ಪ್ರೀ ಬುಕ್ಕಿಂಗ್​ ನಲ್ಲಿ ದಾಖಲೆ ಮಾಡಿದ ರಜನಿ​ಯ ”ಕೂಲಿ” ! ನಾಳೆ ತಲೈವಾ ಅಭಿಮಾನಿಗಳಿಗೆ ಹಬ್ಬದ ಸಂಭ್ರಮ.

ನಾಳೆ ತಲೈವಾ ಅಭಿಮಾನಿಗಳಿಗೆ ಹಬ್ಬದ ಸಂಭ್ರಮ. ಸೂಪರ್ ಸ್ಟಾರ್ ರಜನಿಕಾಂತ್ ಅವರ ಸಿನಿಮಾಗಳು ಎಂದರೆ ಎಲ್ಲರಿಗೂ ಸಿಕ್ಕಾಪಟ್ಟೆ ಇಷ್ಟ. ರಜನಿಕಾಂತ್ ಹೊಸ ಸಿನಿಮಾ ಅನೌನ್ಸ್ ಆದ್ರೆ ಸಾಕು ಅಭಿಮಾನಿಗಳ ಖುಷಿಗೆ ಪಾರವೇ ಇಲ್ಲದಂತೆ ಆಗುತ್ತೆ. ಅಷ್ಟರ ಮಟ್ಟಿಗೆ ಥಿಯೇಟರ್​ಗಳಲ್ಲಿ ಅವರ ಅಭಿಮಾನಿಗಳಂತೂ ರಜನಿಯವರ ಸ್ಟೈಲ್, ಡೈಲಾಗ್​ಗೆ ಕುಣಿದು ಕುಪ್ಪಳಿಸುತ್ತಿರುತ್ತಾರೆ.

ಇದಕ್ಕೆ ಸಾಕ್ಷಿ ಎಂಬಂತೆ ನಾಳೆ ರಜನಿಕಾಂತ್ ನಟನೆಯಲ್ಲಿ ಬಹುನಿರೀಕ್ಷಿತ ಕೂಲಿ ಸಿನಿಮಾ ರಿಲೀಸ್​ ಆಗುತ್ತಿದೆ. ಸ್ಟಾರ್​ ಹೀರೋನನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಿನ ಮೇಲೆ ನಿಂತಿದ್ದಾರೆ. ಹೌದು, ಲೋಕೇಶ್ ಕನಗರಾಜ್ ನಿರ್ದೇಶನದಲ್ಲಿ ಮೂಡಿ ಬರುತ್ತಿರೋ ಸಿನಿಮಾ ಆಗಸ್ಟ್​ 14ರಂದು ವಿಶ್ವದಾದ್ಯಂತ ರಿಲೀಸ್​ ಆಗುತ್ತಿದೆ.

ರಜನಿಕಾಂತ್​ ನಾಯಕನಾಗಿ ದಕ್ಷಿಣ ಹಾಗೂ ಉತ್ತರ ಭಾರತದ ಕಲಾವಿದರು ಅಭಿನಯಿಸಿರೋ ಕೂಲಿ ಸಿನಿಮಾ ತೆರೆಗೆ ಅಪ್ಪಳಿಸೋದಕ್ಕೆ ಸಜ್ಜಾಗಿದೆ. ಸದ್ಯ ಎಲ್ಲೆಡೆ ಕೂಲಿ ಮೇನಿಯಾ ಕಂಡು ಬಂದಿದೆ. ವಿಶೇಷ ಏನೆಂದರೆ ಕೂಲಿ ಸಿನಿಮಾದಲ್ಲಿ ಸ್ಯಾಂಡಲ್​ವುಡ್​ ಸ್ಟಾರ್ ನಟ ಉಪೇಂದ್ರ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್​ ನಟಿಸಿದ್ದಾರೆ.

ಈಗಾಗಲೇ ಚೆನ್ನೈನಲ್ಲಿ ಫಸ್ಟ್​ ಡೇ ಫಸ್ಟ್​ ಶೋಗಳು ಕಂಪ್ಲೀಟ್ ಸೋಲ್ಡ್​ ಔಟ್​ ಆಗಿವೆ. ಮಲ್ಟಿಪ್ಲೆಕ್ಸ್​​ವೊಂದರಲ್ಲೇ ಮೊದಲ ದಿನ ಒಟ್ಟು 56 ಶೋಗಳನ್ನು ಇಡಲಾಗಿದ್ದು, ಅಂದರೆ ಅಷ್ಟು ಶೋಗಳ ಟಿಕೆಟ್​ ಮಾರಾಟವಾಗಿದೆ. ಇನ್ನೂ, ತಮಿಳುನಾಡು ಸರ್ಕಾರ ಥೇಟರ್​ಗಳಲ್ಲಿ ಗರಿಷ್ಠ 150ರೂ, ಮಲ್ಟಿಪ್ಲೆಕ್ಸ್​ಗಳಲ್ಲಿ 160ರೂ ಹಾಗೂ ಐಮ್ಯಾಕ್ಸ್​ಗಳಲ್ಲಿ 480 ರೂ ಟಿಕೆಟ್​​ ದರವನ್ನು ನಿಗದಿ ಪಡಿಸಲಾಗಿದೆ.

ಅಮೆರಿಕಾದಲ್ಲಿ ಕೂಲಿ ಪ್ರೀ ಬುಕ್ಕಿಂಗ್​ ದಾಖಲೆ
ತಮಿಳು ಸಿನಿಮಾ ಇತಿಹಾಸದಲ್ಲೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಕೂಲಿ ಸಿನಿಮಾ ಪ್ರಿ ಬುಕ್ಕಿಂಗ್​ನಿಂದಲೇ 2 ಮಿಲಿಯನ್​ ಡಾಲರ್​ ಅಂದರೆ 17.55 ಕೋಟಿಗೂ ಅಧಿಕ ಗಳಿಕೆ ಮಾಡಿದೆ. ಇದನ್ನೂ ನಿರ್ಮಾಣ ಸಂಸ್ಥೆ ಸನ್​ ಪಿಕ್ಚರ್ಸ್​ ಅಧಿಕೃತವಾಗಿ ಘೋಷಣೆ ಮಾಡಿದೆ.

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!