ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಶೇ 94.19ರಷ್ಟು ಪ್ರಗತಿ ಸಮೀಕ್ಷೆ: ಮಂಡ್ಯ ಜಿಲ್ಲೆಗೆ 3ನೇ ಸ್ಥಾನ ಗಳಿಸಿದೆ.

ಮಂಡ್ಯ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸುತ್ತಿರುವ ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ’ಗೆ ಒಂದು ದಿನ ಮಾತ್ರ ಬಾಕಿ ಇದ್ದು, ಇದುವರೆಗೆ ಜಿಲ್ಲೆಯಲ್ಲಿ ಶೇ 94.19ರಷ್ಟು ಪ್ರಗತಿಯಾಗಿದೆ. ರಾಜ್ಯದ 31 ಜಿಲ್ಲೆಗಳ ಪೈಕಿ ಮಂಡ್ಯ ಜಿಲ್ಲೆ 3ನೇ ಸ್ಥಾನ ಗಳಿಸಿದೆ.

ತುಮಕೂರು ( 95.55) ಮತ್ತು ಚಿಕ್ಕಮಗಳೂರು (ಶೇ 95.33) ಮೊದಲ ಮತ್ತು ಎರಡನೇ ಸ್ಥಾನದಲ್ಲಿವೆ. ಸೆಪ್ಟೆಂಬರ್ 22005 ಅಕ್ಟೋಬ‌ರ್ 7ರೊಳಗೆ ಸಮೀಕ್ಷೆ ಪೂರ್ಣಗೊಳಿಸಲು ಒಟ್ಟು 16 ದಿನಗಳ ಗಡುವು ನೀಡಲಾಗಿತ್ತು. ಕೆಲವು ಜಿಲ್ಲೆಗಳಲ್ಲಿ ಸಮೀಕ್ಷೆ ಪೂರ್ಣಗೊಳ್ಳದ ಕಾರಣ ಸರ್ಕಾರ ಮತ್ತೆ ಅ.18ರವರೆಗೆ ದಿನಾಂಕ ವಿಸ್ತರಿಸಿದೆ.

ಮಂಡ್ಯ 5,04,016 ಜಿಲ್ಲೆಯಲ್ಲಿ 94.19ರಷ್ಟು ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿದೆ. ಅ.17ರಂದು 3,883 ಕುಟುಂಬಗಳ ជថ្មី ಮಾಡಲಾಯಿತು. ಅ.18ರಂದು ಕಡೇ ದಿನ ಬಾಕಿ ಕುಟುಂಬಗಳ ಸಮೀಕ್ಷೆ ಪೂರ್ಣಗೊಳಿಸುವ ಗುರಿಯನ್ನು ಜಿಲ್ಲಾಡಳಿತ ಹಾಕಿಕೊಂಡಿದೆ. ಜಿಲ್ಲೆಯಲ್ಲಿ 18,66,350 ಜನಸಂಖ್ಯೆಯಿದ್ದು, ಇದುವರೆಗೆ 17,57,934 ಜನರನ್ನು ಸಮೀಕ್ಷೆ ಮಾಡಲಾಗಿದೆ. ಕೃಷ್ಣರಾಜಪೇಟೆ (ಶೇ 92.5), ಮದ್ದೂರು (ಶೇ 95.8), ಮಳವಳ್ಳಿ ( 94.2), 2 ( 92.2), ಪಾಂಡವಪುರ (ಶೇ.95.3) ಹಾಗೂ ಶ್ರೀ-ರಂಗಪಟ್ಟಣ ತಾಲ್ಲೂಕಿನಲ್ಲಿ (ಶೇ 90.2) ರಷ್ಟು ಪ್ರಗತಿಯಾಗಿದೆ.

ಈ ಸಮೀಕ್ಷೆಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಮಂಡ್ಯ ನಗರದ ವಾರ್ಡ್ ನಂ.20ರಲ್ಲಿರುವ ಬಸವರಾಜು ಎಚ್. ಸಿ ಅವರ ಮನೆಯಿಂದ ಸೆ.22ರಂದು ಚಾಲನೆಸಿ ಚಾಲನೆ ನೀಡಿದ್ದರು.
ಮಂಡ್ಯ ಜಿಲ್ಲೆಯಲ್ಲಿ 5,04,016 ಕುಟುಂಬಗಳಿದ್ದು, 4,651 ಸಮೀಕ್ಷೆ-ದಾರರನ್ನು ನಿಯೋಜಿಸಲಾಗಿದೆ. ಒಬ್ಬ ಗಣತಿದಾರರಿಗೆ 120 ಕುಟುಂಬಗಳಂತೆ ಬ್ಲಾಕ್ ಹಂಚಿಕೆ ಮಾಡಲಾಗಿದೆ. 20 ಗಣತಿದಾರರಿಗೆ ಒಬ್ಬ ಮೇಲ್ವಿಚಾರಕರು.

ನಾಗಮಂಗಲ ಪ್ರಥಮ: ಜಿಲ್ಲೆಯ 7 ತಾಲ್ಲೂಕುಗಳ ಪೈಕಿ ನಾಗಮಂಗಲ ತಾಲ್ಲೂಕಿನಲ್ಲಿ ಶೇ 1000 ಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ. ತಾಲ್ಲೂಕಿನಲ್ಲಿ 1,94,201 ಜನಸಂಖ್ಯೆಯಿದ್ದು, ಎಲ್ಲರನ್ನೂ ಸಮೀಕ್ಷೆ ಮಾಡಲಾಗಿದೆ ಎಂದು ಸಮೀಕ್ಷೆದಾರರು ಮಾಹಿತಿ ನೀಡಿದ್ದಾರೆ.ಮಂಡ್ಯ ಜಿಲ್ಲೆಯಲ್ಲಿ 5,04,016 ಕುಟುಂಬಗಳಿದ್ದು, 4,651 ಸಮೀಕ್ಷೆ-ದಾರರನ್ನು ನಿಯೋಜಿಸಲಾಗಿದೆ. ಒಬ್ಬ ಗಣತಿದಾರರಿಗೆ 120 ಕುಟುಂಬಗಳಂತೆ ಬ್ಲಾಕ್ ಹಂಚಿಕೆ ಮಾಡಲಾಗಿದೆ. 20 ಗಣತಿದಾರರಿಗೆ ಒಬ್ಬ ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ.

ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೆಲವು ಮನೆಗಳ ಆರ್.ಆ‌ರ್.ಸಂಖ್ಯೆ ಸಿಗದೆ ಸಮೀಕ್ಷೆದಾರರು ಪರದಾಡಿದ್ದಾರೆ. ఒట్టు 60 ಪ್ರಶ್ನೆಗಳಿಗೆ ಉತ್ತರ ಪಡೆಯುವುದು ದೊಡ್ಡ ಸವಾಲು’ ಎಂದು ಸಮೀಕ್ಷೆ ಕಾರ್ಯದ ಅಧಿಕಾರಿಯೊಬ್ಬರು ತಿಳಿಸಿದರು.’ಸಮೀಕ್ಷೆಗೆ ಹೋದ ಸಂದರ್ಭಕೆಲ ಕುಟುಂಬಗಳು ಪೂರ್ಣ ಮಾಹಿತಿ ನೀಡಿಲ್ಲ. ಇನ್ನು ಕೆಲವರು ಮಾಹಿತಿ ನೀಡಲು ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ಜಾತಿ ಸಮೀಕ್ಷೆ ನೀಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ಕೆಲವು ತಿಳಿಸಿದರು.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು