ಪುಷ್ಪಾಗೆ ಎಚ್ಚರಿಸಿದ ದೀಪಿಕಾ ದಾಸ್.

ಪುಷ್ಪಾ ಅವರು ದೀಪಿಕಾ ದಾಸ್ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗಳು ಕನ್ನಡ ಚಿತ್ರರಂಗದಲ್ಲಿ ದೊಡ್ಡ ಸುದ್ದಿಯಾಗಿದೆ. ದೀಪಿಕಾ ಅವರು ಪುಷ್ಪಾ ಅವರ ಕುಟುಂಬದವರೇ ಆದರೂ, ಪುಷ್ಪಾ ಅವರ ಟೀಕೆಗಳಿಗೆ ದೀಪಿಕಾ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಪುಷ್ಪಾ ಅವರು ದೀಪಿಕಾ ಹೇಳಿಕೆಗೆ ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಯಶ್ ತಾಯಿ, ನಿರ್ಮಾಪಕಿ ಪುಷ್ಪಾ ಅವರು ‘ಕೊತ್ತಲವಾಡಿ’ ಸಿನಿಮಾ ರಿಲೀಸ್​ಗೂ ಮೊದಲು ಹಾಗೂ ಆ ಬಳಿಕ ನಿರಂತರವಾಗಿ ಸಂದರ್ಶನಗಳನ್ನು ನೀಡುತ್ತಲೇ ಬರುತ್ತಿದ್ದಾರೆ. ಅವರು ಈ ವೇಳೆ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಅವರು ಯಶ್ ಬಗ್ಗೆಯೇ ನಾನಾ ರೀತಿಯ ಹೇಳಿಕೆ ನೀಡಿದ್ದಾರೆ. ಅದೇ ರೀತಿ ಪುಷ್ಪಾ ಅವರು ನಟಿ ದೀಪಿಕಾ ದಾಸ್ ಬಗ್ಗೆ ಟೀಕೆ ಮಾಡಿದ್ದರು. ಇದು ದೀಪಿಕಾ ಅವರನ್ನು ಕೆರಳಿಸಿದೆ. ದೀಪಿಕಾ ಈ ಬಗ್ಗೆ ಓಪನ್ ಆಗಿ ಪೋಸ್ಟ್ ಹಾಕಿದ್ದಾರೆ. ದೀಪಿಕಾ ದಾಸ್​ಗೆ ಪುಷ್ಪಾ ಅವರು ದೊಡ್ಡಮ್ಮ ಆಗಬೇಕು. ಪುಷ್ಪಾ ಹಾಗೂ ದೀಪಿಕಾ ದಾಸ್ ತಾಯಿ ಸೋದರಿಯರು. ಹೀಗಾಗಿ, ಸಂಬಂಧದಲ್ಲಿ ಯಶ್ ಹಾಗೂ ದೀಪಿಕಾ ಅಣ್ಣ-ತಂಗಿ. ದೀಪಿಕಾ ಮಾತ್ರ ಎಲ್ಲಿಯೂ ಯಶ್ ನನ್ನ ಅಣ್ಣ ಎಂದು ಹೇಳಿಕೊಂಡು ಓಡಾಡಿಲ್ಲ.

ಪುಷ್ಪಾ ಹೇಳಿದ್ದೇನು? ಇತ್ತೀಚೆಗೆ ಅಶ್ವವೇಗ ಯೂಟ್ಯೂಬ್ ಚಾನೆಲ್​ನಲ್ಲಿ ಮಾತನಾಡುವಾಗ, ದೀಪಿಕಾಗೆ ಅವಕಾಶ ಕೊಡ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಪುಷ್ಪಾ, ಅವರನ್ನು ಹೀಯಾಳಿಸಿದ್ದರು. ‘ದೀಪಿಕಾ ದಾಸ್ ಹಾಗೂ ನಮಗೆ ಆಗಿ ಬರಲ್ಲ. ಅವಳು ಯಾವ ಹೀರೋಯಿನ್ ಅಂತ ಆಯ್ಕೆ ಮಾಡಿಕೊಳ್ಳಬೇಕು? ಅವಳು ಏನು ಸಾಧನೆ ಮಾಡಿದ್ದಾಳೆ? ಅವರನ್ನು ನಾವು ದೂರದಲ್ಲೇ ಇಟ್ಟಿದ್ದೇವೆ’ ಎಂದು ಪುಷ್ಪಾ ಹೇಳಿದ್ದರು. ಟಿವಿ9 ಕನ್ನಡದ ಜೊತೆ ಮಾತನಾಡುವಾಗ, ‘ದೀಪಿಕಾಗೆ ನನ್ನ ಕಂಡರೆ ಭಯ. ಅವಳು ನನ್ನ ಹತ್ತಿರ ಹೆಚ್ಚು ಮಾತನಾಡಲ್ಲ’ ಎಂದಿದ್ದರು.

 

ದೀಪಿಕಾ ದಾಸ್ ಪ್ರತಿಕ್ರಿಯೆ ;ದೀಪಿಕಾ ದಾಸ್ ಅವರು ಕನ್ನಡ ಕಿರುತೆರೆ ನಟಿಯಾಗಿ ಗಮನ ಸೆಳೆದಿದ್ದಾರೆ. ಅವರು ‘ನಾಗಿಣಿ’ ಧಾರಾವಾಹಿಯಲ್ಲಿ ಕಾಣಿಸಿಕೊಂಡು ಸಾಕಷ್ಟು ಗಮನ ಸೆಳೆದರು. ಅಲ್ಲದೆ, ಬಿಗ್ ಬಾಸ್ ​ಶೋಗೆ ಅವರು ಎರಡು ಬಾರಿ ಆಗಮಿಸಿದ್ದರು. ಈ ಮೂಲಕ ದೊಡ್ಡ ಹೆಸರು ಮಾಡಿದ್ದಾರೆ. ಅವರು ಈಗ ವಿವಾಹ ಆಗಿ ಸಂಸಾರದ ಕಡೆ ಗಮನ ಹರಿಸಿದ್ದಾರೆ. ಹೀಗಿರುವಾಗಲೇ ದೀಪಿಕಾ ಬಗ್ಗೆ ಪುಷ್ಪಾ ಈ ರೀತಿಯ ಹೇಳಿಕೆ ನೀಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರೋ ದೀಪಿಕಾ ದಾಸ್, ‘ಹೊಸ ಕಲಾವಿದರನ್ನು ಬೆಳೆಸೋ ಜನರು ಕಲಾವಿದರಿಗೆ ಬೆಲೆ ಕೊಡೋದ್ದನ್ನು ಕಲಿತಿರಬೇಕು. ಇಲ್ಲಿವರೆಗೂ ಯಾರ ಹೆಸರನ್ನು ಹೇಳಿಕೊಂಡು ಬಂದಿಲ್ಲ ಮುಂದೇನೂ ಬರಲ್ಲ. ಕೆಲವರಿಗೆ ಬೆಲೆಕೊಟ್ಟ ಮಾತ್ರಕ್ಕೆ ಯಾರಿಗೂ ಯಾರ ಮೇಲೂ ಭಯ ಇದೆ ಅಂತ ಅಲ್ಲ. ಅದು ಅಮ್ಮ ಆದರೂ ಸರಿ, ದೊಡ್ಡಮ್ಮ ಆದರೂ ಸರಿ ಅಥವಾ ಪುಷ್ಪಮ್ಮ ಆದರೂ ಸರಿ. ವಿಥ್‌ ಡ್ಯೂ ರೆಸ್ಪೆಕ್ಟ್ ಸ್ಟಾ‌ರ್ ಆಫ್ ಅವರ್ ಇಂಡಸ್ಟ್ರಿ. ನಾನು ಯಾವ ದೊಡ್ಡ ನಟಿ ಅಲ್ಲದಿದ್ದರೂ, ಏನು ಸಾಧನೆ ಮಾಡದಿದ್ದರೂ ನನ್ನ ಬಗ್ಗೆ ಹೀನಾಯವಾಗಿ ಮಾತನಾಡುವ ಯೋಗ್ಯತೆ ಯಾರಿಗೂ ಇಲ್ಲ’ ಎಂದು ದೀಪಿಕಾ ಎಚ್ಚರಿಸಿದ್ದಾರೆ.

Related Posts

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

Yash: ಮುಂಬೈನಲ್ಲಿ ಪತ್ನಿ ರಾಧಿಕಾ ಪಂಡಿತ್ ಜೊತೆ ಕಾಣಿಸಿಕೊಂಡ ಯಶ್ ಅವರ ಹೊಸ ಅವತಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಯಶ್ ಭಾರತೀಯ ಸಿನೆಮಾ ಲೋಕವೇ ಹಿಂತಿರುಗಿ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಸಿನಿಮಾದ ಬಳಿಕ…

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!