ರಾಷ್ಟ್ರಕವಿ ಕುವೆಂಪುಗೆ ಮರಣೋತ್ತರ ಭಾರತ ರತ್ನ ನೀಡುವಂತೆ ಶಿಫಾರಸು ಮಾಡಬೇಕೆಂದು ಮನವಿ.

ಮೈಸೂರು : ರಾಷ್ಟ್ರಕವಿ ಕುವೆಂಪು ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಕುವೆಂಪು ವಿಶ್ವಮಾನವ ಕ್ಷೇಮಾಭಿವೃದ್ಧಿ ಟ್ರಸ್ಟ್ ಆಗ್ರಹಿಸಿದೆ.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಟ್ರಸ್ಟ್‌ನ ಅಧ್ಯಕ್ಷ ಹೆಚ್.ಕೆ.ರಾಮು ಮಾತನಾಡಿ, “ಆ.31ರಂದು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಈ ಸಂಬಂಧ ಮನವಿಪತ್ರವನ್ನು ಸಲ್ಲಿಸಲಾಗುವುದು,” ಎಂದು ತಿಳಿಸಿದರು. ಈ ಮನವಿಗೆ ಶಾಸಕ ಜಿ.ಟಿ.ದೇವೇಗೌಡ, ಕೆ.ಹರೀಶ್ ಗೌಡ, ಮಾಜಿ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಜ್ಞಾನಪೀಠ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ ಸೇರಿದಂತೆ ಅನೇಕ ಗಣ್ಯರು ಬೆಂಬಲ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸುವ ಸಂದರ್ಭದಲ್ಲಿ ಇವರೂ ಉಪಸ್ಥಿತರಿರಲಿದ್ದಾರೆ ಎಂದರು.

ಹಿರಿಯ ಸಾಹಿತಿ ಡಾ.ಸಿ.ಪಿ. ಕೃಷ್ಣಕುಮಾರ್ ಅವರು ಮಾತನಾಡಿ, “ಕುವೆಂಪು ಎಂದರೆ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯ ಶತಪುರುಷ. ಯುಗದ ಕವಿ, ಜಗದ ಕವಿ ಎಂಬೆಲ್ಲಾ ಬಿರುದಿನಿಂದ ಭೂಷಿತರು. ಅವರ ಹೆಸರನ್ನು ಕೇಳದವರು ಕನ್ನಡದಲ್ಲಿ ಯಾರೂ ಇಲ್ಲ. ಅವರ ಸಾಮಾಜಿಕ-ಮಾನವೀಯ ಸಂದೇಶಕ್ಕೆ ‘ವಿಶ್ವರತ್ನ’ ಎಂಬ ಬಿರುದು ಕೂಡ ಯೋಗ್ಯವಾಗಿದೆ,” ಎಂದರು.

“ಅವರು ಬದುಕಿದ್ದಾಗಲೇ ಭಾರತ ರತ್ನ ಲಭಿಸಿದ್ದರೆ ಇನ್ನೂ ಹೆಚ್ಚಿನ ಮಹತ್ವ ಇದ್ದೀತು. ದುರದೈವವಶಾತ್ ಅದು ಸಾಧ್ಯವಾಗಲಿಲ್ಲ. ಅವರ ಕೃತಿಗಳು ಸಮಯಕ್ಕೆ ಸರಿಯಾಗಿ ಇಂಗ್ಲಿಷಿಗೆ ಭಾಷಾಂತರವಾಗಿದ್ದರೆ ನೊಬೆಲ್ ಪ್ರಶಸ್ತಿ ಕೂಡ ಸಾಧ್ಯವಾಗುತ್ತಿತ್ತು,” ಎಂದೂ ಅವರು ವಿಷಾದ ವ್ಯಕ್ತಪಡಿಸಿದರು.

ಪ್ರೊ.ಸಿ. ನಾಗಣ್ಣ ಅವರು ಮಾತನಾಡಿ, “ಈಗ ನಾವು ಸಕಾರಾತ್ಮಕ ಚಿಂತನೆಯ ಕಾಲದಲ್ಲಿ ಇದ್ದೇವೆ. ಕುವೆಂಪುಗೆ ಭಾರತ ರತ್ನ ಪ್ರಶಸ್ತಿ ದೊರಕಬೇಕು ಎಂಬ ಒತ್ತಾಸೆಯು ಕನ್ನಡಿಗರ ಮನಸ್ಸಿನಲ್ಲಿ ಬೆಳೆಯುತ್ತಿದೆ. ಇದು ಕನ್ನಡ ಭಾಷೆಯ ಬೆಳವಣಿಗೆಯ ಜೊತೆಗೆ ರಾಜ್ಯದ ಅಭಿವೃದ್ಧಿಗೂ ನಾಂದಿ ಆಗಲಿದೆ,” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸುದ್ದಿಗೋಷ್ಠಿಯಲ್ಲಿ ಕಸಾಪದ ಮಾಜಿ ಅಧ್ಯಕ್ಷ ಎಂ. ಚಂದ್ರಶೇಖರ್ ಹಾಗೂ ಜಯಣ್ಣ ಸಹ ಭಾಗವಹಿಸಿದ್ದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಸೀಸನ್ 13 ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಸತತ 12 ಸೀಸನ್‌ಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಮೊದಲ ಸೀಸನ್ ನೆನಪುಗಳು ಯಾವಾಗಲೂ ಅತ್ಯಂತ ಪ್ರಿಯವಾದವು. ಈ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!