Rcb ಗೆ ಗೆಲುವು ತಂದು ಕೊಡುತ್ತ Green Jersey?

ಜೈಪುರ್: ರಜತ್ ಪಾಟಿದಾರ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು (ಏ.13) ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೆಣಸಲಿದೆ.


ಜೈಪುರದ ಸವಾಯ್ ಮಾನ್ಸಿಂಗ್ ಕ್ರಿಕೆಟ್ ಮೈದಾನದಲ್ಲಿ ಮಧ್ಯಾಹ್ನ 3:30ಕ್ಕೆ ಪಂದ್ಯ ಆರಂಭವಾಗಲಿದೆ. ಆರ್ಸಿಬಿ ಆಟಗಾರರು ತಮ್ಮ ಕೆಂಪು ಮತ್ತು ಕಪ್ಪು ಮಿಶ್ರಿತ ಜೆರ್ಸಿ ಬದಲಿಗೆ ಹಸಿರು ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. 2011ರ ಐಪಿಎಲ್ನಿಂದಲೂ ಪ್ರತಿ ಆವೃತ್ತಿಯ ಒಂದು ಪಂದ್ಯದಲ್ಲಿ ಆರ್ಸಿಬಿ ಗ್ರೀನ್ ಜೆರ್ಸಿ ತೊಟ್ಟು ಪಂದ್ಯವನ್ನಾಡಲು ಆರಂಭಿಸಿತು. ಅಂದಿನಿಂದ ಆರ್ಸಿಬಿ ಪ್ರತಿ ವರ್ಷ ಐಪಿಎಲ್ನಲ್ಲಿ ಒಂದು ಪಂದ್ಯದಲ್ಲಿ ಹಸಿರು ಜೆರ್ಸಿ ತೊಟ್ಟು ಆಡುತ್ತಿದೆ. ನಮ್ಮ ಸುತ್ತಲಿನ ಹಸಿರು ಪರಿಸರವನ್ನು ಸಂರಕ್ಷಿಸುವಂತೆ ಜಾಗೃತಿಗೊಳಿಸುವ ಉದ್ದೇಶವೂ ಇದ್ದಾಗಿದೆ.


ಆರ್ಸಿಬಿ ಸೋಲೇ ಹೆಚ್ಚು:

2011ರಲ್ಲಿ ಗೆಲುವು ಸಾಧಿಸಿದ್ದ ಆರ್ಸಿಬಿ 2012, 2013, 2014ರಲ್ಲಿ ಸೋಲು ಕಂಡಿತು. 2015ರಲ್ಲಿ ಯಾವುದೇ ಫಲಿತಾಂಶವಿಲ್ಲದೇ ಪಂದ್ಯ ರದ್ದಾಯಿತು. 2016ರಲ್ಲಿ ಗೆಲುವು ಸಾಧಿಸಿತ್ತು. ನಂತರ 2017, 2018, 2019, 2020ರಲ್ಲಿ ಸೋತಿತ್ತು. 2021 ನೀಲಿ ಜೆರ್ಸಿ ಧರಿಸಿ ಕಣಕ್ಕಿಳಿದಿದ್ದರೂ ಸೋಲು ಕಂಡಿತ್ತು. 2023ರಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ತವರು ಕ್ರೀಡಾಂಗಣದಲ್ಲೇ ಗೆಲುವು ಸಾಧಿಸಿತ್ತು. ಆದ್ರೆ ಕಳೆದ ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್ರೈಡರ್ಸ್ ವಿರುದ್ಧ ಕೇವಲ 1 ರನ್ಗಳಿಂದ ವಿರೋಚಿತ ಸೋಲು ಕಂಡಿತ್ತು. ಇದುವರೆಗೆ 14 ಪಂದ್ಯಗಳ ಪೈಕಿ 9ರಲ್ಲಿ ಸೋಲು ಕಂಡಿದ್ದು, 4ರಲ್ಲಿ ಗೆಲುವು ಸಾಧಿಸಿದೆ. 1 ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. ಇಂದಿನ ಪಂದ್ಯದಲ್ಲಿ ಏನಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.

ಪುಟಿದೇಳುತ್ತಾ ಆರ್ಸಿಬಿ?

ಪ್ರಸಕ್ತ ಆವೃತ್ತಿಯಲ್ಲಿ ಆಡಿರುವ 5 ಪಂದ್ಯಗಳ ಪೈಕಿ ಮೂರು ಪಂದ್ಯಗಳಲ್ಲಿ ಐತಿಹಾಸಿಕ ಗೆಲುವು ದಾಖಲಿಸಿ, ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಕುಸಿದಿದೆ. ಅಲ್ಲದೇ ಕಳೆದ ಎರಡೂ ಪಂದ್ಯಗಳಲ್ಲಿ ತವರಿನಲ್ಲೇ ಸೋತಿರುವುದು ಬೇಸರದ ಸಂಗತಿ. ಇಂದಿನ ಪಂದ್ಯದಲ್ಲಿ ಆರ್ಸಿಬಿ ಪುಟಿದೇಳುತ್ತಾ ಎಂಬುದು ಪ್ರಶ್ನೆಯಾಗಿದೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು