ಕಾಲ್ತುಳಿತದಲ್ಲಿ ಸಾ*ನ್ನಪ್ಪಿದವರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಿಸಿದ ಆರ್‌ಸಿಬಿ …

ಐಪಿಎಲ್ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದೆ. ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಸತತ 17 ವರ್ಷಗಳಿಂದ ಪ್ರಶಸ್ತಿ ವಂಚಿತವಾಗಿದ್ದ RCB ತಂಡ, 2025ರ ಆವೃತ್ತಿಯಲ್ಲಿ ಚಾಂಪಿಯನ್‌ ಆಗಿತ್ತು. ಜೂನ್ 3ರಂದು ನಡೆದಿದ್ದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್ ಗಳ ಅಂತರದಿಂದ ಮಣಿಸುವ ಮೂಲಕ ಚೊಚ್ಚಲ ಪ್ರಶಸ್ತಿಗೆ ಮುತ್ತಿಕ್ಕಿತ್ತು.

ಹೀಗಾಗಿ, ವಿಶ್ವದಾದ್ಯಂತ RCB ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ಮರುದಿನ (ಜೂನ್ 4ರಂದು) ಬೆಂಗಳೂರಿನಲ್ಲಿ ಆಯೋಜಿಸಿದ್ದ ವಿಜಯೋತ್ಸವದಲ್ಲಿ ನಿರೀಕ್ಷೆಗೂ ಮೀರಿ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಪಾಲ್ಗೊಂಡಿದ್ದರು. ಈ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು.

ತಕ್ಷಣವೇ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ್ದ RCB, ಇದೀಗ ಮೃತರ ಕುಟುಂಬಗಳಿಗೆ ಅದೇ RCB CARES ಮೂಲಕ ತಲಾ 25 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ RCB, “ಜೂನ್ 4, 2025- ಈ ದಿನ ನಮ್ಮ ಹೃದಯದಲ್ಲಿ ಶಾಶ್ವತವಾಗಿ ಉಳಿಯಲಿದೆ. ನಾವು ಕಳೆದುಕೊಂಡಿದ್ದು 11 ಅಭಿಮಾನಿಗಳನಷ್ಟೇ ಅಲ್ಲ…ನಮ್ಮ ಕುಟುಂಬ ಸದಸ್ಯರನ್ನು. ಅವರು ನಮ್ಮ ಹೃದಯದ ಭಾಗವಾಗಿದ್ದರು. ಅವರ ಉತ್ಸಾಹವೇ ನಮ್ಮ ಊರು, ಸಮುದಾಯ ಮತ್ತು ತಂಡಕ್ಕೆ ಜೀವ ತುಂಬುವ ಬೆಳಕಾಗಿತ್ತು. ನಮ್ಮ ನೆನಪುಗಳಲ್ಲಿ ಅವರು ಸದಾ ಜೀವಂತವಾಗಿರುತ್ತಾರೆ. ಅವರ (ಮೃತ ಅಭಿಮಾನಿಗಳು) ಜಾಗವನ್ನು ಯಾವ ಸಹಾಯವೂ ತುಂಬಲಾರದು. ಆದರೆ ಮೊದಲನೇ ಮತ್ತು ಗೌರವದ ಸಂಕೇತವಾಗಿ, ಆರ್‌ಸಿಬಿ ಪ್ರತಿ ಕುಟುಂಬಕ್ಕೆ ತಲಾ 25 ಲಕ್ಷ ನೆರವನ್ನು ನೀಡಿದೆ. ಇದು ಕೇವಲ ಆರ್ಥಿಕ ಸಹಾಯವಲ್ಲ; ಕರುಣೆ, ಒಗ್ಗಟ್ಟು ಮತ್ತು ನಿರಂತರ ಕಾಳಜಿ ಭರವಸೆ” ಎಂದು ಹೇಳಿದೆ.

ಆರ್‌ಸಿಬಿ ಅಧಿಕೃತ ಪ್ರಕಟಣೆಯಲ್ಲಿ ಏನಿದೆ ?

ಜೂನ್ 4, 2025 – ಈ ದಿನ ನಮ್ಮ ಹೃದಯದಲ್ಲಿ ಶಾಶ್ವತವಾಗಿ ಉಳಿಯಲಿದೆ.
ನಾವು ಕಳೆದುಕೊಂಡಿದ್ದು 11 ಅಭಿಮಾನಿಗಳನ್ನಷ್ಟೇ ಅಲ್ಲ… ಅವರು ನಮ್ಮ ಕುಟುಂಬದ ಸದಸ್ಯರಾಗಿದ್ದರು, ನಮ್ಮ ಹೃದಯದ ಭಾಗವಾಗಿದ್ದರು. ಅವರ ಉತ್ಸಾಹವೇ ನಮ್ಮ ಊರು, ಸಮುದಾಯ ಮತ್ತು ತಂಡಕ್ಕೆ ಜೀವ ತುಂಬುವ ಬೆಳಕಾಗಿತ್ತು. ನಮ್ಮ ನೆನಪುಗಳಲ್ಲಿ ಅವರು ಸದಾ ಜೀವಂತವಾಗಿರುತ್ತಾರೆ.
ಅವರ ಜಾಗವನ್ನು ಯಾವ ಸಹಾಯವೂ ತುಂಬಲಾರದು. ಆದರೆ ಮೊದಲನೇ ಮತ್ತು ಗೌರವದ ಸಂಕೇತವಾಗಿ, ಆರ್‌ಸಿಬಿ ಪ್ರತಿ ಕುಟುಂಬಕ್ಕೆ ತಲಾ ₹25 ಲಕ್ಷ ನೆರವನ್ನು ನೀಡಿದೆ. ಇದು ಕೇವಲ ಆರ್ಥಿಕ ಸಹಾಯವಲ್ಲ; ಕರುಣೆ, ಒಗ್ಗಟ್ಟು ಮತ್ತು ನಿರಂತರ ಕಾಳಜಿಯ ಭರವಸೆ.
ಇದು ಆರ್‌ಸಿಬಿ ಕೇರ್ಸ್‌ನ ಆರಂಭವೂ ಹೌದು. ಅವರ ನೆನಪನ್ನು ಗೌರವಿಸುವ ಮೂಲಕ ಶುರುವಾದ ಈ ಪ್ರಯತ್ನ, ಅಭಿಮಾನಿಗಳ ಭಾವನೆ, ನಂಬಿಕೆ ಮತ್ತು ಸುರಕ್ಷತೆ ಪ್ರತಿಬಿಂಬಿಸುವ ದೀರ್ಘಕಾಲದ ಬದ್ಧತೆ.

Related Posts

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!