ಸರಕಾರಿ ಹುದ್ದೆಗಳಿಗೆ ನೇಮಕಾತಿ ಅಧಿ ಸೂಚನೆಯಲ್ಲಿ ಪರಿಶಿಷ್ಟ ಜಾತಿಗೆ ಶೇ.17 ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ.7ರಷ್ಟು ಮೀಸಲು ಕಲ್ಪಿಸಬೇಕು ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಆಗ್ರಹಿಸಿದರು.
“ದೇಶಕ್ಕೆ ಸ್ವಾತಂತ್ರ್ಯ ಬಂದು 78 ವರ್ಷಗ ಳಾದರೂ ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಸಾಮಾಜಿಕ ನ್ಯಾಯ ಸಿಕ್ಕಿಲ್ಲ. ಅಧಿಕಾರಕ್ಕೆ ಬಂದ ರಾಜಕೀಯ ಪಕ್ಷಗಳು ಅನ್ಯಾಯ ಮಾಡುತ್ತಲೇ ಬಂದಿವೆ. ಜನಸಂಖ್ಯೆಗೆ ಅನುಗುಣವಾಗಿ ಮೀಸಲು ನೀಡಬೇಕು ಎಂದು ಅಂಬೇಡ್ಕರ್ ಹೇಳಿದ್ದರೂ, ರಾಜಕೀಯ ಪಕ್ಷಗಳು ಈ ಎರಡೂ ಸಮುದಾಯಗಳನ್ನು ವೋಟ್ ಬ್ಯಾಂಕ್ ಆಗಿ ಬಳಸಿಕೊಳ್ಳುತ್ತಿವೆ” ಎಂದು ಶನಿವಾರ ಸುದ್ದಿ ಗೋಷ್ಠಿಯಲ್ಲಿ ಕಿಡಿಕಾರಿದರು.
“ರಾಜ್ಯದಲ್ಲಿ 2.74 ಲಕ್ಷ ಹುದ್ದೆಗಳು ಖಾಲಿ ಇವೆ. ಆದರೀಗ ರಾಜ್ಯ ಸರಕಾರ 52 ಸಾವಿರ ಹುದ್ದೆಗಳನ್ನು ಹಳೇ ಮೀಸಲು ಅನ್ವ ಯ ಭರ್ತಿ ಮಾಡುವುದಾಗಿ ತಿಳಿಸಿದೆ. ಇದರಿಂದ 1600 ಪರಿಶಿಷ್ಟ ಪಂಗಡ ಮತ್ತು 2 ಸಾವಿರ ಪರಿಶಿಷ್ಟ ಜಾತಿಯ ಹುದ್ದೆಗಳು ವಂಚಿತವಾಗಲಿವೆ” ಎಂದು ಹೇಳಿದರು.
“ಬಸವರಾಜ ಬೊಮ್ಮಾಯಿ ಮುಖ್ಯ ಮಂತ್ರಿಗಳಾಗಿದ್ದಾಗ 2022ರಲ್ಲಿ ಪರಿಶಿಷ್ಟ ಜಾತಿಗೆ ಶೇ.2 ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ.4 ಮೀಸಲು ಹೆಚ್ಚಿಸಿ ಶೇ.50ರಷ್ಟಿದ್ದ ಮೀಸಲನ್ನು ಒಟ್ಟಾರೆ ಶೇ.56ಕ್ಕೆ ಹೆಚ್ಚಳ ಮಾಡಿದರು. ಆದರೆ ಸಾಂವಿಧಾನಿಕ ಸಿಂಧುತ್ವ ಕೊಡಿಸುವ ಯಾವ ಮಾರ್ಗಗಳನ್ನು ಅನು ಸರಿಸಲಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.2023ರಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ರಾಜ್ಯದ ಸಂಸದರು ಪ್ರಧಾನ ಮಂತ್ರಿಗಳಿಗೆ ಮೀಸಲು ಹೆಚ್ಚಳದ ಬಗ್ಗೆ ಒತ್ತಡ ಹಾಕಬೇಕು. ಮೈಸೂರು ಸಂಸದ ಯದುವೀರ್, ಚಾಮರಾಜನಗರ ಹೆಚ್ಚು ಕಾಳಜಿ ವಹಿಸಬೇಕು. ಇಲ್ಲದಿದ್ದರೆ ಸಂಸದ ಸುನೀಲ್ ಬೋಸ್ ಈ ಬಗ್ಗೆ ಸಮುದಾಯ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದೆ.ವಿ.ಎಸ್.ಉಗ್ರಪ್ಪ, ಮಾಜಿ ಸಂಸದ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.
9ನೇ ಶಡ್ಯೂಲ್ ಗೆ ಸೇರಿಸುವ ಸರಕಾರ ಕೂಡ ಇದರ ಬಗ್ಗೆ ಮುತುವರ್ಜಿ ಎಸ್ಟಿ ಸಮುದಾಯಗಳು ಅನ್ಯಾಯಕ್ಕೆ ಪ್ರಯತ್ನ ಮಾಡಲಿಲ್ಲ. ಇದರಿಂದ ಎಸ್ಸಿ, ಸಮುದಾಯಗಳ ಸಚಿವರು, ಶಾಸಕರು ಒಳಗಾಗಿವೆ. ಇದರ ಬಗ್ಗೆ ಧ್ವನಿ ಎತ್ತಬೇಕಿದ್ದ ಮೌನ ವಹಿಸಿರುವುದು ಅತ್ಯಂತ ದುರದೃಷ್ಟ ಕರ” ಎಂದು ಬೇಸರ ವ್ಯಕ್ತಪಡಿಸಿದರು.ಅಧಿಕಾರ ಬೇಕಾದರೆ ದಲಿತರು ಎನ್ನುವ ಎಸ್ಸಿ, ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು, ಅನ್ಯಾಯದ ವಿರುದ್ಧ ಯಾಕೆ ಧ್ವನಿ ಎತ್ತುತ್ತಿಲ್ಲ? ಎಂದು ಪ್ರಶ್ನಿಸಿದರು. ಎಸ್ಟಿಗಳಿಗೆ ಆಗುತ್ತಿರುವ
ಸುದ್ದಿಗೋಷ್ಠಿಯಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾ ರಾಜ್ಯಾಧ್ಯಕ್ಷ ನರಸಿಂಹಯ್ಯ, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ರಾಮಚಂದ್ರು, ಹಿನಕಲ್ ಕೆಂಪನಾಯಕ, ಕೆ.ಸಣ್ಣಯ್ಯ ನಾಯಕ, ನಾಯಕ ಮತ್ತಿತರರು ಇದ್ದರು.




