Rcb ಗೆ ಗೆಲುವು ತಂದು ಕೊಡುತ್ತ Green Jersey?

ಜೈಪುರ್: ರಜತ್ ಪಾಟಿದಾರ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು (ಏ.13) ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೆಣಸಲಿದೆ.


ಜೈಪುರದ ಸವಾಯ್ ಮಾನ್ಸಿಂಗ್ ಕ್ರಿಕೆಟ್ ಮೈದಾನದಲ್ಲಿ ಮಧ್ಯಾಹ್ನ 3:30ಕ್ಕೆ ಪಂದ್ಯ ಆರಂಭವಾಗಲಿದೆ. ಆರ್ಸಿಬಿ ಆಟಗಾರರು ತಮ್ಮ ಕೆಂಪು ಮತ್ತು ಕಪ್ಪು ಮಿಶ್ರಿತ ಜೆರ್ಸಿ ಬದಲಿಗೆ ಹಸಿರು ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. 2011ರ ಐಪಿಎಲ್ನಿಂದಲೂ ಪ್ರತಿ ಆವೃತ್ತಿಯ ಒಂದು ಪಂದ್ಯದಲ್ಲಿ ಆರ್ಸಿಬಿ ಗ್ರೀನ್ ಜೆರ್ಸಿ ತೊಟ್ಟು ಪಂದ್ಯವನ್ನಾಡಲು ಆರಂಭಿಸಿತು. ಅಂದಿನಿಂದ ಆರ್ಸಿಬಿ ಪ್ರತಿ ವರ್ಷ ಐಪಿಎಲ್ನಲ್ಲಿ ಒಂದು ಪಂದ್ಯದಲ್ಲಿ ಹಸಿರು ಜೆರ್ಸಿ ತೊಟ್ಟು ಆಡುತ್ತಿದೆ. ನಮ್ಮ ಸುತ್ತಲಿನ ಹಸಿರು ಪರಿಸರವನ್ನು ಸಂರಕ್ಷಿಸುವಂತೆ ಜಾಗೃತಿಗೊಳಿಸುವ ಉದ್ದೇಶವೂ ಇದ್ದಾಗಿದೆ.


ಆರ್ಸಿಬಿ ಸೋಲೇ ಹೆಚ್ಚು:

2011ರಲ್ಲಿ ಗೆಲುವು ಸಾಧಿಸಿದ್ದ ಆರ್ಸಿಬಿ 2012, 2013, 2014ರಲ್ಲಿ ಸೋಲು ಕಂಡಿತು. 2015ರಲ್ಲಿ ಯಾವುದೇ ಫಲಿತಾಂಶವಿಲ್ಲದೇ ಪಂದ್ಯ ರದ್ದಾಯಿತು. 2016ರಲ್ಲಿ ಗೆಲುವು ಸಾಧಿಸಿತ್ತು. ನಂತರ 2017, 2018, 2019, 2020ರಲ್ಲಿ ಸೋತಿತ್ತು. 2021 ನೀಲಿ ಜೆರ್ಸಿ ಧರಿಸಿ ಕಣಕ್ಕಿಳಿದಿದ್ದರೂ ಸೋಲು ಕಂಡಿತ್ತು. 2023ರಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ತವರು ಕ್ರೀಡಾಂಗಣದಲ್ಲೇ ಗೆಲುವು ಸಾಧಿಸಿತ್ತು. ಆದ್ರೆ ಕಳೆದ ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್ರೈಡರ್ಸ್ ವಿರುದ್ಧ ಕೇವಲ 1 ರನ್ಗಳಿಂದ ವಿರೋಚಿತ ಸೋಲು ಕಂಡಿತ್ತು. ಇದುವರೆಗೆ 14 ಪಂದ್ಯಗಳ ಪೈಕಿ 9ರಲ್ಲಿ ಸೋಲು ಕಂಡಿದ್ದು, 4ರಲ್ಲಿ ಗೆಲುವು ಸಾಧಿಸಿದೆ. 1 ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. ಇಂದಿನ ಪಂದ್ಯದಲ್ಲಿ ಏನಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.

ಪುಟಿದೇಳುತ್ತಾ ಆರ್ಸಿಬಿ?

ಪ್ರಸಕ್ತ ಆವೃತ್ತಿಯಲ್ಲಿ ಆಡಿರುವ 5 ಪಂದ್ಯಗಳ ಪೈಕಿ ಮೂರು ಪಂದ್ಯಗಳಲ್ಲಿ ಐತಿಹಾಸಿಕ ಗೆಲುವು ದಾಖಲಿಸಿ, ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಕುಸಿದಿದೆ. ಅಲ್ಲದೇ ಕಳೆದ ಎರಡೂ ಪಂದ್ಯಗಳಲ್ಲಿ ತವರಿನಲ್ಲೇ ಸೋತಿರುವುದು ಬೇಸರದ ಸಂಗತಿ. ಇಂದಿನ ಪಂದ್ಯದಲ್ಲಿ ಆರ್ಸಿಬಿ ಪುಟಿದೇಳುತ್ತಾ ಎಂಬುದು ಪ್ರಶ್ನೆಯಾಗಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!