ರಾತ್ರೋರಾತ್ರಿ ವಿಷ್ಣು ಸಮಾಧಿ ನೆಲಸಮ : ಎರಡನೇ ಬಾರಿ ವಿಷ್ಣು ಅವರನ್ನು ಕಳೆದುಕೊಂಡಂತೆ ಆಗಿದೆ ಎಂದು ಕಣ್ಣೀರಿಟ್ಟ ನಿರ್ದೇಶಕ ರವಿ ಶ್ರೀವತ್ಸ..

ಬೆಂಗಳೂರಿನ ಉತ್ತರಹಳ್ಳಿ-ಕೆಂಗೇರಿ ರಸ್ತೆಯಲ್ಲಿರುವ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಾಹಸಸಿಂಹ ಡಾ.ವಿಷ್ಣವರ್ಧನ್ ಅವರ ಸಮಾಧಿಯನ್ನು ರಾತ್ರೋರಾತ್ರಿ ನೆಲಸಮ ಮಾಡಲಾಗಿದೆ. ಈ ಸಂಬಂಧ ಅವರ ಅಭಿಮಾನಿಗಳು ಸ್ಟುಡಿಯೋ ಎದುರು ಪ್ರತಿಭಟನೆ ಮಾಡಿ ಆಕ್ರೋಶ ಹೊರ ಹಾಕಿದರು. ಇದೇ ವೇಳೆ ನಿರ್ದೇಶಕ ರವಿ ಶ್ರೀವತ್ಸ ಅವರು ಕಣ್ಣೀರು ಹಾಕಿದ್ದಾರೆ.

ತುಂಬಾ ದುಃಖದಲ್ಲೇ ಮಾತನಾಡಿದ ನಿರ್ದೇಶಕ ರವಿ ಶ್ರೀವತ್ಸ ಅವರು, ಏನಿಲ್ಲ, ಎಲ್ಲ ಮುಗಿದು ಹೋಯಿತು. ಈಗ ಮತ್ತೆ ಎರಡನೇ ಬಾರಿ ವಿಷ್ಣು ಅವರನ್ನು ಕಳೆದುಕೊಂಡಂತೆ ಆಗಿದೆ. ಯಾರು ಇಲ್ಲ.. ಯಾರು ಇಲ್ಲ. ಎಲ್ಲ ಅನಾಥವಾಗಿದೆ ಇಲ್ಲಿ. ತುಂಬಾ ನೋವಾಗುತ್ತಿದೆ. ಇದು ನಮಗೆ ಕರಾಳ ದಿನವಾಗಿದೆ. ನಾನು ನಮ್ಮ ಯಜಮಾನನ ನಾಯಿ, ಬೊಗಳಬಹುದು. ಅದು ಬಿಟ್ಟರೇ ಅಯ್ಯೋ ಎಂದು ಅಳಬಹುದು ಅಷ್ಟೇ ಎಂದು ಕಣ್ಣೀರು ಹಾಕುತ್ತಿದ್ದರು.

ಸಿನಿಮಾ ಇಂಡಸ್ಟ್ರಿಗೆ ಬಂದಾಗ ನನಗೆ ನನ್ನ ಯಜಮಾನನೇ ಇಲ್ಲ ಎಂದು ನಮ್ಮ ಅಪ್ಪ, ಅಮ್ಮನ ಹತ್ತಿರ ಸಾಕಷ್ಟು ಬಾರಿ ಹೇಳಿದ್ದೇನೆ. ಯಾರನ್ನು ಕಟ್ಟಿಕೊಂಡು ನಾನು ಏನ್ ಮಾಡಬೇಕು. ತಿರುಗ ಯಾವಾತ್ತದರೂ ಒಂದಿನ ಬರುತ್ತೇನೆ. ಅದರೊಳಗೆ ಹೋಗೋಕೆ ಬಿಡಿ ಎಂದು ಪೊಲೀಸರನ್ನು ಕೇಳಿದೆ. ಸ್ವಲ್ಪ ಮಣ್ಣು ಎತ್ತುಕೊಂಡು ಬರುತ್ತೇನೆ ಎಂದೇ ಆದರೆ, ಪೊಲೀಸರು ಒಳಗೆ ಹೋಗೋಕೆ ಬಿಡಲಿಲ್ಲ ಎಂದು ರವಿ ಶ್ರೀವತ್ಸ ಅವರು ದುಃಖಿತರಾದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!