ಚೀನಾದಲ್ಲಿ SCO ಶೃಂಗಸಭೆ.

 

7 ವರ್ಷಗಳ ನಂತರ ಪ್ರಧಾನಿ ಮೋದಿ ಚೀನಾಗೆ ಭೇಟಿ ನೀಡಿದ್ದಾರೆ. ಶಾಂಘೈ ಸಹಕಾರ ಸಂಸ್ಥೆಯ ಶೃಂಗಸಭೆ ಹಿನ್ನೆಲೆಯಲ್ಲಿ ಟಿಯಾಂಜಿನ್ ತಲುಪಿದ್ದಾರೆ. ಭಾರತೀಯರು ತ್ರಿವರ್ಣ ಧ್ವಜವನ್ನು ಬೀಸುತ್ತಾ, ಭಾರತ್ ಮಾತಾ ಕಿ ಜೈ ಘೋಷಣೆಗಳನ್ನು ಕೂಗಿದರು. ಟಿಯಾಂಜಿನ್ ವಿಮಾನ ನಿಲ್ದಾಣದಲ್ಲಿ ಮೋದಿಗೆ ಭರ್ಜರಿ ಸ್ವಾಗತ ಸಿಕ್ಕಿದೆ.

ಬರೋಬ್ಬರಿ 7 ವರ್ಷಗಳ ನಂತರ ಪ್ರಧಾನಿ ನರೇಂದ್ರ ಮೋದಿ ಚೀನಾಗೆ ಭೇಟಿ ನೀಡಿದ್ದಾರೆ. ಶಾಂಘೈ ಸಹಕಾರ ಸಂಸ್ಥೆಯ ಶೃಂಗಸಭೆ ಹಿನ್ನೆಲೆಯಲ್ಲಿ ಟಿಯಾಂಜಿನ್ ತಲುಪಿದ್ದಾರೆ.

ಟಿಯಾಂಜಿನ್ ವಿಮಾನ ನಿಲ್ದಾಣದಲ್ಲಿ ಮೋದಿಗೆ ಭರ್ಜರಿ ಸ್ವಾಗತ ಸಿಕ್ಕಿದೆ. ಚೀನಾದಲ್ಲಿರುವ ಭಾರತೀಯರು ತ್ರಿವರ್ಣ ಧ್ವಜವನ್ನು ಬೀಸುತ್ತಾ, ಭಾರತ್ ಮಾತಾ ಕಿ ಜೈ ಘೋಷಣೆಗಳನ್ನು ಕೂಗಿ ಸ್ವಾಗತಿಸಿದರು.

 

ಇವತ್ತಿನಿಂದ ಎರಡು ದಿನಗಳ ಕಾಲ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆ ನಡೆಯಲಿದೆ. ಚೀನಾ ತಲುಪುತ್ತಿದ್ದಂತೆಯೇ ಸೋಶಿಯಲ್ ಮೀಡಿಯಾದಲ್ಲಿ ಅಪ್​ಡೇಟ್ಸ್​ ನೀಡಿದ್ದಾರೆ. ‘ನಾನು ಟಿಯಾಂಜಿನ್ ತಲುಪಿದ್ದೇನೆ. SCO ಶೃಂಗಸಭೆಯಲ್ಲಿ ವಿವಿಧ ದೇಶಗಳ ನಾಯಕರೊಂದಿಗೆ ಆಳವಾದ ಚರ್ಚೆಗಳನ್ನು ಎದುರು ನೋಡುತ್ತಿದ್ದೇನೆ ಎಂದಿದ್ದಾರೆ.

 

ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ ಪಿಂಗ್ ನಡುವಿನ ಭೇಟಿಯ ಮೇಲೆ ವಿಶ್ವದ ಕಣ್ಣು ನೆಟ್ಟಿದೆ. ಏಳು ವರ್ಷಗಳ ನಂತರ ಇಬ್ಬರು ನಾಯಕರು ಇವತ್ತು ಮುಖಾಮುಖಿ ಆಗುತ್ತಿದ್ದಾರೆ. ಇಬ್ಬರ ನಡುವಿನ ಮಾತುಕತೆಗಳು ಭಾರತ-ಚೀನಾ ಸಂಬಂಧಗಳನ್ನು ಪರಿಶೀಲಿಸುತ್ತವೆ. ವ್ಯಾಪಾರ ಮತ್ತು ಗಡಿ ವಿವಾದಗಳ ಭವಿಷ್ಯದ ಸ್ಥಿತಿಯನ್ನು ಚರ್ಚಿಸುತ್ತವೆ ಎಂದು ನಂಬಲಾಗಿದೆ.

 

ಕಳೆದ ವರ್ಷ ರಷ್ಯಾದ ಕಜಾನ್‌ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾರತ ಚೀನಾ ಮುಖಾಮುಖಿ ಆಗಿದ್ದವು. ಈ ವೇಳೆ ಗಡಿ ಗಸ್ತು ಕುರಿತು ಒಪ್ಪಂದ ಮಾಡಿಕೊಳ್ಳಲಾಗಿದೆ. ಇತ್ತೀಚೆಗೆ ಭಾರತ-ಯುಎಸ್ ಸಂಬಂಧಗಳಲ್ಲಿ ಉದ್ವಿಗ್ನತೆ ಉಂಟಾಗಿರುವ ಹಿನ್ನೆಲೆಯಲ್ಲಿ ಮೋದಿ ಅವರ ಭೇಟಿ ತುಂಬಾನೇ ಮಹತ್ವ ಪಡೆದುಕೊಂಡಿದೆ. ಇನ್ನು ರಷ್ಯಾ ಅಧ್ಯಕ್ಷ ಪುಟಿನ್ ಜೊತೆಯೂ ಮಹತ್ವದ ಮಾತುಕತೆ ನಡೆಸುವ ಸಾಧ್ಯತೆ ಇದೆ.

SCO ಎಂದರೇನು?
SCO ಅನ್ನು 2001ರಲ್ಲಿ ಸ್ಥಾಪಿಸಲಾಯಿತು. ಭಾರತ, ಚೀನಾ, ರಷ್ಯಾ, ಪಾಕಿಸ್ತಾನ, ಇರಾನ್ ಮತ್ತು ಮಧ್ಯ ಏಷ್ಯಾದ ದೇಶಗಳು SCO ಸದಸ್ಯ ರಾಷ್ಟ್ರಗಳಾಗಿವೆ. ಭಾರತವು 2017ರಲ್ಲಿ SCO ಸದಸ್ಯ ದೇಶವಾಯಿತು. 2022-23 ರಲ್ಲಿ ಸಾಂಘೈ ಸಹಕಾರ ಸಂಸ್ಥೆಯ ಶೃಂಗಸಭೆಯ ಅಧ್ಯಕ್ಷತೆಯನ್ನು ವಹಿಸಿತ್ತು.

Related Posts

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಮೈಸೂರು: ಅ*ತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್. ಪಶ್ಚಿಮ ಬಂಗಾಳದ ಬಾರುಪುರ್ ಮತ್ತುರಾಜಸ್ಥಾನದ ಶ್ರೀ ಗಂಗಾ ನಗರದಲ್ಲಿ ಅ*ಪ್ರಾಪ್ತ ಮೇಲೆ ನಡೆದ ಅ*ತ್ಯಾಚಾ*ರ ಘಟನೆಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿವೆ. ಪ್ರಪಂಚವನ್ನೇ ಅರಿಯದ…

16 ದಾಖಲೆಗಳ ನೀಡಿದ್ರೂ ಸಿಗದ ಭಾರತೀಯ ಪೌರತ್ವ

ಗುವಾಹಟಿ ಹೈಕೋರ್ಟ್ ಇತ್ತೀಚೆಗೆ ವ್ಯಕ್ತಿಯೊಬ್ಬರ ಪೌರತ್ವ ಸಾಬೀತುಪಡಿಸಲು ಸಲ್ಲಿಸಿದ್ದ 16 ಪ್ರಮುಖ ದಾಖಲೆಗಳನ್ನು ತಿರಸ್ಕರಿಸಿದೆ. ಪ್ಯಾನ್, ವೋಟರ್ ಐಡಿ ಸೇರಿದಂತೆ ಹಲವು ದಾಖಲೆಗಳಲ್ಲಿನ ಲೋಪದೋಷಗಳಿಂದಾಗಿ ಅರ್ಜಿದಾರರನ್ನು ವಿದೇಶಿ ಎಂದು ಘೋಷಿಸಲಾಗಿದೆ. ಭಾರತೀಯ ಪೌರತ್ವ ಸಾಬೀತಿಗೆ ವ್ಯಕ್ತಿಯ ಮೇಲೆ ಇರುವ ಹೊಣೆಯ ಜೊತೆಗೆ,…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!