗ ನಡೆಸಲಾಗುತ್ತದೆ ಎಂದು ಕೇಳಿದಾಗ, “ಈ ಬಗ್ಗೆ ಸರ್ವಪಕ್ಷ ಸಭೆ ನಡೆಸಲಾಗುವುದು. ಯಾವ ರೀತಿ ವಿಭಾಗಗಳನ್ನು ಮಾಡಬೇಕು ಎಂದು ಅವರ ಬಳಿಯೂ ಸಲಹೆ ಕೇಳಲಾಗುವುದು. ಸದನದಲ್ಲಿಈ ಬಗ್ಗೆ ಎಲ್ಲರೂ ತಮ್ಮ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಕ್ಯಾಬಿನೆಟ್ ಉಪ ಸಮಿತಿ ರಚನೆ ಮಾಡಲಾಗಿತ್ತು. ಅವರ ಶೇ 90 ರಷ್ಟು ಅಭಿಪ್ರಾಯಗಳನ್ನು ಪರಿಗಣಿಸಲಾಗಿದೆ. ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಚುನಾವಣೆ ನಡೆಸಲಾಗುವುದು. ಹೊಸ ಪ್ರದೇಶಗಳನ್ನು ಸೇರಿಸಲು ವಿಳಂಬವಾಗುತ್ತದೆ. ಈಗ ಹೇಗಿದೆಯೋ ಅದೇ ರೀತಿ ಮುಂದುವರೆಯಲಾಗುವುದು” ಎಂದು ತಿಳಿಸಿದರು.

ವಿಪಕ್ಷ ನಾಯಕ ಆರ್.ಅಶೋಕ್ ಅವರು ಇದನ್ನು ಕ್ವಾರ್ಟರ್ ಬೆಂಗಳೂರು ಎಂದು ಲೇವಡಿ ಮಾಡಿರುವ ಬಗ್ಗೆ ಕೇಳಿದಾಗ, “ಈ ವಿಧೇಯಕವು ಮೊದಲಿಗೆ ಬಂದಾಗಲೇ ವಿರೋಧ ವ್ಯಕ್ತಪಡಿಸಬೇಕಿತ್ತು. ಸದನದಲ್ಲೇಕೆ ಜಾರಿಗೆ ತರಲು ಒಪ್ಪಿಗೆ ಸೂಚಿಸಿದರು. ಅವರು ಕ್ವಾರ್ಟರ್ ಬೆಂಗಳೂರು, ಫುಲ್ ಬೆಂಗಳೂರು ಎಂದು ಏನಾದರು ಹೇಳಲಿ. ಆದರೆ ಅವರು ಏಕೆ ಸದನದಲ್ಲಿ ಸಲಹೆಗಳನ್ನು ನೀಡಿದರು. ವಿರೋಧ ಪಕ್ಷದವರು ಅಷ್ಟು ಮಾತನಾಡಲಿಲ್ಲ ಎಂದರೆ ಗೌರವ ಕಡಿಮೆ ಅಲ್ಲವೇ? ಹೀಗಾಗಿ ಮಾತನಾಡುತ್ತಿದ್ದಾರೆ. ಅವರು ಬೆಂಗಳೂರಿನ ಒಂದು ಭಾಗ ಅವರಿಗೆ ಏನು ಗೌರವ ನೀಡಲಾಗುವುದೋ ಅದನ್ನು ನಾವು ನೀಡುತ್ತೇವೆ” ಎಂದು ತಿಳಿಸಿದರು.

ಶಿವಕುಮಾರ್ ಹಿಡಿದ ಕೆಲಸ ಮಾಡಿ ಮುಗಿಸುತ್ತಾರೆ. ಆದರೆ ರಾಮನಗರ ಹೆಸರು ಬದಲಾವಣೆಯಲ್ಲಿ ತಡವಾಗುತ್ತಿರುವ ಬಗ್ಗೆ ಕೇಳಿದಾಗ, “ತಡವಾಗುತ್ತಿದೆ ಎಂದು ಹೇಳಿದವರು ಯಾರು? ಒಳ್ಳೆ ಶುಭ ಮುಹೂರ್ತ, ಶುಭ ಘಳಿಗೆಯಲ್ಲಿ ಕಾನೂನಿನ ಅಡಿಯಲ್ಲಿಯೇ ಘೋಷಣೆ ಮಾಡಲಾಗುವುದು. ಶೀಘ್ರದಲ್ಲಿಯೇ ಸಮಯ ತಿಳಿಸುತ್ತೇನೆ” ಎಂದು ತಿಳಿಸಿದರು.

ಪೆಹಲ್ಗಾಮ್ ದಾಳಿಯನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು ಎಂದು ಕಾಂಗ್ರೆಸ್ ತೀರ್ಮಾನ ಮಾಡಿರುವ ಬಗ್ಗೆ ಕೇಳಿದಾಗ, “ಪಕ್ಷ, ವ್ಯಕ್ತಿಗಿಂತ ದೇಶ ದೊಡ್ಡದು ಎಂಬುದು ನಮ್ಮ ಒಮ್ಮತದ ತೀರ್ಮಾನ. ಪ್ರಧಾನಿಗಳಿಗೆ ನೀವು ಯಾವ ತೀರ್ಮಾನ ತೆಗೆದುಕೊಂಡರೂ ಬೆಂಬಲ ಸೂಚಿಸುವುದಾಗಿ, ಜೊತೆಗೆ ಯಾವ ರಾಷ್ಟ್ರಕ್ಕೂ ಮಣಿಯಬಾರದು ಎಂದು ಹೇಳಿದ್ದೆವು” ಎಂದು ತಿಳಿಸಿದರು.

“ನಮ್ಮ ಸಂಸದರು ಸಹಿ ಮಾಡಿ ಪ್ರಧಾನಿಗಳಿಗೆ ನೀಡುತ್ತಿದ್ದಾರೆ. ಏನು ಬೆಳವಣಿಗೆಯಾಗಿದೆ ಎಂದು ತಿಳಿಸಬೇಕು ಎಂದು ಹೇಳಿದ್ದೇವೆ. ಬೇರೆ ದೇಶದವರು ನಮ್ಮ ದೇಶದ ಸ್ವಾಭಿಮಾನದ ಬಗ್ಗೆ ಮಾತನಾಡುತ್ತಿದ್ದಾರೆ. ಇಂದಿರಾಗಾಂಧಿ ಅವರ ಕಾಲದಿಂದಲೂ ನಾವು ಯಾರ ಹಂಗಿಗೂ ಒಳಗಾದವರಲ್ಲ. ಇಂತಹ ಸಂದರ್ಭದಲ್ಲಿ ಸಂಸತ್ತಿನಲ್ಲಿ ಚರ್ಚೆ ಮಾಡಬೇಕು ಎಂದು ಕೇಳುವುದು ನಮ್ಮ ಹಕ್ಕು” ಎಂದು ತಿಳಿಸಿದರು.
ಕಬಿನಿ ಸಂರಕ್ಷಿತ ಪ್ರದೇಶದಲ್ಲಿ ಅಕ್ರಮ ರೆಸಾರ್ಟ್ ಗಳ ಬಗ್ಗೆ ಕೇಳಿದಾಗ, “ಈ ಬಗ್ಗೆ ಪಟ್ಟಿ ಮಾಡಿ ನನಗೆ ನೀಡಿ ಇದರ ಬಗ್ಗೆ ಚರ್ಚೆ ನಡೆಸಲಾಗುವುದು” ಎಂದು ತಿಳಿಸಿದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!