ಅರೇಹಳ್ಳಿಯಲ್ಲಿ ಭಾರೀ ಮಳೆಗೆ ಕುಸಿದು ಬಿದ್ದ ಶಾಲಾ ಕಾಂಪೌಂಡ್‌

ಅರೇಹಳ್ಳಿಯಲ್ಲಿ ಭಾರೀ ಮಳೆಗೆ ಕುಸಿದು ಬಿದ್ದ ಶಾಲಾ ಕಾಂಪೌಂಡ್‌

ಮಲೆನಾಡು ಬಾಗವಾದ ಅರೇಹಳ್ಳಿ ಹಾಗು ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದೆರಡು ದಿನಗಳಿಂದ ಮುಂಗಾರು ಮಳೆ ಚುರುಕುಗೊಂಡಿದ್ದು ಕಳೆದ ರಾತ್ರಿ ಸುರಿದ ದಾರಕಾರ ಮಳೆಗೆ ಸರ್ಕಾರಿ ಶಾಲೆಯ ಕಾಂಪೌಂಡ್ ಕುಸಿದು ಕುಸಿದು ಬಿದ್ದಿದೆ. ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪರಿಮಿತಿಯ ಸುತ್ತಲೂ ಸುಮಾರು ಹತ್ತು ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಕಾಂಪೌಂಡ್ ನ ಒಂದು ಬದಿಯ ಉದ್ದಗಲಕ್ಕೂ ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಕುಸಿದು ಬಿದ್ದಿದೆ.ಇದರಿಂದ ಪಕ್ಕದಲ್ಲೇ ನೂತನವಾಗಿ ನಿರ್ಮಿಸಲಾದ ರೈತ ಸಂಪರ್ಕ ಕೇಂದ್ರದ ಸಿಮೆಂಟ್ ಇಂಟರ್ಲಾಕ್ ಗಳು ಸಹ ಸಾಕಷ್ಟು ಹಾನಿಯಾಗಿದೆ.
ಶಿಥಿಲವಾಗಿ ಬಿದ್ದ ಕಾಂಪೌಂಡ್ ಮಳೆ ಗಾಳಿ ಬಿರುಗಾಳಿಯಿಂದ ಗೋಡೆಯ ಸಾಮರ್ಥ್ಯ ಕಡಿಮೆಯಾಗಿದ್ದಲ್ಲದೆ ಕೆಲವೊಮ್ಮೆ ಕಾಂಪೌಂಡ್ ಗೋಡೆಗಳನ್ನು ನಿರ್ಮಿಸುವಾಗ ಸರಿಯಾದ ಗುಣಮಟ್ಟದ ವಸ್ತುಗಳನ್ನು ಬಳಸದೆ ಇರುವುದು ಅಥವಾ ಸೂಕ್ತ ಇಂಜಿನಿಯರಿಂಗ್ ಮಾನದಂಡಗಳನ್ನು ಪಾಲಿಸದಿರುವುದೇ ಇದಕ್ಕೆ ಕಾರಣವಾಗಿರಬಹುದು, ಮಣ್ಣು ಸಡಿಲವಾಗಿದ್ದಾಗ ಅಥವಾ ಅಡಿಪಾಯವನ್ನು ಸರಿಯಾಗಿ ವಿನ್ಯಾಸಗೊಳಿಸ ದಿದ್ದಾಗ ಭಾರಿ ಮಳೆಯಿಂದಾಗಿ ದೊಡ್ಡ ಕುಸಿತಕ್ಕೆ ಕಾರಣ ವಾಗಿದೆ! ಈ ಕುಸಿತದ ಬಗ್ಗೆ ರೈತ ಸಂಪರ್ಕ ಕೇಂದ್ರದ ಸಂಬಂಧ ಪಟ್ಟ ಹಿರಿಯ ಅಧಿಕಾರಿಗಳು ಹಾಗೂ ಶಾಲೆಯ ಮುಖ್ಯೋ ಪಾಧ್ಯಾಯರು ಹಾಗು ಶಾಲಾ ಆಡಳಿತ ಮಂಡಳಿಯವರು ಇದರ ಬಗ್ಗೆ ಗಂಭೀರವಾಗಿ ಪರಿಗಣಿಸಿ ವಿದ್ಯಾರ್ಥಿಗಳ ಸುರಕ್ಷತೆಗೆ ಕ್ರಮ ಕೈಗೊಳ್ಳ ಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ಮಾತನಾಡಿ ಅರೇಹಳ್ಳಿ ಸರಕಾರಿ ಶಾಲೆಯ ಕಾಂಪೌಂಡ್ ಕುಸಿದ ವಿಚಾರ ನಮ್ಮ ಗಮನಕ್ಕೆ ಬಂದಿದ್ದು ಇದು ಕೃಷಿ ಇಲಾಖೆ ರೈತ ಸಂಪರ್ಕಕ್ಕೆ ಸೇರಿದ್ದಾಗಿದ್ದು ಇದನ್ನು ಅವರಿಗೆ ತಿಳಿಸಿ ಮೇಲ್ಬಾಗದಲ್ಲಿ ಪೈಪ್ ನೀರು ಕಾಂಪೌಂಡ್ ಗೆ ಬೀಳುತ್ತಿದ್ದ ರಿಂದ ಈ ರೀತಿ ಆಗಿರ ಬಹುದು.ಅಲ್ಲದೆ ಅದನ್ನು ಬೇರೆಡೆಗೆ ತಿರುಗಿಸಲು ಹೇಳಿದ್ದು ಹಾಗು ಕಾಂಪೌಂಡ್ ಅನ್ನು ಹೊಸದಾಗಿ ಕಟ್ಟಿ ರೆಡಿ ಮಾಡಿಸಿಕೊಡಿ ಮತ್ತೆ ಇನ್ನು ಮುಂದೆ ಹೀಗಾಗದಂತೆ ಜಾಗೃತಿ ವಹಿಸಬೇಕೆಂದು ಅವರಿಗೆ ಎಚ್ಚರಿಕೆ ನೀಡಿದರು.

Related Posts

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!