ಆಷಾಢ ಮಾಸಾದಲ್ಲಿ ಚಾಮುಂಡಿಬೆಟ್ಟಕ್ಕೆ ವಾರಾಂತ್ಯ ಖಾಸಗಿ ವಾಹನ ನಿರ್ಬಂಧ!

ಮೈಸೂರು : ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇಗುಲದಲ್ಲಿ ಜೂ. 27 ರಂದು ಮೊದಲ ಜು. 4 ರಂದು 2ನೇ, ಜು. 11ರಂದು 3ನೇ, ಜು. 18ರಂದು 4ನೇ ಆಷಾಢ ಶುಕ್ರವಾರ ಆಚರಣೆ ನಡೆಯುತ್ತದೆ. ಈ ಹಿನ್ನಲೆಯಲ್ಲಿ ವಾರಾಂತ್ಯದ ಮೂರು ದಿನ(ಆಷಾಢ ಶುಕ್ರವಾರ, ಶನಿವಾರ, ಭಾನುವಾರ) ಖಾಸಗಿ ವಾಹನಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

ಈ ನಿಟ್ಟಿನಲ್ಲಿ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಇನ್ನಿತರ ಸಂಬಂಧಪಟ್ಟ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.

”ಜೂ. 27 ರಿಂದ ನಾಲ್ಕು ಶುಕ್ರವಾರಗಳಂದು ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯುತ್ತಾರೆ. ಶನಿವಾರ, ಭಾನುವಾರವೂ ಇದೇ ರಶ್ ಮುಂದುವರಿಯುತ್ತದೆ. ಹಾಗಾಗಿ ಇದೇ ಮೊದಲ ಬಾರಿಗೆ ಶುಕ್ರವಾರದೊಂದಿಗೆ ಶನಿವಾರ, ಭಾನುವಾರವೂ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ,” ಎಂದು ಮಾಹಿತಿ ನೀಡಿದರು.

 

ವಿಶೇಷ ದರ್ಶನಕ್ಕೆ ಎಸಿ ಬಸ್:

ವಿಶೇಷ ದರ್ಶನಕ್ಕಾಗಿ 2000 ರೂ. ಟಿಕೆಟ್ ಪಡೆದು ಬರುವ ಭಕ್ತಾದಿಗಳಿಗಾಗಿ ಇದೇ ಮೊದಲ ಬಾರಿಗೆ ಎಸಿ ಬಸ್ ವ್ಯವಸ್ಥೆ ಮಾಡಲಾಗಿದೆ. ಇವರು ತಮ್ಮ ವಾಹನಗಳನ್ನು ಹೆಲಿಪ್ಯಾಡ್ನಲ್ಲಿ ನಿಲುಗಡೆ ಮಾಡಿ ಎಸಿ ಬಸ್ನಲ್ಲಿ ತೆರಳಿ, 2000 ರೂ.ನ ವಿಶೇಷ ಕ್ಯೂನಲ್ಲಿ ದೇವಿಯ ದರ್ಶನ ಪಡೆಯಬಹುದು. ಸಾಮಾನ್ಯ(ಉಚಿತ)ಸರತಿ ಸಾಲು, 300 ರೂ. ಟಿಕೆಟ್ ಸಾಲು ಕೂಡ ಇರುತ್ತವೆ. ಹಣಕೊಟ್ಟು ತೆರಳುವ ಸಾಲಿನವರಿಗೆ ಒಂದು ಲಾಡು ಪ್ರಸಾದ ಉಚಿತವಾಗಿ ನೀಡಲಾಗುವುದು. ದರ್ಶನಕ್ಕೆ ಯಾವುದೇ ತೊಂದರೆ ಆಗದಂತೆ ಕ್ರಮವಹಿಸಲು ಸಂಬಂಧಿಸಿದ ಎಲ್ಲಾ ಇಲಾಖೆಗಳಿಗೂ ಸೂಚನೆ ನೀಡಲಾಗಿದೆ,” ಎಂದರು.

6000 ಹೆಕ್ಟೇರ್ ಡೀಮ್ಡ್ ಫಾರೆಸ್ಟ್ ಸರ್ವೆ:


”ಕೆಲವೆಡೆ ಗೈಡ್ಲೈನ್ ಇಲ್ಲದಿದ್ದರೂ ಡೀಮ್ಡ್ ಫಾರೆಸ್ಟ್ ಎಂದು ಘೋಷಣೆ ಮಾಡಲಾಗಿದೆ. ಈ ರೀತಿಯ ಸುಮಾರು 6 ಸಾವಿರ ಹೆಕ್ಟೇರ್ ಪ್ರದೇಶವನ್ನು ಗುರುತಿಸಲಾಗಿದೆ. ರೆವಿನ್ಯೂ ಹಾಗೂ ಅರಣ್ಯ ಇಲಾಖೆ ಸರ್ವೆ ಮಾಡಿ ಇದನ್ನು ಪನರ್ ಪರಿಶೀಲಿಸಲು ಸೂಚನೆ ನೀಡಲಾಗಿದೆ. ಪರಿಶೀಲನೆ ವೇಳೆ ಗೈಡ್ಲೈನ್ ವ್ಯಾಪ್ತಿಗೆ ಬಾರದ ಜಮೀನನ್ನು ರೈತರಿಗೆ ಮರಳಿಸಲು ತಿಳಿಸಲಾಗಿದೆ,” ಎಂದರು.

ಅನುಕಂಪದ ಆಧಾರದಲ್ಲಿ ಪರಿಹಾರ:
”ಚಿತ್ರನಗರಿ ನಿರ್ಮಾಣ ಯೋಜನೆ ಹಾಗೂ ಕೋಚನಹಳ್ಳಿ ಕೈಗಾರಿಕೆ ಪ್ರದೇಶದ ಭೂಮಿಯನ್ನು ಅಧಿಕೃತವಾಗಿ ಸರಕಾರ ಪಡೆದುಕೊಂಡಿದ್ದರೂ ಕೆಲವರು ತಮ್ಮ ಬಳಿ ಯಾವುದೇ ದಾಖಲೆಗಳಿಲ್ಲದಿದ್ದರೂ ತಮಗೆ ಸೇರಿದ್ದೆಂದು ಹೇಳುತ್ತಿದ್ದಾರೆ. ಕೆಲವರಿಗೆ ಅನುಕಂಪದ ಆಧಾರದ ಮೇಲೆ ಪರಿಹಾರಕ್ಕೆ ಕ್ರಮವಹಿಸಲಾಗುವುದು. ಒಂದು ವೇಳೆ ಸುಳ್ಳು ಹೇಳಿಕೊಂಡು ವಿನಾಕಾರಣ ತೊಂದರೆ ಕೊಡುತ್ತಿದ್ದರೆ ಅಂತವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು,” ಎಂದು ಎಚ್ಚರಿಸಿದರು.

ರನ್ವೇ ವಿಸ್ತರಣೆ ಪ್ರಗತಿ :
”ವಿಮಾನ ನಿಲ್ದಾಣ ವಿಸ್ತರಣೆಗೆ ಬೇಕಾದ 240 ಎಕರೆ ಭೂಮಿ ಸ್ವಾಧೀನ ಪ್ರಕ್ರಿಯೆ ಇನ್ನೆರಡು ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಸಿಎಂ ಅವರೇ ಕೇಂದ್ರಕ್ಕೆ ರನ್ವೇ ವಿಸ್ತರಣೆ ಜಾಗದಲ್ಲಿ ಬರುವ ಕೆಇಬಿ ಲೈನ್ ಸ್ಥಳಾಂತರ, ಮೂರು ಕಾಲುವೆಗಳಿರುವಲ್ಲಿ ಬಾಕ್ಸ್ ಬ್ರಿಡ್ಜ್ ಮಾಡಲು ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ. ಆದರೆ, ಕೇಂದ್ರ ಅದಕ್ಕೆ ಒಪ್ಪಲಿಲ್ಲ. ಹೀಗಾಗಿ ರಾಜ್ಯ ಸರಕಾರ 100 ಕೋಟಿ ರೂ. ವೆಚ್ಚವನ್ನು ಭರಿಸಲು ಕ್ಯಾಬಿನೆಟ್ನಲ್ಲಿ ನಿರ್ಧರಿಸಿದೆ. ಮೈಸೂರು-ನಂಜನಗೂಡು ಹೆದ್ದಾರಿ ಸ್ಥಳಾಂತರಕ್ಕೆ 60 ಎಕರೆ ಜಮೀನು ಪಡೆಯಲು ರಾಷ್ಟ್ರೀಯ ಹೆದ್ದಾರಿ ಪ್ರಾಕಾರಕ್ಕೆ ಮನವಿ ಮಾಡಲಾಗಿದೆ,” ಎಂದರು.

ಕಬಿನಿಯಲ್ಲಿ ಜಲಕ್ರೀಡೆಗೆ ಅನುಮತಿ :

”ಕಬಿನಿ ಹಿನ್ನೀರಿನಲ್ಲಿ ಜಲಕ್ರೀಡೆಗಳ ಆಯೋಜನೆಗೆ ಜೆಎಲ್ಆರ್ಗೆ ಅನುಮತಿ ನೀಡಲಾಗಿದೆ. ‘ಮೈಸೂರು ಅಭಿವೃದ್ಧಿ ಪ್ರಾಧಿಕಾರದಿಂದ (ಎಂಡಿಎ)57 ಸಿಎ ನಿವೇಶನ ಹಾಗೂ 200 ನಿವೇಶನಗಳನ್ನು ಆನ್ಲೈನ್ನಲ್ಲಿ ಹರಾಜು ಮಾಡಲಾಗುವುದು,” ಎಂದು ಮಹದೇವಪ್ಪ ತಿಳಿಸಿದರು.

ಶಾಸಕ ಜಿ.ಟಿ.ದೇವೇಗೌಡ, ಜಿಲ್ಲಾಕಾರಿ ಲಕ್ಷ್ಮೇಕಾಂತರೆಡ್ಡಿ, ಜಿ.ಪಂ ಸಿಇಒ ಯುಕೇಶ್ ಕುಮಾರ್, ಜಿಲ್ಲಾಎಸ್ಪಿ ವಿಷ್ಣುವರ್ಧನ್, ಎಂಡಿಎ ಆಯುಕ್ತ ರಕ್ಷಿತ್ ಹಾಗೂ ನಾನಾ ಇಲಾಖೆ ಅಧಿಕಾರಿಗಳು ಇದ್ದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!