ತರಗತಿಯಲ್ಲಿಯೇ ತನ್ನ ವಿದ್ಯಾರ್ಥಿಯನ್ನು ಮದುವೆಯಾದ ಪ್ರಾಧ್ಯಾಪಕಿ!

ಹೌದು ಇಂತಹದೊಂದು ಘಟನೆ ಪಶ್ಚಿಮ ಬಂಗಾಳದ ಕಾಲೇಜಿನಲ್ಲಿ ನಡೆದಿದೆ. ಪ್ರಾಧ್ಯಾಪಕಿ ತನ್ನ ವಿದ್ಯಾರ್ಥಿಯನ್ನು ಮದುವೆಯಾಗಿರುವ ವಿಡಿಯೋ ವೈರಲ್ ಆಗುತ್ತಿದೆ. ಅವರು ಪ್ರಥಮ ವರ್ಷದ ವಿದ್ಯಾರ್ಥಿಯನ್ನು ಮದುವೆಯಾಗಿದ್ದಾರೆ. ಇದು ವೈರಲ್ ಆಗುತ್ತಿದ್ದಂತೆ ಪ್ರಾಧ್ಯಾಪಕರನ್ನು ರಜೆಯ ಮೇಲೆ ಕಳುಹಿಸಿರುವ ಆಡಳಿತ ಇದು ಪ್ರಾಜೆಕ್ಟ್ನಲ್ಲಿ ಭಾಗವಾಗಿತ್ತು ಎಂದು ಹೇಳಿದ್ದಾರೆ.ಬಂಗಾಳದ ಹರಿಂಗಟಾದಲ್ಲಿರುವ ಮೌಲಾನಾ ಅಬ್ದುಲ್ ಕಲಾಂ ಆಜಾದ್ ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿಈ ಘಟನೆ ನಡೆದಿದೆ.ಸದ್ಯ ಇದೀಗ ಪಶ್ಚಿಮ ಬಂಗಾಳದ ಕಾಲೇಜಿನ ತರಗತಿಯಲ್ಲೇ ಮಹಿಳಾ ಪ್ರಾಧ್ಯಾಪಕರೊಬ್ಬರು ವಿದ್ಯಾರ್ಥಿಯನ್ನು ಮದುವೆಯಾಗಿರುವ ವಿಡಿಯೋ ವೈರಲ್ ಆಗುತ್ತಿದೆ.
ಪ್ರಾಧ್ಯಾಪಕಿ ಅವರು ಪ್ರಥಮ ವರ್ಷದ ವಿದ್ಯಾರ್ಥಿಯನ್ನು ಮದುವೆಯಾಗಿದ್ದಾರೆ. ಇದು ವೈರಲ್ ಆಗುತ್ತಿದ್ದಂತೆ ಪ್ರಾಧ್ಯಾಪಕರನ್ನು ರಜೆಯ ಮೇಲೆ ಕಳುಹಿಸಿರುವ ಆಡಳಿತಾಧಿಕಾರಿಗಳು ಇದು ಪ್ರಾಜೆಕ್ಟ್ನಲ್ಲಿ ಭಾಗವಾಗಿತ್ತು ಎಂದು ಹೇಳಿದ್ದಾರೆ. ಬಂಗಾಳದ ಹರಿಂಗಟಾದಲ್ಲಿರುವ ಮೌಲಾನಾ ಅಬ್ದುಲ್ ಕಲಾಂ ಆಜಾದ್ ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿಈ ಘಟನೆ ನಡೆದಿದೆ. ಅಪ್ಲೈಡ್ ಸೈಕಾಲಜಿ ವಿಭಾಗದ ಅಧ್ಯಾಪಕರೊಬ್ಬರು ವಧುವಿನಂತೆ ಬಟ್ಟೆ ಧರಿಸಿ , ಹೂಮಾಲೆಯನ್ನು ಪರಸ್ಪರ ಹಾಕಿಕೊಳ್ಳುವುದನ್ನು ವಿಡಿಯೋದಲ್ಲಿ ಕಾಣಬಹುದು. ಆತ ಆಕೆಯ ಹಣೆಗೆ ಸಿಂಧೂರ ಇಟ್ಟಿದ್ದಾನೆ. ಈ ದೃಶ್ಯ ಎಲ್ಲರ ಅನುಮಾನಕ್ಕೆ ಕಾರಣವಾಗಿದೆ.
ಅದಾಗಿಯೂ ಸಹ ವಿದ್ಯಾರ್ಥಿ ಮತ್ತು ಪ್ರಾಧ್ಯಾಪಕರ ಜೊತೆಗೆ ಮೂವರು ಸಾಕ್ಷಿಗಳು ಸಹಿ ಮಾಡಿದ ಕೈಬರಹದ ಪ್ರಮಾಣಪತ್ರವೂ ಆನ್ಲೈನ್ನಲ್ಲಿ ಕಾಣಿಸಿಕೊಂಡಿದೆ. ಆದರೆ ಇದು ಕಾಲೇಜಿನ ಪ್ರಾಜೆಕ್ಟ್ನ ಒಂದು ಭಾಗ ಎಂದು ಪ್ರಾಧ್ಯಾಪಕರು ಹೇಳಿದ್ದಾರೆ. ವೀಡಿಯೊ ಪ್ರಸಾರವಾದ ನಂತರ, ವಿಶ್ವವಿದ್ಯಾಲಯದ ಅಧಿಕಾರಿಗಳು ವಿಚಾರಣೆಯನ್ನು ಪ್ರಾರಂಭಿಸಿದರು ಮತ್ತು ಪ್ರಾಧ್ಯಾಪಕರನ್ನು ರಜೆಯ ಮೇಲೆ ಕಳುಹಿಸಿದ್ದಾರೆ. ಪ್ರಾಧ್ಯಾಪಕರಿಗೆ ರಜೆಯನ್ನು ನೀಡಿರುವುದು ಕುತೂಹಲಕಾರಿಯಾದ ವಿಷಯವಾಗಿದೆ. ಆದ್ದರಿಂದ ಆಡಳಿತ ವರ್ಗ ಯಾವ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂಬುದು ಗಮನಾರ್ಹವಾಗಲಿದೆ.
ಈ ಮದುವೆ ಸಂಭ್ರಮವು ಫ್ರೆಷರ್ ಪಾರ್ಟಿ ವೇಳೆ ಈ ನಡೆದಿದೆ. ಇದು ಪ್ರಾಜೆಕ್ಟ್ನ ಒಂದು ಭಾಗವಾಗಿತ್ತು, ನಮ್ಮ ಕಾಲೇಜಿನ ಪ್ರತಿಷ್ಠೆಗೆ ಧಕ್ಕೆ ತರಲು ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ. ಅದಕ್ಕೆ ಕಾರಣರಾದವರ ವಿರುದ್ಧ ಪೊಲೀಸ್ ದೂರು ದಾಖಲಿಸಲು ನಿರ್ಧರಿಸಿರುವುದಾಗಿ ಹೇಳಿದ್ದಾರೆ. ನಾವು ಫ್ರೆಷರ್ ಪಾರ್ಟಿಗಾಗಿ ಯೋಜಿಸಿದ್ದ ನಾಟಕ. ಇದನ್ನು ನನ್ನ ವಿರುದ್ಧದ ಪಿತೂರಿಯ ಭಾಗವಾಗಿ ಉದ್ದೇಶಪೂರ್ವಕವಾಗಿ ವೈರಲ್ ಮಾಡಲಾಗಿದೆ. ಎಂದು ಪ್ರಾಧ್ಯಾಪಕರು ಅಸಮಧಾನವನ್ನು ವ್ಯಕ್ತಪಡಿಸಿದ್ದಾರೆ.
ನನ್ನ ಮಾನಹಾನಿ ಮಾಡಲು ಪ್ರಯತ್ನಿಸಿದವರ ವಿರುದ್ಧ ನಾನು ಪೊಲೀಸ್ ದೂರು ನೀಡುತ್ತೇನೆ ಎಂದು ಪ್ರಾಧ್ಯಾಪಕಿ ಕೂಡ ಹೇಳಿದ್ದಾರೆ. ಯಾವುದೇ ಅನುಚಿತತೆ, ಅನೈತಿಕ ನಡವಳಿಕೆ ಇಲ್ಲ ಮತ್ತು ಇದು ಸಂಪೂರ್ಣವಾಗಿ ಕಾಲೇಜಿಗೆ ಸಂಬಂಧ ಪಟ್ಟ ನಾಟಕದ ಭಾಗವಾಗಿತ್ತು ಎಂದು ಸಮರ್ಥಿಸಿಕೊಂಡಿದ್ದಾರೆ. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ನ್ಯಾಯಾಲಯ ನೀಡುವ ತೀರ್ಪು ಅಂತಿಮವಾಗಲಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!