RCB ಅಭಿಮಾನಿಗಳ ಅಭಿಮಾನಕ್ಕೆ ಕೊಂಚ ಭಾವುಕರಾದ ವಿರಾಟ್ ಕೊಹ್ಲಿ…

ಇಂಡಿಯನ್ ಪ್ರೀಮಿಯರ್ ಲೀಗ್ನ 58ನೇ ಪಂದ್ಯವು ಮಳೆಯ ಕಾರಣ ರದ್ದಾಗಿದೆ. ಈ ರದ್ದಾಗುವಿಕೆಯೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ತಲಾ ಒಂದೊಂದು ಅಂಕಗಳನ್ನು ಹಂಚಿಕೊಂಡಿದೆ.ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕೆಂಪು ಕೋಟೆ ಶನಿವಾರ ಸಂಪೂರ್ಣ ಶ್ವೇತಮಯವಾಗಿತ್ತು. ಹೀಗೆ ಚಿನ್ನಸ್ವಾಮಿ ಸ್ಟೇಡಿಯಂ ಅನ್ನು ಶ್ವೇತಮಯವಾಗಿಸಿದ್ದು ವಿರಾಟ್ ಕೊಹ್ಲಿಯ ಅಭಿಮಾನಿಗಳು. ತಮ್ಮ ನೆಚ್ಚಿನ ಆಟಗಾರನಿಗೆ ಟೆಸ್ಟ್ ಕ್ರಿಕೆಟ್ನಲ್ಲಿ ಗೌರವಯುತ ವಿದಾಯ ಸಿಕ್ಕಿಲ್ಲ ಎಂಬ ಕಾರಣಕ್ಕೆ, ಅಭಿಮಾನಿಗಳು ವೈಟ್ ಜೆರ್ಸಿ ಧರಿಸಿ ಆಗಮಿಸಿದ್ದರು.ಈ ಮೂಲಕ ಟೆಸ್ಟ್ ಕ್ರಿಕೆಟ್ನಲ್ಲಿ ಕಿಂಗ್ ಕೊಹ್ಲಿಯನ್ನು ತಾವೆಷ್ಟು ಪ್ರೀತಿಸುತ್ತಿದ್ದೇವು ಎಂಬುದನ್ನು ಅಭಿಮಾನಿಗಳು ಸಾರಿ ಹೇಳಿದ್ದರು.

ಇತ್ತ ಇಂತಹದೊಂದು ಅಭಿಮಾನವನ್ನು ನೋಡಿದ ವಿರಾಟ್ ಕೊಹ್ಲಿ ಭಾವುಕರಾಗಿ ಕಂಡು ಬಂದರು. ಗ್ಯಾಲರಿ ಪೂರ್ತಿ ವೈಟ್ ಜೆರ್ಸಿ ರಾರಾಜಿಸುತ್ತಿರುವುದು ಬಿಗ್ ಸ್ಕ್ರೀನ್ನಲ್ಲಿ ತೋರಿಸುತ್ತಿದ್ದಂತೆ, ಇತ್ತ ಕೊಹ್ಲಿ ಏಕಾಂತವಾಗಿ ಭಾವುಕತೆಯಿಂದ ನೋಡುತ್ತಾ ಕೂತಿದ್ದರು. ಆದರೆ ವಿಧಿಯಾಟ, ಮಳೆಯ ಕಾರಣ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಡುವಣ ಪಂದ್ಯವು ರದ್ದಾಯಿತು. ಇಲ್ಲದಿದ್ದರೆ, ಕಿಂಗ್ ಕೊಹ್ಲಿ ಬ್ಯಾಟಿಂಗ್ಗೆ ಬರುತ್ತಿದ್ದಂತೆ ವಿಶೇಷ ಗೌರವ ಸಲ್ಲಿಸಲು ಆರ್ಸಿಬಿ ಫ್ಯಾನ್ಸ್ ನಿರ್ಧರಿಸಿದ್ದರು.

ಇತ್ತ ಆರ್ಸಿಬಿ ಫ್ರಾಂಚೈಸಿ ಕೂಡ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತರಾಗಿರುವ ವಿರಾಟ್ ಕೊಹ್ಲಿಗೆ ವಿಶೇಷ ಗೌರವ ಸಲ್ಲಿಸಲು ಯೋಜನೆ ಹಾಕಿಕೊಂಡಿದ್ದರು. ಆದರೆ ಮಳೆಯಿಂದಾಗಿ ಎಲ್ಲವೂ ಹಾಳಾಯಿತು ಎನ್ನಬಹುದು. ಇದಾಗ್ಯೂ ಆರ್ಸಿಬಿ ತನ್ನ ಮುಂದಿನ ಪಂದ್ಯವನ್ನು ಸಹ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಲಿದೆ. ಮೇ 23 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದ ವೇಳೆ ಆರ್ಸಿಬಿ ಅಭಿಮಾನಿಗಳು ಕಿಂಗ್ ಕೊಹ್ಲಿಗೆ ಟೆಸ್ಟ್ ಬೀಳ್ಕೊಡುಗೆ ನೀಡಲು ಮತ್ತೆ ವೈಟ್ ಜೆರ್ಸಿಯಲ್ಲಿ ಆಗಮಿಸುವ ಸಾಧ್ಯತೆಯಿದೆ. ಅಲ್ಲದೆ ಆರ್ಸಿಬಿ ಕಡೆಯಿಂದಲೂ ವಿರಾಟ್ ಕೊಹ್ಲಿಗೆ ವಿಶೇಷ ಗೌರವ ಸಿಗಲಿದೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು