ನಮ್ಮ ಮೆಟ್ರೋ ‘ಹಳದಿ ಮಾರ್ಗ’ವನ್ನು ಲೋಕಾರ್ಪಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಆರ್.ವಿ.ರಸ್ತೆ (ರಾಗಿಗುಡ್ಡ) ನಿಲ್ದಾಣದಲ್ಲಿ ಉದ್ಘಾಟಿಸಿದರು. ನಮ್ಮ ಮೆಟ್ರೋ ಹಳದಿ ಮಾರ್ಗ 16 ನಿಲ್ದಾಣಗಳು ಹಾಗು 19 ಕಿ.ಮೀ ಉದ್ದ. ಸಿದ್ದರಾಮಯ್ಯ, ಡಿಕೆಶಿ ಜೊತೆ ಕುಳಿತು ಪ್ರಯಾಣಿಸಿದ ಮೋದಿ: ನಂತರ ಪ್ರಧಾನಿ ರಾಗಿಗುಡ್ಡದಿಂದ ಎಲೆಕ್ಟ್ರಾನಿಕ್ಸ್ ಸಿಟಿವರೆಗೆ ಪ್ರಯಾಣಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಧಾನಿ ಜೊತೆಗಿದ್ದರು. ಪ್ರಯಾಣದ ವೇಳೆ ಪ್ರಧಾನಿ ಮೋದಿ ವಿದ್ಯಾರ್ಥಿಗಳು, ಮೆಟ್ರೋ ಸಿಬ್ಬಂದಿ ಮತ್ತು ಯೋಜನೆಯನ್ನು ನಿರ್ಮಿಸಲು ಸಹಾಯ ಮಾಡಿದ ಕೆಲವು ಕಾರ್ಮಿಕರೊಂದಿಗೆ ಮಾತುಕತೆ ನಡೆಸಿದರು.

ಹಳದಿ ಮಾರ್ಗವು ಲಕ್ಷಾಂತರ ಪ್ರಯಾಣಿಕರ ದೈನಂದಿನ ಪ್ರಯಾಣವನ್ನು ಸುಗಮಗೊಳಿಸುವುದಲ್ಲದೇ, ಪ್ರಮುಖ ವ್ಯಾಪಾರ ಮತ್ತು ತಂತ್ರಜ್ಞಾನ ಕೇಂದ್ರಗಳಿಗೆ ಸಂಪರ್ಕ ಸಾಧಿಸುವ ಮೂಲಕ ನಗರದ ಆರ್ಥಿಕ ಬೆಳವಣಿಗೆಗೆ ಕೊಡುಗೆ ನೀಡುತ್ತದೆ ಎಂದು ಮೋದಿ ಹೇಳಿದರು. ಬೆಂಗಳೂರಿನ ಸಾರ್ವಜನಿಕ ಸಾರಿಗೆಗೆ ಇದು ಒಂದು ಮೈಲಿಗಲ್ಲು ಮತ್ತು ನಗರದ ಸಂಚಾರ ಸಮಸ್ಯೆಗಳನ್ನು ಕಡಿಮೆ ಮಾಡುವಲ್ಲಿ ಪ್ರಮುಖ ಹೆಜ್ಜೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

https://youtu.be/6RWsp9y3dQM?si=u3V1YFHJ-DceyjqZತಾಕತ್ತಿದ್ರೆ ಬೆಳಗಿನ ಜಾವ ಸಮಾಧಿ ಒಡಿಬೇಕಿತ್ತು? ದಾದಾನ ಸಮಾಧಿಗೆ 5 ಕುಂಟೆ ಜಾಗ ಕೊಡ್ತೀನಿ!

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, ಮೆಟ್ರೋ ಹಳದಿ ಮಾರ್ಗಕ್ಕೆ ರಾಜ್ಯ ಸರ್ಕಾರ ಯೋಜನಾ ವೆಚ್ಚದ ಶೇ.80ರಿಂದ 90ರಷ್ಟು ಭರಿಸಿದೆ. ಕೇಂದ್ರದ ಕೊಡುಗೆ ತುಂಬಾ ಕಡಿಮೆ ಎಂದು ಹೇಳಿದರು. ಹಳದಿ ಮಾರ್ಗವು ರಾಗಿಗುಡ್ಡದಿಂದ ಬೊಮ್ಮಸಂದ್ರಕ್ಕೆ ಸಂಪರ್ಕಿಸುತ್ತದೆ. ಬಿಟಿಎಂ ಲೇಔಟ್, ಜಯದೇವ ಆಸ್ಪತ್ರೆ (ಪಿಂಕ್ ಲೈನ್‌ಗೆ ಇಂಟರ್‌ಚೇಂಜ್‌), ಸೆಂಟ್ರಲ್ ಸಿಲ್ಕ್ ಬೋರ್ಡ್ (ಮುಂಬರುವ ಬ್ಲೂ ಲೈನ್‌ಗೆ ಇಂಟರ್‌ಚೇಂಜ್) ಮತ್ತು ಎಲೆಕ್ಟ್ರಾನಿಕ್ಸ್ ಸಿಟಿ ಮಾರ್ಗವಾಗಿ ರೈಲು ಸಂಚರಿಸುತ್ತದೆ. ಈ ಕಾರಿಡಾರ್ ಪ್ರಮುಖ ವಸತಿ ಪ್ರದೇಶಗಳು, ಕೈಗಾರಿಕಾ ವಲಯಗಳು ಮತ್ತು ಐಟಿ ಕೇಂದ್ರಗಳನ್ನು ಸಂಪರ್ಕಿಸುತ್ತದೆ.

ನಮ್ಮ ಮೆಟ್ರೋದ 2ನೇ ಹಂತದ ಅಡಿ 7,600 ಕೋಟಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಿಸಲಾದ ಹಳದಿ ಮಾರ್ಗವು ಪ್ರತಿದಿನ ಸುಮಾರು ಎಂಟು ಲಕ್ಷ ಪ್ರಯಾಣಿಕರಿಗೆ ಸೇವೆ ನೀಡುವ ನಿರೀಕ್ಷೆಯಿದೆ. ಇದು ಹೊಸೂರು ರಸ್ತೆಯಲ್ಲಿ, ವಿಶೇಷವಾಗಿ ಸಿಲ್ಕ್ ಬೋರ್ಡ್ ಜಂಕ್ಷನ್ ಮತ್ತು ಎಲೆಕ್ಟ್ರಾನಿಕ್ಸ್ ಸಿಟಿಯ ಸುತ್ತಲೂ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುತ್ತದೆ.

ಹಳದಿ ಮಾರ್ಗ ಉದ್ಘಾಟನೆಯಿಂದ ಬೆಂಗಳೂರಿನ ಮೆಟ್ರೋ ಜಾಲ 96 ಕಿ.ಮೀಗಿಂತ ಹೆಚ್ಚು ವಿಸ್ತರಿಸಿದೆ. ಇದು ದೇಶದ ಎರಡನೇ ಅತಿ ಉದ್ದದ ಮೆಟ್ರೋ ಜಾಲವಾಗಿದೆ. ನಾಳೆಯಿಂದ ಸಾರ್ವಜನಿಕರಿಗೆ ಲಭ್ಯ: ಹಳದಿ ಮಾರ್ಗದ ಸೇವೆಗಳು ನಾಳೆ ಅಂದರೆ ಸೋಮವಾರ ಬೆಳಿಗ್ಗೆಯಿಂದ ಸಾರ್ವಜನಿಕರಿಗೆ ಪ್ರಾರಂಭವಾಗಲಿದ್ದು, ಆರಂಭದಲ್ಲಿ ಪ್ರತಿ 25 ನಿಮಿಷಗಳಿಗೊಮ್ಮೆ ರೈಲುಗಳು ಚಲಿಸುತ್ತವೆ.

ನಮ್ಮ ಮೆಟ್ರೋ 3ನೇ ಹಂತಕ್ಕೆ ಶಂಕುಸ್ಥಾಪನೆ: ಇದೇ ಕಾರ್ಯಕ್ರಮದಲ್ಲೇ ಪ್ರಧಾನಿ ಮೋದಿ ಮೆಟ್ರೋ ಯೋಜನೆಯ 3ನೇ ಹಂತಕ್ಕೆ ಶಂಕುಸ್ಥಾಪನೆ ನೆರವೇರಿಸಿದರು, ಇದು ₹15,600 ಕೋಟಿಗೂ ಹೆಚ್ಚು ವೆಚ್ಚದಲ್ಲಿ 44 ಕಿ.ಮೀಟರ್‌ಗಳಿಗೂ ಹೆಚ್ಚು ಉದ್ದದ ಹೊಸ ಮಾರ್ಗಗಳು ಮತ್ತು 31 ನಿಲ್ದಾಣಗಳನ್ನು ಸೇರಿಸಲಿದೆ. ಈ ವಿಸ್ತರಣೆಯು ನಗರದ ನೈಋತ್ಯ ಮತ್ತು ಪಶ್ಚಿಮ ಭಾಗಗಳಲ್ಲಿನ ಸೇವೆಯಿಲ್ಲದ ಪ್ರದೇಶಗಳನ್ನು ಸಂಪರ್ಕಿಸುವತ್ತ ಗಮನಹರಿಸುತ್ತದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!