ಸಸ್ಪೆಂಡ್ ಆದ ಪೊಲೀಸ್ ಪೇದೆ ಸಲೀಂ ಪಾಷಾಗೆ ಸಿಎಂ ಮೆಡಲ್…

ಅಪರಾಧ ಪ್ರಕರಣಗಳಲ್ಲಿ ಆರೋಪಿಗಳ ಜೊತೆ ಸಂಪರ್ಕ, ಸಾರ್ವಜನಿಕರ ಆಸ್ತಿ ಕಳುವಿಗೆ ಪರೋಕ್ಷ ಸಹಾಯ, ದಾಖಲೆಗಳ ಸೋರಿಕೆ ಮಾಡುವ ಶಂಕೆ ಇವೆಲ್ಲಾ ಆರೋಪಗಳ ಹಿನ್ನಲೆ ಅಮಾನತಾದ ಮೈಸೂರು ಸಿಸಿಬಿ ಘಟಕದ ಮುಖ್ಯಪೇದೆ ಸಲೀಂ ಪಾಷಾಗೆ ಮುಖ್ಯಮಂತ್ರಿ ಪದಕ ಘೋಷಿಸಲಾಗಿದೆ.

ಒಂದು ತಿಂಗಳ ಹಿಂದೆ ಅಮಾನತಾದ ಸಲೀಂ ಪಾಷಾಗೆ ಮುಖ್ಯಮಂತ್ರಿಗಳ ಪದಕದ ಪಟ್ಟಿಯಲ್ಲಿ ಮುಖ್ಯಪೇದೆ ಸಲೀಂ ಪಾಷಾ ಹೆಸರು ಪ್ರಕಟವಾಗಿದ್ದು ಅಚ್ಚರಿಗೆ ಕಾರಣವಾಗಿದೆ. 2023 ನೇ ಸಾಲಿಗೆ ಆಯ್ಕೆಯಾದವರ ಸಿಬ್ಬಂದಿ ಅಧಿಕಾರಿಗಳ ಪಟ್ಟಿಯಲ್ಲಿ ಮುಖ್ಯಪೇದೆ ಸಲಾಂ ಪಾಷಾ ಹೆಸರು ಪ್ರಕಟವಾಗಿದೆ. ಮೇಟಗಳ್ಳಿ ಹಾಗೂ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕನ್ನಕಳುವು ಹಾಗೂ ಗಾಂಜಾ ಪ್ರಕರಣಗಳ ಆರೋಪಿಗಳ ಸಂಭಂಧಿಕರ ಜೊತೆ ಸಂಪರ್ಕ ಇಟ್ಟುಕೊಂಡಿರುವ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ಬಂದಿದೆ.

ಸಮಾಜಘಾತುಕ ಶಕ್ತಿಗಳ ಜೊತೆ ಕೈಜೋಡಿಸಿ ಸಾರ್ವಜನಿಕರ ಸ್ವತ್ತು ಕಳುವಾಗಲು ಕಾರಣೀಭೂತರಾಗಿರುತ್ತಾರೆ.ಇದರಿಂದಾಗಿ ಮುಂದಿನ ದಿನಗಳಲ್ಲಿ ಇಲಾಖೆಯ ಆಂತರಿಕ ಮತ್ತು ಗುಪ್ತಮಾಹಿತಿಗಳು ಸೋರಿಕೆಯಾಗಿ ಸಾರ್ವಜನಿಕರ ಸ್ವತ್ತುಗಳು ಹೆಚ್ಚು ಹೆಚ್ಚಾಗಿ ಕಾಣೆಯಾಗುವ ಸಾಧ್ಯತೆಗಳು ಇರುವುದಾಗಿ ಕಾರಣ ನೀಡಿ ಸಲೀಂ ಪಾಷಾ ರವರನ್ನ ಸಸ್ಪೆಂಡ್ ಮಾಡಲಾಗಿದೆ. ಹೀಗಿದ್ದೂ ಸಲೀಂ ಪಾಷಾ ಹೆಸರು ಮುಖ್ಯಮಂತ್ರಿಗಳ ಪದಕ ಗಳಿಸುವಲ್ಲಿ ಯಶಸ್ವಿಯಾಗಿರುವುದು ಇಲಾಖಾ ವ್ಯವಸ್ಥೆಯನ್ನ ಅನುಮಾನದಿಂದ ನೋಡುವಂತಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!