ಕಾಮನ್ ಲಾ ಅಡ್ಮಿಷನ್ ಟೆಸ್ಟ್‌ನಲ್ಲಿ ರೋಹನ್ ವಿ. ಗಂಗಡ್ಕರ್ ರಾಜ್ಯಕ್ಕೆ ಎರಡನೇ ಸ್ಥಾನ

ರಾಷ್ಟ್ರ ಮಟ್ಟದಲ್ಲಿ ನಡೆಯುವ ಕಾಮನ್ ಲಾ ಅಡ್ಮಿಷನ್ ಟೆಸ್ಟ್‌ನಲ್ಲಿ ಮೈಸೂರಿನ ಕಾನೂನು ವಿದ್ಯಾರ್ಥಿ ರೋಹನ್ ವಿ ಗಂಗಡ್ಕರ್ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾರೆ. ರಾಷ್ಟ್ರಮಟ್ಟದಲ್ಲಿ ಒಟ್ಟು 737 ಸೀಟುಗಳಿದ್ದು ರೋಹನ್ 36ನೇ ರ‌್ಯಾಂಕ್ ಗಳಿಸಿದ್ದಾರೆ. ಜತೆಗೆ ರಾಜ್ಯ ಮಟ್ಟದಲ್ಲಿ 10 ಸೀಟುಗಳಿದ್ದು 2ನೇ ರ‌್ಯಾಂಕ್ ಪಡೆದಿದ್ದಾರೆ. ಈ ಪರೀಕ್ಷೆಯಲ್ಲಿ ವಿವಿಧ ರಾಜ್ಯದ ಸಾವಿರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು.‌

ರೋಹನ್ ವಿ ಗಂಗಡ್ಕರ್ ಹಿರಿಯ ವಕೀಲರು ಹಾಗೂ ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ ಗೌರವ ಸಂಪಾದಕ ಎಚ್ ಎನ್ ವೆಂಕಟೇಶ್ ಹಾಗೂ ಕೆ ಎ‌ ಎಸ್ ಅಧಿಕಾರಿ ಮಂಜುಳಾ ಅವರ ಪುತ್ರ. ರೋಹನ್ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಮೊದಲ ಸ್ಥಾನ ಗಳಿಸಿದ್ದರು. ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ್ದರು.

ಸದ್ಯ ಮೈಸೂರು ಜೆ ಎಸ್ ಎಸ್ ಕಾನೂನು ಕಾಲೇಜಿನಲ್ಲಿ ಓದುತ್ತಿರುವ ರೋಹನ್ ಹಲವು ರಾಷ್ಟ್ರ ಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ಭಾಗವಹಿಸಿ ಮೊದಲ ಸ್ಥಾನ ಗಳಿಸಿ ರಾಜ್ಯ ಹಾಗೂ ಮೈಸೂರು ಜಿಲ್ಲೆಗೆ ಕೀರ್ತಿ ತಂದುಕೊಟ್ಟಿದ್ದಾರೆ. ಅಷ್ಟೇ ಅಲ್ಲದೆ, ಹೈಕೋರ್ಟ್ ಸುಪ್ರೀಂ ಕೋರ್ಟ್ ಜಿಲ್ಲಾ ಹಾಗೂ ರಾಜ್ಯ ಪೊಲೀಸ್ ಸೈಬರ್ ಕಚೇರಿಯಲ್ಲಿ ಯಶಸ್ವಿಯಾಗಿ ಇಂಟೆನ್‌ಶಿಪ್ ಪೂರ್ಣಗೊಳಿಸಿದ್ದಾರೆ.

ರೋಹನ್ ವಿ ಗಂಗಡ್ಕರ್ ತಂದೆ ಎಚ್. ಎನ್. ವೆಂಕಟೇಶ್ ಅವರ ಲಾಗೈಡ್ ಪತ್ರಿಕೆ ಆನ್‌ಲೈನ್ ಸ್ವರೂಪದಲ್ಲಿ ಹೊರಬರಲು ಹಾಗೂ ಅದರಲ್ಲಿ ಜನ ಸಾಮಾನ್ಯರಿಗೆ ಬೇಕಾದ ಲೇಖನಗಳು ಹಾಗೂ ಮಹತ್ವದ ತೀರ್ಪುಗಳ ಲೇಖನ ಹೊರತರುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ.

  • Related Posts

    UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

    ನವದೆಹಲಿ: ಕೇಂದ್ರ ಲೋಕ ಸೇವಾ ಆಯೋಗ (UPSC) 2025ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಪ್ರಕಟಿಸಿದೆ. ಈ ಮೂಲಕ ಅನುಜ್‌ ಅಗ್ನಿಹೋತ್ರಿಗೆ ದೇಶಕ್ಕೆ ಫಸ್ಟ್ ರ‍್ಯಾಂಕ್ ಪಡೆದುಕೊಂಡಿದ್ದಾರೆ. 2025ರ ಆಗಸ್ಟ್ ತಿಂಗಳಲ್ಲಿ ನಾಗರಿಕ ಸೇವೆಗಳ ಪರೀಕ್ಷೆಗಳು ನಡೆದಿದ್ದವು. ಇದೀಗ…

    ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

    ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಉಡುಗೊರೆ ಕೊಟ್ಟಿದ್ದಾರೆ ಅಂತ ನೋಡೋದಾದ್ರೆ, ರಾಜ್ಯದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 7 ಸಾವಿರ ಕೋಟಿ ಸರ್ಕಾರದ ಅನುದಾನವನ್ನು ಜಿಬಿಎ ಮೂಲಕ ಹಂಚಿಕೆ ಮಾಡಲು ಸೂಚನೆ, ಒಟ್ಟು 8 ಸಾವಿರ ಕೋಟಿ ಆಯವ್ಯಯಕ್ಕೆ ಜಿಬಿಎ ಅನುಮೋದನೆ…

    You Missed

    UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

    UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

    ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

    ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

    ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

    ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

    2026 ರ ಬಜೆಟ್​​ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಸಿಕ್ತು?

    ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

    ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

    ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!

    ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!