RCB ಅಭಿಮಾನಿಗಳಿಗೆ ಗುಡ್ ನ್ಯೂಸ್ ; ನಾಯಕ ರಜತ್ ಫಿಟ್….

ಈ ಬಾರಿಯ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ಪ್ರದರ್ಶನ ನೀಡಿದೆ. ರಜತ್ ಪಾಟಿದಾರ್ ನಾಯಕತ್ವದಲ್ಲಿ ಕಣಕ್ಕಿಳಿದಿರುವ ಆರ್ಸಿಬಿ ಪಡೆ ಈವರೆಗೆ 11 ಪಂದ್ಯಗಳನ್ನಾಡಿದೆ. ಈ ವೇಳೆ 8 ಮ್ಯಾಚ್ಗಳಲ್ಲಿ ಜಯ ಸಾಧಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 16 ಅಂಕಗಳನ್ನು ಕಲೆಹಾಕಿದೆ. ಇನ್ನು ಒಂದು ಮ್ಯಾಚ್ ಜಯಿಸಿದರೆ ಪ್ಲೇಆಫ್ ಹಂತಕ್ಕೇರಲಿದೆ. ಸೀಸನ್-18ರ ಪುನರಾರಂಭಕ್ಕೆ ಕೌಂಟ್ ಡೌನ್ ಶುರುವಾಗಿದೆ. ಶನಿವಾರದಿಂದ ಆರಂಭವಾಗಲಿರುವ ಐಪಿಎಲ್ನ ದ್ವಿತೀಯಾರ್ಧದ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೆ ಆರ್ಸಿಬಿ ನಾಯಕ ರಜತ್ ಪಾಟಿದಾರ್ ಅಲಭ್ಯರಾಗಲಿದ್ದಾರೆ ಎನ್ನಲಾಗಿತ್ತು.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದ ಫೀಲ್ಡಿಂಗ್ ವೇಳೆ ರಜತ್ ಪಾಟಿದಾರ್ ಅವರ ಬೆರಳಿಗೆ ಗಾಯವಾಗಿತ್ತು. ಹೀಗಾಗಿ ಬ್ಯಾಂಡೇಜ್ ಹಾಕಿಕೊಂಡಿದ್ದ ಪಾಟಿದಾರ್ಗೆ ವೈದ್ಯರು ಕೆಲ ದಿನಗಳವರೆಗೆ ವಿಶ್ರಾಂತಿ ಸೂಚಿಸಿದ್ದರು. ಇದೀಗ ವಿಶ್ರಾಂತಿ ಮುಗಿಸಿ ರಜತ್ ಆರ್ಸಿಬಿ ತಂಡವನ್ನು ಕೂಡಿಕೊಂಡಿದ್ದಾರೆ.ಈ ವೇಳೆ ಅವರ ಕೈಗೆ ಹಾಕಲಾಗಿರುವ ಬ್ಯಾಂಡೇಜ್ ಅನ್ನು ಬಿಚ್ಚಿರುವುದು ಕಂಡು ಬಂದಿದೆ. ಇದೇ ವೇಳೆ ಯಾವುದೇ ಸಮಸ್ಯೆ ಇಲ್ಲದಂತೆ ಭಾಸವಾಗಿದ್ದಾರೆ. ಹೀಗಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಜತ್ ಪಾಟಿದಾರ್ ಕಾಣಿಸಿಕೊಳ್ಳುವುದು ಖಚಿತ ಎನ್ನಬಹುದು.

ಇದಕ್ಕೂ ಮುನ್ನ ಬೆರಳಿಗೆ ಗಾಯವಾಗಿರುವ ಕಾರಣ ರಜತ್ ಪಾಟಿದಾರ್ ಕೆಲ ಪಂದ್ಯಗಳಲ್ಲಿ ಕಣಕ್ಕಿಳಿಯುವುದಿಲ್ಲ ಎನ್ನಲಾಗಿತ್ತು. ಅಷ್ಟೇ ಅಲ್ಲದೆ ಪಾಟಿದಾರ್ ಬದಲಿಗೆ ಆರ್ಸಿಬಿ ತಂಡದ ನಾಯಕತ್ವದ ಜವಾಬ್ದಾರಿಯನ್ನು ಜಿತೇಶ್ ಶರ್ಮಾಗೆ ವಹಿಸಲಾಗಿತ್ತು. ಆದರೀಗ ಸಂಪೂರ್ಣ ಫಿಟ್ನೆಸ್ನೊಂದಿಗೆ ಪಾಟಿದಾರ್ ಆರ್ಸಿಬಿ ತಂಡಕ್ಕೆ ಮರಳಿದ್ದು, ಹೀಗಾಗಿ ಉಳಿದ ಪಂದ್ಯಗಳಲ್ಲಿ ಅವರೇ ಆರ್ಸಿಬಿ ತಂಡವನ್ನು ಮುನ್ನಡೆಸಲಿದ್ದಾರೆ.ಒಟ್ಟಿನಲ್ಲಿ ಐಪಿಎಲ್ ಅನ್ನು ಒಂದು ವಾರದವರೆಗೆ ಮುಂದೂಡಿದ್ದು, ಆರ್ಸಿಬಿ ಪಾಲಿಗೆ ವರವಾಗಿ ಪರಿಣಮಿಸಿದೆ. ಏಕೆಂದರೆ ಈ ಒಂದು ವಾರದ ಅವಧಿಯಲ್ಲಿ ಆರ್ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಅವರ ಬೆರಳಿನ ಗಾಯವು ಗುಣವಾಗಿದೆ. ಇದರೊಂದಿಗೆ ಆರ್ಸಿಬಿ ತಂಡದ ಉಳಿದ ಪಂದ್ಯಗಳಲ್ಲೂ ರಜತ್ ಪಾಟಿದಾರ್ ಕಾಣಿಸಿಕೊಳ್ಳುವುದು ಖಚಿತವಾಗಿದೆ.

 

 

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!