Rcb ಗೆ ಗೆಲುವು ತಂದು ಕೊಡುತ್ತ Green Jersey?

ಜೈಪುರ್: ರಜತ್ ಪಾಟಿದಾರ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು (ಏ.13) ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೆಣಸಲಿದೆ.


ಜೈಪುರದ ಸವಾಯ್ ಮಾನ್ಸಿಂಗ್ ಕ್ರಿಕೆಟ್ ಮೈದಾನದಲ್ಲಿ ಮಧ್ಯಾಹ್ನ 3:30ಕ್ಕೆ ಪಂದ್ಯ ಆರಂಭವಾಗಲಿದೆ. ಆರ್ಸಿಬಿ ಆಟಗಾರರು ತಮ್ಮ ಕೆಂಪು ಮತ್ತು ಕಪ್ಪು ಮಿಶ್ರಿತ ಜೆರ್ಸಿ ಬದಲಿಗೆ ಹಸಿರು ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. 2011ರ ಐಪಿಎಲ್ನಿಂದಲೂ ಪ್ರತಿ ಆವೃತ್ತಿಯ ಒಂದು ಪಂದ್ಯದಲ್ಲಿ ಆರ್ಸಿಬಿ ಗ್ರೀನ್ ಜೆರ್ಸಿ ತೊಟ್ಟು ಪಂದ್ಯವನ್ನಾಡಲು ಆರಂಭಿಸಿತು. ಅಂದಿನಿಂದ ಆರ್ಸಿಬಿ ಪ್ರತಿ ವರ್ಷ ಐಪಿಎಲ್ನಲ್ಲಿ ಒಂದು ಪಂದ್ಯದಲ್ಲಿ ಹಸಿರು ಜೆರ್ಸಿ ತೊಟ್ಟು ಆಡುತ್ತಿದೆ. ನಮ್ಮ ಸುತ್ತಲಿನ ಹಸಿರು ಪರಿಸರವನ್ನು ಸಂರಕ್ಷಿಸುವಂತೆ ಜಾಗೃತಿಗೊಳಿಸುವ ಉದ್ದೇಶವೂ ಇದ್ದಾಗಿದೆ.


ಆರ್ಸಿಬಿ ಸೋಲೇ ಹೆಚ್ಚು:

2011ರಲ್ಲಿ ಗೆಲುವು ಸಾಧಿಸಿದ್ದ ಆರ್ಸಿಬಿ 2012, 2013, 2014ರಲ್ಲಿ ಸೋಲು ಕಂಡಿತು. 2015ರಲ್ಲಿ ಯಾವುದೇ ಫಲಿತಾಂಶವಿಲ್ಲದೇ ಪಂದ್ಯ ರದ್ದಾಯಿತು. 2016ರಲ್ಲಿ ಗೆಲುವು ಸಾಧಿಸಿತ್ತು. ನಂತರ 2017, 2018, 2019, 2020ರಲ್ಲಿ ಸೋತಿತ್ತು. 2021 ನೀಲಿ ಜೆರ್ಸಿ ಧರಿಸಿ ಕಣಕ್ಕಿಳಿದಿದ್ದರೂ ಸೋಲು ಕಂಡಿತ್ತು. 2023ರಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ತವರು ಕ್ರೀಡಾಂಗಣದಲ್ಲೇ ಗೆಲುವು ಸಾಧಿಸಿತ್ತು. ಆದ್ರೆ ಕಳೆದ ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್ರೈಡರ್ಸ್ ವಿರುದ್ಧ ಕೇವಲ 1 ರನ್ಗಳಿಂದ ವಿರೋಚಿತ ಸೋಲು ಕಂಡಿತ್ತು. ಇದುವರೆಗೆ 14 ಪಂದ್ಯಗಳ ಪೈಕಿ 9ರಲ್ಲಿ ಸೋಲು ಕಂಡಿದ್ದು, 4ರಲ್ಲಿ ಗೆಲುವು ಸಾಧಿಸಿದೆ. 1 ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. ಇಂದಿನ ಪಂದ್ಯದಲ್ಲಿ ಏನಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.

ಪುಟಿದೇಳುತ್ತಾ ಆರ್ಸಿಬಿ?

ಪ್ರಸಕ್ತ ಆವೃತ್ತಿಯಲ್ಲಿ ಆಡಿರುವ 5 ಪಂದ್ಯಗಳ ಪೈಕಿ ಮೂರು ಪಂದ್ಯಗಳಲ್ಲಿ ಐತಿಹಾಸಿಕ ಗೆಲುವು ದಾಖಲಿಸಿ, ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಕುಸಿದಿದೆ. ಅಲ್ಲದೇ ಕಳೆದ ಎರಡೂ ಪಂದ್ಯಗಳಲ್ಲಿ ತವರಿನಲ್ಲೇ ಸೋತಿರುವುದು ಬೇಸರದ ಸಂಗತಿ. ಇಂದಿನ ಪಂದ್ಯದಲ್ಲಿ ಆರ್ಸಿಬಿ ಪುಟಿದೇಳುತ್ತಾ ಎಂಬುದು ಪ್ರಶ್ನೆಯಾಗಿದೆ.

Related Posts

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!