ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ವಿವಾಹ

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ಮದುವೆ ಫೆಬ್ರವರಿ 26ರಂದು ನಡೆಯಲಿದೆ. ಕುಟುಂಬದವರು ಮತ್ತು ಕೆಲವೇ ಕೆಲವು ಆಪ್ತರು ಮಾತ್ರ ಈ ಸೆಲೆಬ್ರಿಟಿ ಮದುವೆಗೆ ಹಾಜರಿ ಹಾಕಲಿದ್ದಾರೆ. ಮದುವೆ ತಯಾರಿಯಲ್ಲಿ ಇರುವ ರಶ್ಮಿಕಾ, ವಿಜಯ್ ಅವರು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಮದುವೆ ವಿಷಯ ಈಗ ಗುಟ್ಟಾಗಿ ಉಳಿದಿಲ್ಲ. ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿರುವ ಅವರು ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರೆ. ಅದಕ್ಕಾಗಿ ಸಕಲ ಸಿದ್ಧತೆ ನಡೆದಿದೆ. ಈಗಾಗಲೇ ಸಿನಿಮಾ ಕೆಲಸಗಳನ್ನು ಬದಿಗಿಟ್ಟು, ಮದುವೆ ತಯಾರಿಯಲ್ಲಿ ಅವರಿಬ್ಬರು ತೊಡಗಿಕೊಂಡಿದ್ದಾರೆ. ಸದ್ಯಕ್ಕಂತೂ ಸಖತ್ ಗಡಿಬಿಡಿ ಮಾಡುತ್ತಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಒಂದು ವಿಡಿಯೋ ವೈರಲ್ ಆಗಿದೆ. ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ.

ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ವಿವಾಹ ನಡೆಯಲಿ. ಮದುವೆ ಆಮಂತ್ರಣ ಪತ್ರಿಕೆ ವೈರಲ್ ಆಗಿದೆ. ಹಾಗಿದ್ದರೂ ಕೂಡ ಅವರು ಸಾರ್ವಜನಿಕವಾಗಿ ಈ ಬಗ್ಗೆ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ. ಕೇವಲ ಕುಟುಂಬದವರು ಮತ್ತು ಆಪ್ತರ ಸಮ್ಮುಖದಲ್ಲಿ ಮದುವೆ ನಡೆಯಲಿದೆ.

ಹಲವು ಸಿನಿಮಾಗಳನ್ನು ಒಪ್ಪಿಕೊಂಡಿರುವ ರಶ್ಮಿಕಾ ಮಂದಣ್ಣ ಅವರು ಈಗ ಬ್ರೇಕ್ ತೆಗೆದುಕೊಂಡಿದ್ದಾರೆ. ವಿಜಯ್ ದೇವರಕೊಂಡ ಕೂಡ ಮದುವೆ ಸಲುವಾಗಿ ಬಿಡುವು ಮಾಡಿಕೊಂಡಿದ್ದಾರೆ. ಅವರಿಬ್ಬರು ಈಗ ಹೈದರಾಬಾದ್​ನಿಂದ ಬೇರೆ ಕಡೆಗೆ ಹಾರಿದ್ದಾರೆ. ವಿಮಾನ ನಿಲ್ದಾಣಕ್ಕೆ ಪ್ರತ್ಯೇಕವಾಗಿ ಬಂದ ಅವರು ಪಾಪಪಾಜಿಗಳ ಕ್ಯಾಮೆರಾದಲ್ಲಿ ಸೆರೆ ಆಗಿದ್ದಾರೆ.

ಸಾಮಾನ್ಯವಾಗಿ ವಿಮಾನ ನಿಲ್ದಾಣದಲ್ಲಿ ಪಾಪರಾಜಿಗಳನ್ನು ನೋಡಿದಾಗ ರಶ್ಮಿಕಾ ಮಂದಣ್ಣ ಅವರು ಪೋಸ್ ನೀಡುತ್ತಾರೆ. ಸಾಧ್ಯವಾದರೆ ಒಂದೆರಡು ಮಾತನಾಡುತ್ತಾರೆ. ವಿಜಯ್ ದೇವರಕೊಂಡ ಕೂಡ ಹಾಗೆಯೇ ಮಾಡುತ್ತಾರೆ. ಆದರೆ ಈ ಬಾರಿ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಪಾಪರಾಜಿಗಳ ಕ್ಯಾಮೆರಾಗೆ ಪೋಸ್ ನೀಡಲು ಕೂಡ ಅವರು ಒಂದು ಕ್ಷಣ ನಿಂತಿಲ್ಲ. ಸಖತ್ ಗಡಿಬಿಡಿಯಲ್ಲಿ ಅವರು ಮುಂದೆ ಸಾಗಿದ್ದಾರೆ.

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರಿಗೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಇದೆ. ಕನ್ನಡ, ತಮಿಳು, ತೆಲುಗು, ಹಿಂದಿ ಭಾಷೆಯ ಚಿತ್ರರಂಗದಲ್ಲಿ ರಶ್ಮಿಕಾ ಮಂದಣ್ಣ ಕೆಲಸ ಮಾಡಿದ್ದಾರೆ. ವಿಜಯ್ ದೇವರಕೊಂಡ ಕೂಡ ತೆಲುಗು ಮತ್ತು ಬಾಲಿವುಡ್​​ನಲ್ಲಿ ಫೇಮಸ್ ಆಗಿದ್ದಾರೆ. ಈ ಜೋಡಿಯ ಮದುವೆಗೆ ಯಾರೆಲ್ಲ ಬರುತ್ತಾರೆ ಎಂಬುದನ್ನು ನೋಡಲು ಅಭಿಮಾನಿಗಳು ಕಾದಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!