ಪುಷ್ಪಾಗೆ ಎಚ್ಚರಿಸಿದ ದೀಪಿಕಾ ದಾಸ್.

ಪುಷ್ಪಾ ಅವರು ದೀಪಿಕಾ ದಾಸ್ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗಳು ಕನ್ನಡ ಚಿತ್ರರಂಗದಲ್ಲಿ ದೊಡ್ಡ ಸುದ್ದಿಯಾಗಿದೆ. ದೀಪಿಕಾ ಅವರು ಪುಷ್ಪಾ ಅವರ ಕುಟುಂಬದವರೇ ಆದರೂ, ಪುಷ್ಪಾ ಅವರ ಟೀಕೆಗಳಿಗೆ ದೀಪಿಕಾ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಪುಷ್ಪಾ ಅವರು ದೀಪಿಕಾ ಹೇಳಿಕೆಗೆ ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಯಶ್ ತಾಯಿ, ನಿರ್ಮಾಪಕಿ ಪುಷ್ಪಾ ಅವರು ‘ಕೊತ್ತಲವಾಡಿ’ ಸಿನಿಮಾ ರಿಲೀಸ್​ಗೂ ಮೊದಲು ಹಾಗೂ ಆ ಬಳಿಕ ನಿರಂತರವಾಗಿ ಸಂದರ್ಶನಗಳನ್ನು ನೀಡುತ್ತಲೇ ಬರುತ್ತಿದ್ದಾರೆ. ಅವರು ಈ ವೇಳೆ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಅವರು ಯಶ್ ಬಗ್ಗೆಯೇ ನಾನಾ ರೀತಿಯ ಹೇಳಿಕೆ ನೀಡಿದ್ದಾರೆ. ಅದೇ ರೀತಿ ಪುಷ್ಪಾ ಅವರು ನಟಿ ದೀಪಿಕಾ ದಾಸ್ ಬಗ್ಗೆ ಟೀಕೆ ಮಾಡಿದ್ದರು. ಇದು ದೀಪಿಕಾ ಅವರನ್ನು ಕೆರಳಿಸಿದೆ. ದೀಪಿಕಾ ಈ ಬಗ್ಗೆ ಓಪನ್ ಆಗಿ ಪೋಸ್ಟ್ ಹಾಕಿದ್ದಾರೆ. ದೀಪಿಕಾ ದಾಸ್​ಗೆ ಪುಷ್ಪಾ ಅವರು ದೊಡ್ಡಮ್ಮ ಆಗಬೇಕು. ಪುಷ್ಪಾ ಹಾಗೂ ದೀಪಿಕಾ ದಾಸ್ ತಾಯಿ ಸೋದರಿಯರು. ಹೀಗಾಗಿ, ಸಂಬಂಧದಲ್ಲಿ ಯಶ್ ಹಾಗೂ ದೀಪಿಕಾ ಅಣ್ಣ-ತಂಗಿ. ದೀಪಿಕಾ ಮಾತ್ರ ಎಲ್ಲಿಯೂ ಯಶ್ ನನ್ನ ಅಣ್ಣ ಎಂದು ಹೇಳಿಕೊಂಡು ಓಡಾಡಿಲ್ಲ.

ಪುಷ್ಪಾ ಹೇಳಿದ್ದೇನು? ಇತ್ತೀಚೆಗೆ ಅಶ್ವವೇಗ ಯೂಟ್ಯೂಬ್ ಚಾನೆಲ್​ನಲ್ಲಿ ಮಾತನಾಡುವಾಗ, ದೀಪಿಕಾಗೆ ಅವಕಾಶ ಕೊಡ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಪುಷ್ಪಾ, ಅವರನ್ನು ಹೀಯಾಳಿಸಿದ್ದರು. ‘ದೀಪಿಕಾ ದಾಸ್ ಹಾಗೂ ನಮಗೆ ಆಗಿ ಬರಲ್ಲ. ಅವಳು ಯಾವ ಹೀರೋಯಿನ್ ಅಂತ ಆಯ್ಕೆ ಮಾಡಿಕೊಳ್ಳಬೇಕು? ಅವಳು ಏನು ಸಾಧನೆ ಮಾಡಿದ್ದಾಳೆ? ಅವರನ್ನು ನಾವು ದೂರದಲ್ಲೇ ಇಟ್ಟಿದ್ದೇವೆ’ ಎಂದು ಪುಷ್ಪಾ ಹೇಳಿದ್ದರು. ಟಿವಿ9 ಕನ್ನಡದ ಜೊತೆ ಮಾತನಾಡುವಾಗ, ‘ದೀಪಿಕಾಗೆ ನನ್ನ ಕಂಡರೆ ಭಯ. ಅವಳು ನನ್ನ ಹತ್ತಿರ ಹೆಚ್ಚು ಮಾತನಾಡಲ್ಲ’ ಎಂದಿದ್ದರು.

 

ದೀಪಿಕಾ ದಾಸ್ ಪ್ರತಿಕ್ರಿಯೆ ;ದೀಪಿಕಾ ದಾಸ್ ಅವರು ಕನ್ನಡ ಕಿರುತೆರೆ ನಟಿಯಾಗಿ ಗಮನ ಸೆಳೆದಿದ್ದಾರೆ. ಅವರು ‘ನಾಗಿಣಿ’ ಧಾರಾವಾಹಿಯಲ್ಲಿ ಕಾಣಿಸಿಕೊಂಡು ಸಾಕಷ್ಟು ಗಮನ ಸೆಳೆದರು. ಅಲ್ಲದೆ, ಬಿಗ್ ಬಾಸ್ ​ಶೋಗೆ ಅವರು ಎರಡು ಬಾರಿ ಆಗಮಿಸಿದ್ದರು. ಈ ಮೂಲಕ ದೊಡ್ಡ ಹೆಸರು ಮಾಡಿದ್ದಾರೆ. ಅವರು ಈಗ ವಿವಾಹ ಆಗಿ ಸಂಸಾರದ ಕಡೆ ಗಮನ ಹರಿಸಿದ್ದಾರೆ. ಹೀಗಿರುವಾಗಲೇ ದೀಪಿಕಾ ಬಗ್ಗೆ ಪುಷ್ಪಾ ಈ ರೀತಿಯ ಹೇಳಿಕೆ ನೀಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರೋ ದೀಪಿಕಾ ದಾಸ್, ‘ಹೊಸ ಕಲಾವಿದರನ್ನು ಬೆಳೆಸೋ ಜನರು ಕಲಾವಿದರಿಗೆ ಬೆಲೆ ಕೊಡೋದ್ದನ್ನು ಕಲಿತಿರಬೇಕು. ಇಲ್ಲಿವರೆಗೂ ಯಾರ ಹೆಸರನ್ನು ಹೇಳಿಕೊಂಡು ಬಂದಿಲ್ಲ ಮುಂದೇನೂ ಬರಲ್ಲ. ಕೆಲವರಿಗೆ ಬೆಲೆಕೊಟ್ಟ ಮಾತ್ರಕ್ಕೆ ಯಾರಿಗೂ ಯಾರ ಮೇಲೂ ಭಯ ಇದೆ ಅಂತ ಅಲ್ಲ. ಅದು ಅಮ್ಮ ಆದರೂ ಸರಿ, ದೊಡ್ಡಮ್ಮ ಆದರೂ ಸರಿ ಅಥವಾ ಪುಷ್ಪಮ್ಮ ಆದರೂ ಸರಿ. ವಿಥ್‌ ಡ್ಯೂ ರೆಸ್ಪೆಕ್ಟ್ ಸ್ಟಾ‌ರ್ ಆಫ್ ಅವರ್ ಇಂಡಸ್ಟ್ರಿ. ನಾನು ಯಾವ ದೊಡ್ಡ ನಟಿ ಅಲ್ಲದಿದ್ದರೂ, ಏನು ಸಾಧನೆ ಮಾಡದಿದ್ದರೂ ನನ್ನ ಬಗ್ಗೆ ಹೀನಾಯವಾಗಿ ಮಾತನಾಡುವ ಯೋಗ್ಯತೆ ಯಾರಿಗೂ ಇಲ್ಲ’ ಎಂದು ದೀಪಿಕಾ ಎಚ್ಚರಿಸಿದ್ದಾರೆ.

Related Posts

ರಾಮ್‌ಚರಣ್‌, ಕಿಚ್ಚ ಸುದೀಪ್‌ ಬಾಡಿಗಾರ್ಡ್‌ಗಳ ನಂತರ ಈಗ ಯಶ್‌ ಅಂಗರಕ್ಷಕನ ಹವಾ!

ಚಿತ್ರರಂಗದಲ್ಲಿ ನೆಚ್ಚಿನ ನಟರ ಜೊತೆಗೆ ಅವರ ಪರ್ಸನಲ್‌ ಬಾಡಿಗಾರ್ಡ್‌ಗಳೂ ಇತ್ತೀಚೆಗೆ ಭಾರಿ ಸದ್ದು ಮಾಡುತ್ತಿದ್ದು, ಅಭಿಮಾನಿಗಳಲ್ಲಿ ಸಖತ್ ಟ್ರೆಂಡ್ ಸೃಷ್ಟಿಸುತ್ತಿದ್ದಾರೆ. ನಟ ರಾಮ್‌ ಚರಣ್‌ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾ ‘ಪೆದ್ದಿ’ ಪ್ರಚಾರದ ವೇಳೆಯಲ್ಲಿ ಅವರ ಪರ್ಸನಲ್ ಸೆಕ್ಯೂರಿಟಿ ಗಾರ್ಡ್, ಆಫ್ರಿಕಾ…

ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ !

  ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿರುವ ‘ರಾಮಾಯಣ’ ಟ್ರೇಲರ್ ಭಾರಿ ಧೂಳೆಬ್ಬಿಸುತ್ತಿದೆ. ರಾವಣನಾಗಿ ರಾಕಿಂಗ್ ಸ್ಟಾರ್ ಯಶ್ ಅವರ ರೌದ್ರಾವತಾರದ ಎಂಟ್ರಿಗೆ ಪ್ರೇಕ್ಷಕರು ಥಿಯೇಟರ್‌ನಲ್ಲಿ ಹುಚ್ಚೆದ್ದು ಕುಣಿದಿದ್ದು, ಇಡೀ ಟ್ರೇಲರ್ ಯಶ್ ಅವರ ಅಪ್ರತಿಮ ಡಾಮಿನೇಷನ್‌ನಿಂದ ಕೂಡಿದೆ ಎಂದು ಫ್ಯಾನ್ಸ್ ಕೊಂಡಾಡುತ್ತಿದ್ದಾರೆ. ‘ರಾಮಾಯಣ’ ಟ್ರೇಲರ್…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!