RTI ಕಾರ್ಯಕರ್ತ ಗಂಗರಾಜು ಜಾಮೀನು ಅರ್ಜಿ ನಾಳೆಗೆ ಮುಂದೂಡಿದೆ.

ಮೈಸೂರು : RTI ಕಾರ್ಯಕರ್ತ ಗಂಗರಾಜು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಾಳೆಗೆ ಮುಂದೂಡಿದೆ. ಮೈಸೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಮಂಗಳವಾರ ಅರ್ಜಿ ವಿಚಾರಣೆ ನಡೆಯಿತು.

ವಿಚಾರಣೆ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಸರ್ಕಾರಿ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದರು. ಈ ಮನವಿಯನ್ನು ಪರಿಗಣಿಸಿದ ನ್ಯಾಯಾಲಯ, ಜಾಮೀನು ಅರ್ಜಿಯ ವಿಚಾರಣೆಯನ್ನು ನಾಳೆಗೆ ಮುಂದೂಡಿತು.

RTI ಕಾರ್ಯಕರ್ತ ಗಂಗರಾಜು ವಿರುದ್ಧ ಹಣಕಾಸು ವ್ಯವಹಾರ ಸಂಬಂಧ ವ್ಯಕ್ತಿಯೊಬ್ಬರನ್ನು ಅಪಾಯಕಾರಿ ರೀತಿಯಲ್ಲಿ ಕಾರಿನ ಬ್ಯಾನೆಟ್ ಮೇಲೆ ಕೂರಿಸಿಕೊಂಡು ಕಾರು ಚಲಾಯಿಸಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಮೈಸೂರಿನ ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಪ್ರಕರಣದಲ್ಲಿ ಆರೋಪಿ ಪರವಾಗಿ ಹಿರಿಯ ವಕೀಲ ಎಸ್. ಲೋಕೇಶ್ ವಕಾಲತ್ತು ವಹಿಸಿಕೊಂಡಿದ್ದಾರೆ. ನಾಳೆಯ ವಿಚಾರಣೆಯಲ್ಲಿ ಸರ್ಕಾರದ ಪರದಿಂದ ಆಕ್ಷೇಪಣೆ ಸಲ್ಲಿಕೆಯಾಗುವ ಸಾಧ್ಯತೆ ಇದ್ದು, ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಿರೀಕ್ಷಿಸಲಾಗಿದೆ.

Related Posts

ಅಶೋಕ್ ಲೈಲ್ಯಾಂಡ್ ಸರ್ವಿಸ್ ಸೆಂಟರ್ ನಿರ್ಲಕ್ಷ್ಯ! ಲಾರಿ ಮಾಲೀಕನಿಗೆ 27 ಲಕ್ಷ ರೂ. ನಷ್ಟ, ಪರಿಹಾರಕ್ಕೆ ಒತ್ತಾಯ!

ಮೈಸೂರು : ಅಶೋಕ್ ಲೈಲ್ಯಾಂಡ್ ಸರ್ವಿಸ್ ಸೆಂಟರ್‌ನಲ್ಲಿ ಒಂದು ಸಣ್ಣ ರಿಪೇರಿಗೆ ನಿಲ್ಲಿಸಿದ್ದ ಲಾರಿಯನ್ನು 9 ತಿಂಗಳಾದರೂ ರಿಪೇರಿ ಮಾಡಿ ನೀಡದ ಕಾರಣ ಲಾರಿ ಮಾಲೀಕನಿಗೆ 27 ಲಕ್ಷ ರೂ. ನಷ್ಟ ಉಂಟಾಗಿರುವ ಘಟನೆ ನಡೆದಿದ್ದು, ಅಶೋಕ್ ಲೈಲ್ಯಾಂಡ್ ಸರ್ವಿಸ್ ಸೆಂಟರ್‌ನವರು…

ಕ್ವಾಲಿಫೈಯರ್ ಆಡದೆಯೇ ಆರ್‌ಸಿಬಿ ಫೈನಲ್ ತಲುಪಬಹುದು..!

ಐಪಿಎಲ್ 2026 ಕ್ವಾಲಿಫೈಯರ್ 1 ರಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಧರ್ಮಶಾಲಾದಲ್ಲಿ ಸೆಣಸಾಡಲಿವೆ. ಈ ಪಂದ್ಯ ಮಳೆಯಿಂದ ರದ್ದಾದರೆ, ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಆರ್‌ಸಿಬಿ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಸೋತ ತಂಡಕ್ಕೆ ಕ್ವಾಲಿಫೈಯರ್ 2 ಆಡಲು ಮತ್ತೊಂದು ಅವಕಾಶವಿದ್ದರೂ,…

You Missed

ಅಶೋಕ್ ಲೈಲ್ಯಾಂಡ್ ಸರ್ವಿಸ್ ಸೆಂಟರ್ ನಿರ್ಲಕ್ಷ್ಯ! ಲಾರಿ ಮಾಲೀಕನಿಗೆ 27 ಲಕ್ಷ ರೂ. ನಷ್ಟ, ಪರಿಹಾರಕ್ಕೆ ಒತ್ತಾಯ!

ಅಶೋಕ್ ಲೈಲ್ಯಾಂಡ್ ಸರ್ವಿಸ್ ಸೆಂಟರ್ ನಿರ್ಲಕ್ಷ್ಯ! ಲಾರಿ ಮಾಲೀಕನಿಗೆ 27 ಲಕ್ಷ ರೂ. ನಷ್ಟ, ಪರಿಹಾರಕ್ಕೆ ಒತ್ತಾಯ!

ಕ್ವಾಲಿಫೈಯರ್ ಆಡದೆಯೇ ಆರ್‌ಸಿಬಿ ಫೈನಲ್ ತಲುಪಬಹುದು..!

ಕ್ವಾಲಿಫೈಯರ್ ಆಡದೆಯೇ  ಆರ್‌ಸಿಬಿ ಫೈನಲ್ ತಲುಪಬಹುದು..!

ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್!

ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್!

RTI ಕಾರ್ಯಕರ್ತ ಗಂಗರಾಜು ಜಾಮೀನು ಅರ್ಜಿ ನಾಳೆಗೆ ಮುಂದೂಡಿದೆ.

RTI ಕಾರ್ಯಕರ್ತ ಗಂಗರಾಜು  ಜಾಮೀನು ಅರ್ಜಿ ನಾಳೆಗೆ ಮುಂದೂಡಿದೆ.

ವಾಹನ ಸವಾರರಿಗೆ ಇಂಧನ ಬೆಲೆ ಏರಿಕೆ ಬರೆ: ಪೆಟ್ರೋಲ್, ಡೀಸೆಲ್ ಬೆನ್ನಲ್ಲೇ ಈಗ ಸಿಎನ್‌ಜಿ ದರವೂ ದುಬಾರಿ!

ವಾಹನ ಸವಾರರಿಗೆ ಇಂಧನ ಬೆಲೆ ಏರಿಕೆ ಬರೆ: ಪೆಟ್ರೋಲ್, ಡೀಸೆಲ್ ಬೆನ್ನಲ್ಲೇ ಈಗ ಸಿಎನ್‌ಜಿ ದರವೂ ದುಬಾರಿ!

ಗುರುಗಳಾದ KR ಸುಬ್ಬು ಕೃಷ್ಣ ಸ್ಮರಣಾರ್ಥ “ಲಾ ಗೈಡ್” ಸಂಸ್ಥೆಯಿಂದ ದತ್ತಿ ಪ್ರಶಸ್ತಿ

ಗುರುಗಳಾದ KR ಸುಬ್ಬು ಕೃಷ್ಣ  ಸ್ಮರಣಾರ್ಥ “ಲಾ ಗೈಡ್” ಸಂಸ್ಥೆಯಿಂದ  ದತ್ತಿ ಪ್ರಶಸ್ತಿ