ನೇಮಕಾತಿಯಲ್ಲಿ ಎಸ್ಸಿಗೆ ಶೇ.17, ಎಸ್ಪಿಗೆ ಶೇ.7 ಮೀಸಲು ಕಲ್ಪಿಸಿ :ಉಗ್ರಪ್ಪ

ಸರಕಾರಿ ಹುದ್ದೆಗಳಿಗೆ ನೇಮಕಾತಿ ಅಧಿ ಸೂಚನೆಯಲ್ಲಿ ಪರಿಶಿಷ್ಟ ಜಾತಿಗೆ ಶೇ.17 ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ.7ರಷ್ಟು ಮೀಸಲು ಕಲ್ಪಿಸಬೇಕು ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಆಗ್ರಹಿಸಿದರು.
“ದೇಶಕ್ಕೆ ಸ್ವಾತಂತ್ರ್ಯ ಬಂದು 78 ವರ್ಷಗ ಳಾದರೂ ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಸಾಮಾಜಿಕ ನ್ಯಾಯ ಸಿಕ್ಕಿಲ್ಲ. ಅಧಿಕಾರಕ್ಕೆ ಬಂದ ರಾಜಕೀಯ ಪಕ್ಷಗಳು ಅನ್ಯಾಯ ಮಾಡುತ್ತಲೇ ಬಂದಿವೆ. ಜನಸಂಖ್ಯೆಗೆ ಅನುಗುಣವಾಗಿ ಮೀಸಲು ನೀಡಬೇಕು ಎಂದು ಅಂಬೇಡ್ಕರ್ ಹೇಳಿದ್ದರೂ, ರಾಜಕೀಯ ಪಕ್ಷಗಳು ಈ ಎರಡೂ ಸಮುದಾಯಗಳನ್ನು ವೋಟ್ ಬ್ಯಾಂಕ್ ಆಗಿ ಬಳಸಿಕೊಳ್ಳುತ್ತಿವೆ” ಎಂದು ಶನಿವಾರ ಸುದ್ದಿ ಗೋಷ್ಠಿಯಲ್ಲಿ ಕಿಡಿಕಾರಿದರು.
“ರಾಜ್ಯದಲ್ಲಿ 2.74 ಲಕ್ಷ ಹುದ್ದೆಗಳು ಖಾಲಿ ಇವೆ. ಆದರೀಗ ರಾಜ್ಯ ಸರಕಾರ 52 ಸಾವಿರ ಹುದ್ದೆಗಳನ್ನು ಹಳೇ ಮೀಸಲು ಅನ್ವ ಯ ಭರ್ತಿ ಮಾಡುವುದಾಗಿ ತಿಳಿಸಿದೆ. ಇದರಿಂದ 1600 ಪರಿಶಿಷ್ಟ ಪಂಗಡ ಮತ್ತು 2 ಸಾವಿರ ಪರಿಶಿಷ್ಟ ಜಾತಿಯ ಹುದ್ದೆಗಳು ವಂಚಿತವಾಗಲಿವೆ” ಎಂದು ಹೇಳಿದರು.

“ಬಸವರಾಜ ಬೊಮ್ಮಾಯಿ ಮುಖ್ಯ ಮಂತ್ರಿಗಳಾಗಿದ್ದಾಗ 2022ರಲ್ಲಿ ಪರಿಶಿಷ್ಟ ಜಾತಿಗೆ ಶೇ.2 ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ.4 ಮೀಸಲು ಹೆಚ್ಚಿಸಿ ಶೇ.50ರಷ್ಟಿದ್ದ ಮೀಸಲನ್ನು ಒಟ್ಟಾರೆ ಶೇ.56ಕ್ಕೆ ಹೆಚ್ಚಳ ಮಾಡಿದರು. ಆದರೆ ಸಾಂವಿಧಾನಿಕ ಸಿಂಧುತ್ವ ಕೊಡಿಸುವ ಯಾವ ಮಾರ್ಗಗಳನ್ನು ಅನು ಸರಿಸಲಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.2023ರಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ರಾಜ್ಯದ ಸಂಸದರು ಪ್ರಧಾನ ಮಂತ್ರಿಗಳಿಗೆ ಮೀಸಲು ಹೆಚ್ಚಳದ ಬಗ್ಗೆ ಒತ್ತಡ ಹಾಕಬೇಕು. ಮೈಸೂರು ಸಂಸದ ಯದುವೀರ್, ಚಾಮರಾಜನಗರ ಹೆಚ್ಚು ಕಾಳಜಿ ವಹಿಸಬೇಕು. ಇಲ್ಲದಿದ್ದರೆ ಸಂಸದ ಸುನೀಲ್ ಬೋಸ್ ಈ ಬಗ್ಗೆ ಸಮುದಾಯ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದೆ.ವಿ.ಎಸ್.ಉಗ್ರಪ್ಪ, ಮಾಜಿ ಸಂಸದ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.

9ನೇ ಶಡ್ಯೂಲ್ ಗೆ ಸೇರಿಸುವ ಸರಕಾರ ಕೂಡ ಇದರ ಬಗ್ಗೆ ಮುತುವರ್ಜಿ ಎಸ್‌ಟಿ ಸಮುದಾಯಗಳು ಅನ್ಯಾಯಕ್ಕೆ ಪ್ರಯತ್ನ ಮಾಡಲಿಲ್ಲ. ಇದರಿಂದ ಎಸ್‌ಸಿ, ಸಮುದಾಯಗಳ ಸಚಿವರು, ಶಾಸಕರು ಒಳಗಾಗಿವೆ. ಇದರ ಬಗ್ಗೆ ಧ್ವನಿ ಎತ್ತಬೇಕಿದ್ದ ಮೌನ ವಹಿಸಿರುವುದು ಅತ್ಯಂತ ದುರದೃಷ್ಟ ಕರ” ಎಂದು ಬೇಸರ ವ್ಯಕ್ತಪಡಿಸಿದರು.ಅಧಿಕಾರ ಬೇಕಾದರೆ ದಲಿತರು ಎನ್ನುವ ಎಸ್‌ಸಿ, ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು, ಅನ್ಯಾಯದ ವಿರುದ್ಧ ಯಾಕೆ ಧ್ವನಿ ಎತ್ತುತ್ತಿಲ್ಲ? ಎಂದು ಪ್ರಶ್ನಿಸಿದರು. ಎಸ್‌ಟಿಗಳಿಗೆ ಆಗುತ್ತಿರುವ
ಸುದ್ದಿಗೋಷ್ಠಿಯಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾ ರಾಜ್ಯಾಧ್ಯಕ್ಷ ನರಸಿಂಹಯ್ಯ, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ರಾಮಚಂದ್ರು, ಹಿನಕಲ್ ಕೆಂಪನಾಯಕ, ಕೆ.ಸಣ್ಣಯ್ಯ ನಾಯಕ, ನಾಯಕ ಮತ್ತಿತರರು ಇದ್ದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!