ವಿಚಾರಣೆ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಸರ್ಕಾರಿ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದರು. ಈ ಮನವಿಯನ್ನು ಪರಿಗಣಿಸಿದ ನ್ಯಾಯಾಲಯ, ಜಾಮೀನು ಅರ್ಜಿಯ ವಿಚಾರಣೆಯನ್ನು ನಾಳೆಗೆ ಮುಂದೂಡಿತು.

RTI ಕಾರ್ಯಕರ್ತ ಗಂಗರಾಜು ವಿರುದ್ಧ ಹಣಕಾಸು ವ್ಯವಹಾರ ಸಂಬಂಧ ವ್ಯಕ್ತಿಯೊಬ್ಬರನ್ನು ಅಪಾಯಕಾರಿ ರೀತಿಯಲ್ಲಿ ಕಾರಿನ ಬ್ಯಾನೆಟ್ ಮೇಲೆ ಕೂರಿಸಿಕೊಂಡು ಕಾರು ಚಲಾಯಿಸಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಮೈಸೂರಿನ ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಪ್ರಕರಣದಲ್ಲಿ ಆರೋಪಿ ಪರವಾಗಿ ಹಿರಿಯ ವಕೀಲ ಎಸ್. ಲೋಕೇಶ್ ವಕಾಲತ್ತು ವಹಿಸಿಕೊಂಡಿದ್ದಾರೆ. ನಾಳೆಯ ವಿಚಾರಣೆಯಲ್ಲಿ ಸರ್ಕಾರದ ಪರದಿಂದ ಆಕ್ಷೇಪಣೆ ಸಲ್ಲಿಕೆಯಾಗುವ ಸಾಧ್ಯತೆ ಇದ್ದು, ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಿರೀಕ್ಷಿಸಲಾಗಿದೆ.




