ಬೆಂಗಳೂರು: ಧರ್ಮಸ್ಥಳ ಕ್ಷೇತ್ರಕ್ಕೆ ಅವಮಾನ ಎಸಗಿದ ಸಮೀರ್ ಬಂಧನಕ್ಕೆ ಹೋದಾಗ ಆತ ನಾಪತ್ತೆಯಾಗಿರುವುದು ವಿಚಾರ ಬೆಳಕಿಗೆ ಬಂದಿದೆ. ಸಮೀರ್ ವಿರುದ್ಧ ಸರಣಿ ದೂರುಗಳು ರಾಜ್ಯಾದ್ಯಂತ ದಾಖಲಾಗುತ್ತಿದ್ದಂತೆ ಎಚ್ಚೆತ್ತ ಗೃಹ ಇಲಾಖೆ ಆತನ ಬಂಧನಕ್ಕೆ ಸೂಚಿಸಿತ್ತು. ಅದರಂತೆ ಆತನ ಮೊಬೈಲ್ ಸಂಖ್ಯೆಯ ಮೂಲಕ ಜಾಗ ಪತ್ತೆ ಹಚ್ಚಿದಾಗ ಬನ್ನೇರುಘಟ್ಟದ ನಿವಾಸ ತೋರಿಸಿತ್ತು.
ಈ ಆಧಾರದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಧರ್ಮಸ್ಥಳ ಠಾಣೆಯ ಸಬ್ ಇನ್ಸ್ಪೆಕ್ಟರ್, ಇಬ್ಬರು ಪೊಲೀಸ್ ಸಿಬ್ಬಂದಿ ಸಮೀರ್ನನ್ನು ಬಂಧಿಸಲು ಜಿಗಣಿಯ ಹುಲ್ಲಳ್ಳಿಯ ಕ್ರೈಸ್ಟ್ ಕಾಲೇಜು ಪಕ್ಕದಲ್ಲಿರುವ ಮನೆಗೆ ಬಂದಿದ್ದಾರೆ. ಧರ್ಮಸ್ಥಳ ಪೊಲೀಸರಿಗೆ ಬನ್ನೇರುಘಟ್ಟ ಪೊಲೀಸರು ಸಾಥ್ ನೀಡಿದ್ದಾರೆ.
ತಾಯಿ, ಸಹೋದರಿ ಜೊತೆ ನೆಲೆಸಿದ್ದ ಸಮೀರ್ ಪೊಲೀಸರು ಮನೆಗೆ ಬಂದಾಗ ಆತ ಮನೆಯಲ್ಲಿ ಇರಲಿಲ್ಲ. ಮನೆಯಲ್ಲಿ ಇಲ್ಲದ ಕಾರಣ ಸಮೀರ್ ಬಂದ ತಕ್ಷಣ ತಿಳಿಸುವಂತೆ ಕುಟುಂಬಸ್ಥರಿಗೆ ತಿಳಿಸಿ ಪೊಲೀಸರು ತೆರಳಿದ್ದಾರೆ. ಇದನ್ನೂ
ಈಗಾಗಲೇ ಸಮೀರ್ಗೆ ಮೂರು ಬಾರಿ ಪೊಲೀಸರು ನೋಟಿಸ್ ನೀಡಿದ್ದರು. ಮೂರು ಬಾರಿ ನೋಟಿಸ್ ನೀಡಿದರೂ ಪ್ರತಿಕ್ರಿಯೆ ನೀಡಿಲ್ಲ.ಹೀಗಾಗಿ ವಾರೆಂಟ್ ಪಡೆದು ಪೊಲೀಸರು ಬಂಧನಕ್ಕೆ ಆಗಮಿಸಿದ್ದರು.





