RCB ಅಭಿಮಾನಿಗಳ ಈ ಅಭಿಮಾನಕ್ಕೆ ಕೊನೆಯೇ ಇಲ್ಲ….

ವಿರಾಟ್ ಕೊಹ್ಲಿ ,ತಮ್ಮ ವಿಶೇಷವಾದ ಬ್ಯಾಟಿಂಗ್ ಶೈಲಿ, ರೂಡಿಸಿಕೊಂಡಿದ್ದಂತಹ ನಿಯಮಗಳು, ಆಟದ ಮೇಲೆ ಇರುವ ಮಾನದಂಡಗಳು, ಯಾವುದೇ ಕ್ಲಿಷ್ಟಕರ ಸಂದರ್ಭವನ್ನು ಅಳವಡಿಸಿಕೊಳ್ಳುತ್ತಿದ್ದ ರೀತಿ, ಉತ್ತಮ ನಾಯಕರಾಗಿ ಮುನ್ನಡೆಸುತ್ತಿದ್ದ ರೀತಿ ಇವೆಲ್ಲವೂ ಸಹ ಇಂಡಿಯನ್ ಟೆಸ್ಟ್ ಕ್ರಿಕೆಟ್ ಅಭಿಮಾನಿಗಳಿಗೆ ಹೊಸ ಹುರುಪನ್ನು ತಂದುಕೊಟ್ಟಿತು. ಅಲ್ಲದೆ ಕೋಟ್ಯಾಂತರ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ಅವರು ಆದರ್ಶ ವ್ಯಕ್ತಿಯಾದರು. ಅವರ ವ್ಯಕ್ತಿತ್ವ ಚಿರಕಾಲ ಸ್ಮರಿಸುವಂಥದ್ದು, ಅದರಿಂದಲೇ ಅವರು ವಿಶ್ವದೆಲ್ಲೆಡೆ ಅಭಿಮಾನಿಗಳನ್ನು ಹೊಂದಿದ್ದಾರೆ. ಈಗ ಟೆಸ್ಟ್ ಕ್ರಿಕೆಟ್ ಗೆ ವಿದಾಯವನ್ನು ಘೋಷಿಸಿದ್ದು, ಅಭಿಮಾನಿಗಳು ನಮ್ಮ ನೆಚ್ಚಿನ ಆಟಗಾರನಿಗೆ ಅತ್ಯಂತ ಗೌರವಪೂರ್ಣವಾಗಿ ಬಿಳ್ಕೊಡುಗೆಯನ್ನು ನೀಡಿದ್ದಾರೆ.

ಇಡೀ ವಿಶ್ವದಲ್ಲೇ ಅತ್ಯಂತ ನಿಷ್ಠಾವಂತ ಅಭಿಮಾನಿಗಳಿದ್ದರೆ ಅದು RCB ಫ್ಯಾನ್ಸ್. ಹೀಗೆ ಅಂದಿರುವುದು ಮತ್ಯಾರೂ ಅಲ್ಲ. ಟೀಮ್ ಇಂಡಿಯಾದ ಮಾಜಿ ಆಟಗಾರ ಇರ್ಫಾನ್ ಪಠಾಣ್. ಅಂತಹದೊಂದು ವಿಶೇಷ ಅಭಿಮಾನಿಗಳ ಬಳಗವನ್ನೇ ಆರ್ಸಿಬಿ ಸಂಪಾದಿಸಿಕೊಂಡಿದೆ. ಈ ಅಭಿಮಾನಿಗಳೇ ಇದೀಗ ಮತ್ತೊಮ್ಮೆ ಅಭಿಮಾನಿಗಳೆಂದರೆ ಹೇಗಿರಬೇಕೆಂದು ಇಡೀ ವಿಶ್ವಕ್ಕೆ ಸಾರಿದೆ. ಅದು ಕೂಡ ತನ್ನ ನೆಚ್ಚಿನ ಆಟಗಾರನಿಗೆ ವಿಶೇಷ ಗೌರವ ಸಲ್ಲಿಸುವ ಮೂಲಕ. ಹೌದು, ಟೆಸ್ಟ್ ಕ್ರಿಕೆಟ್ನ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರೆನಿಸಿಕೊಂಡಿರುವ ವಿರಾಟ್ ಕೊಹ್ಲಿ ದೀರ್ಘಾವಧಿ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಈ ನಿವೃತ್ತಿ ಘೋಷಣೆ ಮೂಡಿಬಂದಿದ್ದು ಸೋಷಿಯಲ್ ಮೀಡಿಯಾದಲ್ಲಿ. ಅದಕ್ಕಾಗಿ ಫ್ಯಾನ್ಸ್ ಗಳು ಸಹ ಬಿಳಿ ಜರ್ಸಿಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂಗೆ ಆಗಮಿಸಿ ವಿರಾಟ್ ಕೊಹ್ಲಿಯವರಿಗೆ ತಮ್ಮ ಪ್ರೀತಿಯನ್ನು ತೋರಿಸಿದ್ದಾರೆ.

14 ವರ್ಷಗಳ ಕಾಲ ಭಾರತ ಟೆಸ್ಟ್ ತಂಡವನ್ನು ಪ್ರತಿನಿಧಿಸಿದ್ದ ವಿರಾಟ್ ಕೊಹ್ಲಿ ವಿದಾಯ ಪಂದ್ಯದ ಮೂಲಕ ಗುಡ್ ಬೈ ಹೇಳಬೇಕಿತ್ತು. ಆದರೆ ಬಿಸಿಸಿಐ ಅಂತಹದೊಂದು ಪಂದ್ಯವನ್ನು ಏರ್ಪಡಿಸಲಿಲ್ಲ. ಹೀಗಾಗಿಯೇ ಆರ್ಸಿಬಿ ಅಭಿಮಾನಿಗಳು ತನ್ನ ನೆಚ್ಚಿನ ಟೆಸ್ಟ್ ಆಟಗಾರನಿಗೆ ಗೌರವಪೂರ್ವಕ ವಿದಾಯ ಹೇಳಲು ಯೋಜನೆ ರೂಪಿಸಿದರು. ಅದಕ್ಕಾಗಿ ನೀಡಿದ್ದು ಒಂದೇ ಒಂದು ಕರೆಯಷ್ಟೇ. ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದ ವೇಳೆ ಎಲ್ಲರೂ ವೈಟ್ ಜೆರ್ಸಿಯಲ್ಲಿ ಬನ್ನಿ ಎಂದು ಆರ್ಸಿಬಿ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಮನವಿ ಮಾಡಿದ್ದರು. ಈ ಒಂದು ಮನವಿಗೆ ಸಿಕ್ಕಿದ ಸ್ಪಂದನೆ ಅಭೂತಪೂರ್ವ. ಇದಕ್ಕೆ ಸಾಕ್ಷಿಯೇ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶನಿವಾರ ಕಂಡು ಬಂದ ವೈಟ್ ಜೆರ್ಸಿಗಳು.

ಆರ್ಸಿಬಿ ತಂಡದ ಬಹುತೇಕ ಅಭಿಮಾನಿಗಳು ವೈಟ್ ಜೆರ್ಸಿಯಲ್ಲಿ ಆಗಮಿಸಿದ್ದರು. ಇನ್ನೂ ಕೆಲವರು ಬಳಿ ಉಡುಪಿನಲ್ಲಿ ಕಾಣಿಸಿಕೊಂಡರು. ಈ ಮೂಲಕ ವಿರಾಟ್ ಕೊಹ್ಲಿಯನ್ನು ತಾವೆಷ್ಟು ಪ್ರೀತಿಸುತ್ತೇವೆ ಎಂಬುದನ್ನು ವಿಶ್ವಕ್ಕೆ ಸಾರಿದರು. ಹೌದು, ಇಡೀ ವಿಶ್ವದಲ್ಲೇ ಅತ್ಯಂತ ನಿಷ್ಠಾವಂತ ಅಭಿಮಾನಿಗಳಿದ್ದರೆ ಅದು RCB ಫ್ಯಾನ್ಸ್ ಮಾತ್ರ. ಆ ಅಭಿಮಾನಿಗಳ ಅಭಿಮಾನ ಹೇಗಿರುತ್ತೆ ಎಂಬುದಕ್ಕೆ ಶನಿವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಸಾಕ್ಷಿಯಾಗಿತ್ತು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!