ಎಸ್ಬಿಐ ಮ್ಯಾನೇಜರ್ ವರ್ಗಾವಣೆ: ಸ್ಥಳೀಯ ಭಾಷೆ ಗೌರವಿಸುವುದು, ಜನರನ್ನು ಗೌರವಿಸಿದಂತೆ ಎಂದ ಸಿಎಂ

ಬೆಂಗಳೂರು: ಎಸ್ಬಿಐ ಬ್ರಾಂಚ್ ಮ್ಯಾನೇಜರ್ ಕನ್ನಡ ಮಾತನಾಡಲು ನಿರಾಕರಿಸಿರುವುದು ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಎಕ್ಸ್ ಪೋಸ್ಟ್ ಮಾಡಿರುವ ಅವರು, “ಆನೇಕಲ್ನ ಸೂರ್ಯನಗರ ಮ್ಯಾನೇಜರ್ ನಡವಳಿಕೆ ಖಂಡನೀಯವಾಗಿದೆ. ಅಧಿಕಾರಿಯನ್ನು ವರ್ಗಾವಣೆ ಮಾಡಿರುವ ಎಸ್ಬಿಐ ಕ್ರಮ ಮೆಚ್ಚುವಂತದ್ದಾಗಿದ್ದು, ಆ ಮೂಲಕ ಈ ವಿವಾದಕ್ಕೆ ತೆರೆಬಿದ್ದಿದೆ” ಎಂದಿದ್ದಾರೆ.


“ಆದರೆ, ಇಂಥ ಘಟನೆಗಳು ಮರುಕಳಿಸಬಾರದು. ಎಲ್ಲ ಬ್ಯಾಂಕ್ ಉದ್ಯೋಗಿಗಳು ಗ್ರಾಹಕರನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕು. ಸ್ಥಳೀಯ ಭಾಷೆಯಲ್ಲಿ ಮಾತನಾಡಲು ಎಲ್ಲ ಪ್ರಯತ್ನವನ್ನು ಮಾಡಬೇಕು” ಎಂದು ಮನವಿ ಮಾಡಿದ್ದಾರೆ.
“ಎಲ್ಲ ಬ್ಯಾಂಕ್ ಉದ್ಯೋಗಿಗಳಿಗೆ ಕಡ್ಡಾಯವಾಗಿ ಸ್ಥಳೀಯ ಭಾಷೆ, ಸಂಸ್ಕೃತಿ ಬಗ್ಗೆ ತರಬೇತಿ ನೀಡಲು ಕೇಂದ್ರ ಹಣಕಾಸು ಸಚಿವಾಲಯಕ್ಕೆ ಮನವಿ ಮಾಡುತ್ತೇನೆ. ಸ್ಥಳೀಯ ಭಾಷೆಯನ್ನು ಗೌರವಿಸುವುದು ಜನರನ್ನು ಗೌರವಿಸಿದ ಹಾಗೆ” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಆಗಿರುವುದೇನು?:
ಆನೇಕಲ್ ತಾಲೂಕಿನ ಚಂದಾಪುರದ ಸೂರ್ಯನಗರದಲ್ಲಿನ ಎಸ್ಬಿಐ ಬ್ಯಾಂಕ್ ಮ್ಯಾನೇಜರ್ ಚಳವಳಿಗಾರರೊಬ್ಬರಿಗೆ ಕನ್ನಡ ಮಾತನಾಡುವುದೇ ಇಲ್ಲ ಎಂದು ಪಟ್ಟು ಹಿಡಿದ ವಿಡಿಯೋ ವೈರಲಾಗಿತ್ತು. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದರು.


ಎಂದಿನಂತೆ ಕನ್ನಡ ಮಾತನಾಡದ ಮಹಿಳಾ ಮ್ಯಾನೇಜರ್ ಕೇವಲ ಇಂಗ್ಲಿಷ್ , ಹಿಂದಿಯಲ್ಲಿಯೇ ಪ್ರತಿಕ್ರಿಯಿಸುತ್ತಿರುವುದನ್ನು ಮೊಬೈಲ್ ಮೂಲಕ ದೃಶ್ಯ ಸೆರೆ ಮಾಡುತ್ತಲೇ, ತಮ್ಮ ಖಾತೆಯಲ್ಲಿ ಹರಿಬಿಟ್ಟ ಸ್ಥಳೀಯ ಮಹೇಶ್ ರೆಡ್ಡಿ ಎಂಬುವರು ‘ಕನ್ನಡ ಮಾತನಾಡಲೇ ಬೇಕು. ಅದು ಆರ್ಬಿಐ ನಿಯಮ’ ಎಂದು ಪಟ್ಟು ಹಿಡಿದಿದ್ದರು.
ಈ ವೇಳೆ ಮ್ಯಾನೇಜರ್ ಸವಾಲು ಹಾಕುತ್ತಲೇ ‘ಆರ್ಬಿಐ ನಲ್ಲಿ ಗೈಡ್ಲೈನ್ಸ್ ಎಲ್ಲಿದೆ. ಕನ್ನಡ ಮಾತನಾಡಬೇಕು ಎಂಬ ಮ್ಯಾಂಡೇಟರಿ ಏನಿಲ್ಲ. ನಾನು ಕನ್ನಡ ಮಾತನಾಡುವುದಿಲ್ಲ ‘ ಎಂದು ಅವರೂ ಕೂಡಾ ವಿಡಿಯೋ ಮಾಡಿಕೊಂಡಿದ್ದರು.
ವಿಡಿಯೋ ವೈರಲಾಗುತ್ತಿದ್ದಂತೆಯೇ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಆನೇಕಲ್ ಸುತ್ತಲಿನ ಎಲ್ಲ ಖಾಸಗಿ ಬ್ಯಾಂಕ್ಗಳಲ್ಲಿ ಪರಭಾಷಿಗರೇ ಕಾಣುತ್ತಿದ್ದು, ಸ್ಥಳೀಯರಿಗೆ ಬ್ಯಾಂಕ್ ಸೇವೆಗಳ ಸಮಗ್ರ ಮಾಹಿತಿ ದೊರೆಯದೇ ಪರದಾಡುತ್ತಿರುವ, ಬೆನ್ನಲ್ಲೇ ಆಗಾಗ ಇಂತಹ ಘಟನೆಗಳು ಮರುಕಳಿಸುತಿವೆ ಎಂಬ ಕೂಗು ಜೋರಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!