ಖ್ಯಾತ ನಟ ಮತ್ತು ರಂಗಭೂಮಿ ಕಲಾವಿದ ದಿನೇಶ್ ಮಂಗಳೂರು ನಿಧನ !

ರಂಗಭೂಮಿ ಹಿನ್ನೆಲೆಯಿಂದ ಚಿತ್ರರಂಗಕ್ಕೆ ಬಂದಿದ್ದ ನಟ ದಿನೇಶ್ ಮಂಗಳೂರು ಅವರು ಇನ್ನಿಲ್ಲ. ನಟನಾಗಿ, ಕಲಾ ನಿರ್ದೇಶಕನಾಗಿ ಅವರು ಗುರುತಿಸಿಕೊಂಡಿದ್ದರು. ಕನ್ನಡ ಚಿತ್ರರಂಗದಲ್ಲಿ ಅವರಿಗೆ ಬಹಳ ಬೇಡಿಕೆ ಇತ್ತು. ಕುಂದಾಪುರದಲ್ಲಿ ಅವರು ಕೊನೆಯುಸಿರು ಎಳೆದಿದ್ದಾರೆ. ದಿನೇಶ್ ಮಂಗಳೂರು ನಿಧನದಿಂದ ಚಿತ್ರರಂಗಕ್ಕೆ ದೊಡ್ಡ ನಷ್ಟವಾಗಿದೆ.

ಕನ್ನಡ ಚಿತ್ರರಂಗಕ್ಕೆ ಇದು ನೋವಿನ ಸುದ್ದಿ. ನಟ, ಕಲಾ ನಿರ್ದೇಶಕ ದಿನೇಶ್ ಮಂಗಳೂರು  ಅವರು ನಿಧನರಾಗಿದ್ದಾರೆ. ಇಂದು (ಆಗಸ್ಟ್ 25) ಕುಂದಾಪುರದಲ್ಲಿ ಬೆಳಗಿನ‌ಜಾವ ಅವರು ಕೊನೆಯುಸಿರು ಎಳೆದಿದ್ದಾರೆ. ಮನೆಯಲ್ಲೇ ಅವರು ನಿಧನರಾದರು. ‘ಆ ದಿನಗಳು’, ‘ಕೆಜಿಎಫ್’ (KGF), ‘ಉಳಿದವರು ಕಂಡಂತೆ’, ‘ಕಿಚ್ಚ’, ‘ಕಿರಿಕ್ ಪಾರ್ಟಿ’ ಮುಂತಾದ ಸಿನಿಮಾಗಳಲ್ಲಿ ದಿನೇಶ್ ಮಂಗಳೂರು ಅವರು ನಟಿಸಿದ್ದರು. ಕನ್ನಡ ಚಿತ್ರರಂಗದಲ್ಲಿ ಅವರು ಬಹುಬೇಡಿಕೆಯ ಪೋಷಕ ನಟನಾಗಿ ಅವರು ಗುರುತಿಸಿಕೊಂಡಿದ್ದರು. ದಿನೇಶ್ ಮಂಗಳೂರು ನಿಧನಕ್ಕೆ ಚಿತ್ರರಂಗದ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ.
ಬಣ್ಣದ ಲೋಕದಲ್ಲಿ ದಿನೇಶ್ ಮಂಗಳೂರು ಅವರು ಅಪಾರ ಅನುಭವ ಹೊಂದಿದ್ದರು. ‘ಕಾಂತಾರ’ ಚಿತ್ರದ ಶೂಟಿಂಗ್​ ವೇಳೆ ಅವರಿಗೆ ಪಾರ್ಶ್ವವಾಯು ಆಗಿತ್ತು. ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ ಒಂದು ವಾರದ ಹಿಂದೆ ಅವರು ಮತ್ತೆ ಅಸ್ವಸ್ಥರಾಗಿದ್ದರು. ಅಂಕದಕಟ್ಟೆ ಸರ್ಜನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನಟ ಮಂಗಳೂರು ದಿನೇಶ್​ ಮರಣ ಹೊಂದಿದ್ದಾರೆ.

ಮಂಗಳೂರು ದಿನೇಶ್ ಅವರ ಅಗಲಿಕೆಯಿಂದ ಅಭಿಮಾನಿಗಳಿಗೆ, ಆಪ್ತರಿಗೆ, ಕುಟುಂಬದವರಿಗೆ ತೀವ್ರ ನೋವುಂಟಾಗಿದೆ. ‘ಕಲಾ ನಿರ್ದೇಶಕ, ಕಲಾವಿದ, ನಿರ್ಮಾಪಕ, ಸನ್ಮಿತ್ರ ದಿನೇಶ್ ಮಂಗ್ಳುರ್ ಇನ್ನಿಲ್ಲ. ಹೋಗಿ ಬಾ ಮಿತ್ರಾ’ ಎಂದು ನಿರ್ದೇಶಕ ಪಿ. ಶೇಷಾದ್ರಿ ಅವರು ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

Related Posts

ರಾಮ್‌ಚರಣ್‌, ಕಿಚ್ಚ ಸುದೀಪ್‌ ಬಾಡಿಗಾರ್ಡ್‌ಗಳ ನಂತರ ಈಗ ಯಶ್‌ ಅಂಗರಕ್ಷಕನ ಹವಾ!

ಚಿತ್ರರಂಗದಲ್ಲಿ ನೆಚ್ಚಿನ ನಟರ ಜೊತೆಗೆ ಅವರ ಪರ್ಸನಲ್‌ ಬಾಡಿಗಾರ್ಡ್‌ಗಳೂ ಇತ್ತೀಚೆಗೆ ಭಾರಿ ಸದ್ದು ಮಾಡುತ್ತಿದ್ದು, ಅಭಿಮಾನಿಗಳಲ್ಲಿ ಸಖತ್ ಟ್ರೆಂಡ್ ಸೃಷ್ಟಿಸುತ್ತಿದ್ದಾರೆ. ನಟ ರಾಮ್‌ ಚರಣ್‌ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾ ‘ಪೆದ್ದಿ’ ಪ್ರಚಾರದ ವೇಳೆಯಲ್ಲಿ ಅವರ ಪರ್ಸನಲ್ ಸೆಕ್ಯೂರಿಟಿ ಗಾರ್ಡ್, ಆಫ್ರಿಕಾ…

ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ !

  ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿರುವ ‘ರಾಮಾಯಣ’ ಟ್ರೇಲರ್ ಭಾರಿ ಧೂಳೆಬ್ಬಿಸುತ್ತಿದೆ. ರಾವಣನಾಗಿ ರಾಕಿಂಗ್ ಸ್ಟಾರ್ ಯಶ್ ಅವರ ರೌದ್ರಾವತಾರದ ಎಂಟ್ರಿಗೆ ಪ್ರೇಕ್ಷಕರು ಥಿಯೇಟರ್‌ನಲ್ಲಿ ಹುಚ್ಚೆದ್ದು ಕುಣಿದಿದ್ದು, ಇಡೀ ಟ್ರೇಲರ್ ಯಶ್ ಅವರ ಅಪ್ರತಿಮ ಡಾಮಿನೇಷನ್‌ನಿಂದ ಕೂಡಿದೆ ಎಂದು ಫ್ಯಾನ್ಸ್ ಕೊಂಡಾಡುತ್ತಿದ್ದಾರೆ. ‘ರಾಮಾಯಣ’ ಟ್ರೇಲರ್…

You Missed

ಸೆಪ್ಟೆಂಬರ್ 11ರ ಚಿನ್ನದ ದರ: 10 ಗ್ರಾಂ ಚಿನ್ನದ ಬೆಲೆಯಲ್ಲಿ 2,400 ರೂ ಇಳಿಕೆ

ಸೆಪ್ಟೆಂಬರ್ 11ರ ಚಿನ್ನದ ದರ: 10 ಗ್ರಾಂ ಚಿನ್ನದ ಬೆಲೆಯಲ್ಲಿ 2,400 ರೂ ಇಳಿಕೆ

lja5nqb73ba7bxod16

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!