Rcb ಗೆ ಗೆಲುವು ತಂದು ಕೊಡುತ್ತ Green Jersey?

ಜೈಪುರ್: ರಜತ್ ಪಾಟಿದಾರ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು (ಏ.13) ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೆಣಸಲಿದೆ.


ಜೈಪುರದ ಸವಾಯ್ ಮಾನ್ಸಿಂಗ್ ಕ್ರಿಕೆಟ್ ಮೈದಾನದಲ್ಲಿ ಮಧ್ಯಾಹ್ನ 3:30ಕ್ಕೆ ಪಂದ್ಯ ಆರಂಭವಾಗಲಿದೆ. ಆರ್ಸಿಬಿ ಆಟಗಾರರು ತಮ್ಮ ಕೆಂಪು ಮತ್ತು ಕಪ್ಪು ಮಿಶ್ರಿತ ಜೆರ್ಸಿ ಬದಲಿಗೆ ಹಸಿರು ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. 2011ರ ಐಪಿಎಲ್ನಿಂದಲೂ ಪ್ರತಿ ಆವೃತ್ತಿಯ ಒಂದು ಪಂದ್ಯದಲ್ಲಿ ಆರ್ಸಿಬಿ ಗ್ರೀನ್ ಜೆರ್ಸಿ ತೊಟ್ಟು ಪಂದ್ಯವನ್ನಾಡಲು ಆರಂಭಿಸಿತು. ಅಂದಿನಿಂದ ಆರ್ಸಿಬಿ ಪ್ರತಿ ವರ್ಷ ಐಪಿಎಲ್ನಲ್ಲಿ ಒಂದು ಪಂದ್ಯದಲ್ಲಿ ಹಸಿರು ಜೆರ್ಸಿ ತೊಟ್ಟು ಆಡುತ್ತಿದೆ. ನಮ್ಮ ಸುತ್ತಲಿನ ಹಸಿರು ಪರಿಸರವನ್ನು ಸಂರಕ್ಷಿಸುವಂತೆ ಜಾಗೃತಿಗೊಳಿಸುವ ಉದ್ದೇಶವೂ ಇದ್ದಾಗಿದೆ.


ಆರ್ಸಿಬಿ ಸೋಲೇ ಹೆಚ್ಚು:

2011ರಲ್ಲಿ ಗೆಲುವು ಸಾಧಿಸಿದ್ದ ಆರ್ಸಿಬಿ 2012, 2013, 2014ರಲ್ಲಿ ಸೋಲು ಕಂಡಿತು. 2015ರಲ್ಲಿ ಯಾವುದೇ ಫಲಿತಾಂಶವಿಲ್ಲದೇ ಪಂದ್ಯ ರದ್ದಾಯಿತು. 2016ರಲ್ಲಿ ಗೆಲುವು ಸಾಧಿಸಿತ್ತು. ನಂತರ 2017, 2018, 2019, 2020ರಲ್ಲಿ ಸೋತಿತ್ತು. 2021 ನೀಲಿ ಜೆರ್ಸಿ ಧರಿಸಿ ಕಣಕ್ಕಿಳಿದಿದ್ದರೂ ಸೋಲು ಕಂಡಿತ್ತು. 2023ರಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ತವರು ಕ್ರೀಡಾಂಗಣದಲ್ಲೇ ಗೆಲುವು ಸಾಧಿಸಿತ್ತು. ಆದ್ರೆ ಕಳೆದ ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್ರೈಡರ್ಸ್ ವಿರುದ್ಧ ಕೇವಲ 1 ರನ್ಗಳಿಂದ ವಿರೋಚಿತ ಸೋಲು ಕಂಡಿತ್ತು. ಇದುವರೆಗೆ 14 ಪಂದ್ಯಗಳ ಪೈಕಿ 9ರಲ್ಲಿ ಸೋಲು ಕಂಡಿದ್ದು, 4ರಲ್ಲಿ ಗೆಲುವು ಸಾಧಿಸಿದೆ. 1 ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. ಇಂದಿನ ಪಂದ್ಯದಲ್ಲಿ ಏನಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.

ಪುಟಿದೇಳುತ್ತಾ ಆರ್ಸಿಬಿ?

ಪ್ರಸಕ್ತ ಆವೃತ್ತಿಯಲ್ಲಿ ಆಡಿರುವ 5 ಪಂದ್ಯಗಳ ಪೈಕಿ ಮೂರು ಪಂದ್ಯಗಳಲ್ಲಿ ಐತಿಹಾಸಿಕ ಗೆಲುವು ದಾಖಲಿಸಿ, ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಕುಸಿದಿದೆ. ಅಲ್ಲದೇ ಕಳೆದ ಎರಡೂ ಪಂದ್ಯಗಳಲ್ಲಿ ತವರಿನಲ್ಲೇ ಸೋತಿರುವುದು ಬೇಸರದ ಸಂಗತಿ. ಇಂದಿನ ಪಂದ್ಯದಲ್ಲಿ ಆರ್ಸಿಬಿ ಪುಟಿದೇಳುತ್ತಾ ಎಂಬುದು ಪ್ರಶ್ನೆಯಾಗಿದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!