ಪ್ರೀ ಬುಕ್ಕಿಂಗ್​ ನಲ್ಲಿ ದಾಖಲೆ ಮಾಡಿದ ರಜನಿ​ಯ ”ಕೂಲಿ” ! ನಾಳೆ ತಲೈವಾ ಅಭಿಮಾನಿಗಳಿಗೆ ಹಬ್ಬದ ಸಂಭ್ರಮ.

ನಾಳೆ ತಲೈವಾ ಅಭಿಮಾನಿಗಳಿಗೆ ಹಬ್ಬದ ಸಂಭ್ರಮ. ಸೂಪರ್ ಸ್ಟಾರ್ ರಜನಿಕಾಂತ್ ಅವರ ಸಿನಿಮಾಗಳು ಎಂದರೆ ಎಲ್ಲರಿಗೂ ಸಿಕ್ಕಾಪಟ್ಟೆ ಇಷ್ಟ. ರಜನಿಕಾಂತ್ ಹೊಸ ಸಿನಿಮಾ ಅನೌನ್ಸ್ ಆದ್ರೆ ಸಾಕು ಅಭಿಮಾನಿಗಳ ಖುಷಿಗೆ ಪಾರವೇ ಇಲ್ಲದಂತೆ ಆಗುತ್ತೆ. ಅಷ್ಟರ ಮಟ್ಟಿಗೆ ಥಿಯೇಟರ್​ಗಳಲ್ಲಿ ಅವರ ಅಭಿಮಾನಿಗಳಂತೂ ರಜನಿಯವರ ಸ್ಟೈಲ್, ಡೈಲಾಗ್​ಗೆ ಕುಣಿದು ಕುಪ್ಪಳಿಸುತ್ತಿರುತ್ತಾರೆ.

ಇದಕ್ಕೆ ಸಾಕ್ಷಿ ಎಂಬಂತೆ ನಾಳೆ ರಜನಿಕಾಂತ್ ನಟನೆಯಲ್ಲಿ ಬಹುನಿರೀಕ್ಷಿತ ಕೂಲಿ ಸಿನಿಮಾ ರಿಲೀಸ್​ ಆಗುತ್ತಿದೆ. ಸ್ಟಾರ್​ ಹೀರೋನನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಿನ ಮೇಲೆ ನಿಂತಿದ್ದಾರೆ. ಹೌದು, ಲೋಕೇಶ್ ಕನಗರಾಜ್ ನಿರ್ದೇಶನದಲ್ಲಿ ಮೂಡಿ ಬರುತ್ತಿರೋ ಸಿನಿಮಾ ಆಗಸ್ಟ್​ 14ರಂದು ವಿಶ್ವದಾದ್ಯಂತ ರಿಲೀಸ್​ ಆಗುತ್ತಿದೆ.

ರಜನಿಕಾಂತ್​ ನಾಯಕನಾಗಿ ದಕ್ಷಿಣ ಹಾಗೂ ಉತ್ತರ ಭಾರತದ ಕಲಾವಿದರು ಅಭಿನಯಿಸಿರೋ ಕೂಲಿ ಸಿನಿಮಾ ತೆರೆಗೆ ಅಪ್ಪಳಿಸೋದಕ್ಕೆ ಸಜ್ಜಾಗಿದೆ. ಸದ್ಯ ಎಲ್ಲೆಡೆ ಕೂಲಿ ಮೇನಿಯಾ ಕಂಡು ಬಂದಿದೆ. ವಿಶೇಷ ಏನೆಂದರೆ ಕೂಲಿ ಸಿನಿಮಾದಲ್ಲಿ ಸ್ಯಾಂಡಲ್​ವುಡ್​ ಸ್ಟಾರ್ ನಟ ಉಪೇಂದ್ರ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್​ ನಟಿಸಿದ್ದಾರೆ.

ಈಗಾಗಲೇ ಚೆನ್ನೈನಲ್ಲಿ ಫಸ್ಟ್​ ಡೇ ಫಸ್ಟ್​ ಶೋಗಳು ಕಂಪ್ಲೀಟ್ ಸೋಲ್ಡ್​ ಔಟ್​ ಆಗಿವೆ. ಮಲ್ಟಿಪ್ಲೆಕ್ಸ್​​ವೊಂದರಲ್ಲೇ ಮೊದಲ ದಿನ ಒಟ್ಟು 56 ಶೋಗಳನ್ನು ಇಡಲಾಗಿದ್ದು, ಅಂದರೆ ಅಷ್ಟು ಶೋಗಳ ಟಿಕೆಟ್​ ಮಾರಾಟವಾಗಿದೆ. ಇನ್ನೂ, ತಮಿಳುನಾಡು ಸರ್ಕಾರ ಥೇಟರ್​ಗಳಲ್ಲಿ ಗರಿಷ್ಠ 150ರೂ, ಮಲ್ಟಿಪ್ಲೆಕ್ಸ್​ಗಳಲ್ಲಿ 160ರೂ ಹಾಗೂ ಐಮ್ಯಾಕ್ಸ್​ಗಳಲ್ಲಿ 480 ರೂ ಟಿಕೆಟ್​​ ದರವನ್ನು ನಿಗದಿ ಪಡಿಸಲಾಗಿದೆ.

ಅಮೆರಿಕಾದಲ್ಲಿ ಕೂಲಿ ಪ್ರೀ ಬುಕ್ಕಿಂಗ್​ ದಾಖಲೆ
ತಮಿಳು ಸಿನಿಮಾ ಇತಿಹಾಸದಲ್ಲೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಕೂಲಿ ಸಿನಿಮಾ ಪ್ರಿ ಬುಕ್ಕಿಂಗ್​ನಿಂದಲೇ 2 ಮಿಲಿಯನ್​ ಡಾಲರ್​ ಅಂದರೆ 17.55 ಕೋಟಿಗೂ ಅಧಿಕ ಗಳಿಕೆ ಮಾಡಿದೆ. ಇದನ್ನೂ ನಿರ್ಮಾಣ ಸಂಸ್ಥೆ ಸನ್​ ಪಿಕ್ಚರ್ಸ್​ ಅಧಿಕೃತವಾಗಿ ಘೋಷಣೆ ಮಾಡಿದೆ.

 

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು