ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ವಿವಾಹ

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ಮದುವೆ ಫೆಬ್ರವರಿ 26ರಂದು ನಡೆಯಲಿದೆ. ಕುಟುಂಬದವರು ಮತ್ತು ಕೆಲವೇ ಕೆಲವು ಆಪ್ತರು ಮಾತ್ರ ಈ ಸೆಲೆಬ್ರಿಟಿ ಮದುವೆಗೆ ಹಾಜರಿ ಹಾಕಲಿದ್ದಾರೆ. ಮದುವೆ ತಯಾರಿಯಲ್ಲಿ ಇರುವ ರಶ್ಮಿಕಾ, ವಿಜಯ್ ಅವರು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಮದುವೆ ವಿಷಯ ಈಗ ಗುಟ್ಟಾಗಿ ಉಳಿದಿಲ್ಲ. ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿರುವ ಅವರು ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರೆ. ಅದಕ್ಕಾಗಿ ಸಕಲ ಸಿದ್ಧತೆ ನಡೆದಿದೆ. ಈಗಾಗಲೇ ಸಿನಿಮಾ ಕೆಲಸಗಳನ್ನು ಬದಿಗಿಟ್ಟು, ಮದುವೆ ತಯಾರಿಯಲ್ಲಿ ಅವರಿಬ್ಬರು ತೊಡಗಿಕೊಂಡಿದ್ದಾರೆ. ಸದ್ಯಕ್ಕಂತೂ ಸಖತ್ ಗಡಿಬಿಡಿ ಮಾಡುತ್ತಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಒಂದು ವಿಡಿಯೋ ವೈರಲ್ ಆಗಿದೆ. ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ.

ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ವಿವಾಹ ನಡೆಯಲಿ. ಮದುವೆ ಆಮಂತ್ರಣ ಪತ್ರಿಕೆ ವೈರಲ್ ಆಗಿದೆ. ಹಾಗಿದ್ದರೂ ಕೂಡ ಅವರು ಸಾರ್ವಜನಿಕವಾಗಿ ಈ ಬಗ್ಗೆ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ. ಕೇವಲ ಕುಟುಂಬದವರು ಮತ್ತು ಆಪ್ತರ ಸಮ್ಮುಖದಲ್ಲಿ ಮದುವೆ ನಡೆಯಲಿದೆ.

ಹಲವು ಸಿನಿಮಾಗಳನ್ನು ಒಪ್ಪಿಕೊಂಡಿರುವ ರಶ್ಮಿಕಾ ಮಂದಣ್ಣ ಅವರು ಈಗ ಬ್ರೇಕ್ ತೆಗೆದುಕೊಂಡಿದ್ದಾರೆ. ವಿಜಯ್ ದೇವರಕೊಂಡ ಕೂಡ ಮದುವೆ ಸಲುವಾಗಿ ಬಿಡುವು ಮಾಡಿಕೊಂಡಿದ್ದಾರೆ. ಅವರಿಬ್ಬರು ಈಗ ಹೈದರಾಬಾದ್​ನಿಂದ ಬೇರೆ ಕಡೆಗೆ ಹಾರಿದ್ದಾರೆ. ವಿಮಾನ ನಿಲ್ದಾಣಕ್ಕೆ ಪ್ರತ್ಯೇಕವಾಗಿ ಬಂದ ಅವರು ಪಾಪಪಾಜಿಗಳ ಕ್ಯಾಮೆರಾದಲ್ಲಿ ಸೆರೆ ಆಗಿದ್ದಾರೆ.

ಸಾಮಾನ್ಯವಾಗಿ ವಿಮಾನ ನಿಲ್ದಾಣದಲ್ಲಿ ಪಾಪರಾಜಿಗಳನ್ನು ನೋಡಿದಾಗ ರಶ್ಮಿಕಾ ಮಂದಣ್ಣ ಅವರು ಪೋಸ್ ನೀಡುತ್ತಾರೆ. ಸಾಧ್ಯವಾದರೆ ಒಂದೆರಡು ಮಾತನಾಡುತ್ತಾರೆ. ವಿಜಯ್ ದೇವರಕೊಂಡ ಕೂಡ ಹಾಗೆಯೇ ಮಾಡುತ್ತಾರೆ. ಆದರೆ ಈ ಬಾರಿ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಪಾಪರಾಜಿಗಳ ಕ್ಯಾಮೆರಾಗೆ ಪೋಸ್ ನೀಡಲು ಕೂಡ ಅವರು ಒಂದು ಕ್ಷಣ ನಿಂತಿಲ್ಲ. ಸಖತ್ ಗಡಿಬಿಡಿಯಲ್ಲಿ ಅವರು ಮುಂದೆ ಸಾಗಿದ್ದಾರೆ.

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರಿಗೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಇದೆ. ಕನ್ನಡ, ತಮಿಳು, ತೆಲುಗು, ಹಿಂದಿ ಭಾಷೆಯ ಚಿತ್ರರಂಗದಲ್ಲಿ ರಶ್ಮಿಕಾ ಮಂದಣ್ಣ ಕೆಲಸ ಮಾಡಿದ್ದಾರೆ. ವಿಜಯ್ ದೇವರಕೊಂಡ ಕೂಡ ತೆಲುಗು ಮತ್ತು ಬಾಲಿವುಡ್​​ನಲ್ಲಿ ಫೇಮಸ್ ಆಗಿದ್ದಾರೆ. ಈ ಜೋಡಿಯ ಮದುವೆಗೆ ಯಾರೆಲ್ಲ ಬರುತ್ತಾರೆ ಎಂಬುದನ್ನು ನೋಡಲು ಅಭಿಮಾನಿಗಳು ಕಾದಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!