ಅರೇಹಳ್ಳಿಯಲ್ಲಿ ಭಾರೀ ಮಳೆಗೆ ಕುಸಿದು ಬಿದ್ದ ಶಾಲಾ ಕಾಂಪೌಂಡ್‌

ಅರೇಹಳ್ಳಿಯಲ್ಲಿ ಭಾರೀ ಮಳೆಗೆ ಕುಸಿದು ಬಿದ್ದ ಶಾಲಾ ಕಾಂಪೌಂಡ್‌

ಮಲೆನಾಡು ಬಾಗವಾದ ಅರೇಹಳ್ಳಿ ಹಾಗು ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದೆರಡು ದಿನಗಳಿಂದ ಮುಂಗಾರು ಮಳೆ ಚುರುಕುಗೊಂಡಿದ್ದು ಕಳೆದ ರಾತ್ರಿ ಸುರಿದ ದಾರಕಾರ ಮಳೆಗೆ ಸರ್ಕಾರಿ ಶಾಲೆಯ ಕಾಂಪೌಂಡ್ ಕುಸಿದು ಕುಸಿದು ಬಿದ್ದಿದೆ. ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪರಿಮಿತಿಯ ಸುತ್ತಲೂ ಸುಮಾರು ಹತ್ತು ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಕಾಂಪೌಂಡ್ ನ ಒಂದು ಬದಿಯ ಉದ್ದಗಲಕ್ಕೂ ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಕುಸಿದು ಬಿದ್ದಿದೆ.ಇದರಿಂದ ಪಕ್ಕದಲ್ಲೇ ನೂತನವಾಗಿ ನಿರ್ಮಿಸಲಾದ ರೈತ ಸಂಪರ್ಕ ಕೇಂದ್ರದ ಸಿಮೆಂಟ್ ಇಂಟರ್ಲಾಕ್ ಗಳು ಸಹ ಸಾಕಷ್ಟು ಹಾನಿಯಾಗಿದೆ.
ಶಿಥಿಲವಾಗಿ ಬಿದ್ದ ಕಾಂಪೌಂಡ್ ಮಳೆ ಗಾಳಿ ಬಿರುಗಾಳಿಯಿಂದ ಗೋಡೆಯ ಸಾಮರ್ಥ್ಯ ಕಡಿಮೆಯಾಗಿದ್ದಲ್ಲದೆ ಕೆಲವೊಮ್ಮೆ ಕಾಂಪೌಂಡ್ ಗೋಡೆಗಳನ್ನು ನಿರ್ಮಿಸುವಾಗ ಸರಿಯಾದ ಗುಣಮಟ್ಟದ ವಸ್ತುಗಳನ್ನು ಬಳಸದೆ ಇರುವುದು ಅಥವಾ ಸೂಕ್ತ ಇಂಜಿನಿಯರಿಂಗ್ ಮಾನದಂಡಗಳನ್ನು ಪಾಲಿಸದಿರುವುದೇ ಇದಕ್ಕೆ ಕಾರಣವಾಗಿರಬಹುದು, ಮಣ್ಣು ಸಡಿಲವಾಗಿದ್ದಾಗ ಅಥವಾ ಅಡಿಪಾಯವನ್ನು ಸರಿಯಾಗಿ ವಿನ್ಯಾಸಗೊಳಿಸ ದಿದ್ದಾಗ ಭಾರಿ ಮಳೆಯಿಂದಾಗಿ ದೊಡ್ಡ ಕುಸಿತಕ್ಕೆ ಕಾರಣ ವಾಗಿದೆ! ಈ ಕುಸಿತದ ಬಗ್ಗೆ ರೈತ ಸಂಪರ್ಕ ಕೇಂದ್ರದ ಸಂಬಂಧ ಪಟ್ಟ ಹಿರಿಯ ಅಧಿಕಾರಿಗಳು ಹಾಗೂ ಶಾಲೆಯ ಮುಖ್ಯೋ ಪಾಧ್ಯಾಯರು ಹಾಗು ಶಾಲಾ ಆಡಳಿತ ಮಂಡಳಿಯವರು ಇದರ ಬಗ್ಗೆ ಗಂಭೀರವಾಗಿ ಪರಿಗಣಿಸಿ ವಿದ್ಯಾರ್ಥಿಗಳ ಸುರಕ್ಷತೆಗೆ ಕ್ರಮ ಕೈಗೊಳ್ಳ ಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ಮಾತನಾಡಿ ಅರೇಹಳ್ಳಿ ಸರಕಾರಿ ಶಾಲೆಯ ಕಾಂಪೌಂಡ್ ಕುಸಿದ ವಿಚಾರ ನಮ್ಮ ಗಮನಕ್ಕೆ ಬಂದಿದ್ದು ಇದು ಕೃಷಿ ಇಲಾಖೆ ರೈತ ಸಂಪರ್ಕಕ್ಕೆ ಸೇರಿದ್ದಾಗಿದ್ದು ಇದನ್ನು ಅವರಿಗೆ ತಿಳಿಸಿ ಮೇಲ್ಬಾಗದಲ್ಲಿ ಪೈಪ್ ನೀರು ಕಾಂಪೌಂಡ್ ಗೆ ಬೀಳುತ್ತಿದ್ದ ರಿಂದ ಈ ರೀತಿ ಆಗಿರ ಬಹುದು.ಅಲ್ಲದೆ ಅದನ್ನು ಬೇರೆಡೆಗೆ ತಿರುಗಿಸಲು ಹೇಳಿದ್ದು ಹಾಗು ಕಾಂಪೌಂಡ್ ಅನ್ನು ಹೊಸದಾಗಿ ಕಟ್ಟಿ ರೆಡಿ ಮಾಡಿಸಿಕೊಡಿ ಮತ್ತೆ ಇನ್ನು ಮುಂದೆ ಹೀಗಾಗದಂತೆ ಜಾಗೃತಿ ವಹಿಸಬೇಕೆಂದು ಅವರಿಗೆ ಎಚ್ಚರಿಕೆ ನೀಡಿದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!