ರೆಡಿಮೇಡ್ ಬಟ್ಟೆಗಳ ಪ್ಯಾಕ್​ಗಳಲ್ಲಿ ಡ್ರಗ್ಸ್ ಮಾರಾಟ! ನೈಜೀರಿಯಾ ಪ್ರಜೆಗಳಿಬ್ಬರು ಪೊಲೀಸ್ ವಶಕ್ಕೆ.

ರೆಡಿಮೇಡ್ ಬಟ್ಟೆಗಳ ಪ್ಯಾಕ್​ಗಳಲ್ಲಿ ಡ್ರಗ್ಸ್ ಮಾರಾಟ! ನೈಜೀರಿಯಾ ಪ್ರಜೆಗಳಿಬ್ಬರು ಪೊಲೀಸ್ ವಶಕ್ಕೆ
ಅವರು ವಿದೇಶಿ ಪ್ರಜೆಗಳು. ಮೆಡಿಕಲ್ ವಿಸಾದಲ್ಲಿ ಭಾರತಕ್ಕೆ ಬಂದಿದ್ದರು. ಬಂದ ಕೆಲಸ ಮುಗಿಸಿಕೊಂಡು ಹೋಗುವುದು ಬಿಟ್ಟು ಅಕ್ರಮ ಎಸಗಿ ಸಿಕ್ಕಿಬಿದ್ದಿದ್ದಾರೆ. ನೈಜೀರಿಯಾ ಪ್ರಜೆಗಳಿಬ್ಬರು ಹೊಲಸು ಬುದ್ದಿ ತೋರಿಸಿ ಪೊಲೀಸರ ವಶವಾಗಿದ್ದಾರೆ.

ರೆಡಿಮೇಡ್ ಬಟ್ಟೆಗಳ ಪ್ಯಾಕ್​ಗಳಲ್ಲಿ ಬಚ್ಚಿಟ್ಟು ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪಿಗಳಿಂದ ಪೊಲೀಸರು ದಾಖಲೆ ಮೌಲ್ಯದ ಮಾದಕವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ರೆಡಿಮೇಡ್ ಬಟ್ಟೆಗಳ ಪ್ಯಾಕ್​ಗಳಲ್ಲಿ ಡ್ರಗ್ಸ್ ಮಾರಾಟ! ನೈಜೀರಿಯಾ ಪ್ರಜೆಗಳಿಬ್ಬರು ಪೊಲೀಸ್ ವಶಕ್ಕೆ
ಬಂಧಿತ ನೈಜೀರಿಯಾ ಪ್ರಜೆಗಳು

ಬೆಂಗಳೂರು, ಜುಲೈ ರೆಡಿಮೇಡ್ ಬಟ್ಟೆಗಳ ಪ್ಯಾಕ್​ಗಳಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆಗಳಿಬ್ಬರನ್ನು ಬೆಂಗಳೂರಿನ ರಾಜಾನುಕುಂಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 4.50 ಕೋಟಿ ರೂ. ಮೌಲ್ಯದ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಲಾಸೊನ್ಯೆ ಪೀಟರ್ ಒಬಿಯೋಮಾ ಹಾಗೂ ಸಂಡೇ ವಿನ್​​ಡಮ್​ ಎಂದು ಗುರುತಿಸಲಾಗಿದೆ.

ಇವರು ಮೆಡಿಕಲ್ ವಿಸಾದಲ್ಲಿ ದೆಹಲಿಗೆ ಬಂದಿದ್ದರು. ದೆಹಲಿಯಿಂದ ಬೆಂಗಳೂರಿನ ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂದು ನೆಲೆಸಿದ್ದರು. ಬೇರೆಯವರ ಹೆಸರಲ್ಲಿ ಮನೆ ಬಾಡಿಗೆ ಪಡೆದು ಏರ್ಪೋರ್ಟ್ ಬಳಿ ಸೆಕ್ಯೂರಿಟಿಗಳು ಹಾಕುವಂತೆ ಮನೆ ಬಳಿ ಬಟ್ಟೆ ಹಾಕಿಕೊಂಡು ತಿರುಗಾಡುತಿದ್ದರು. ಅಲ್ಲದೆ, ಡ್ರಗ್ ಪೆಡ್ಲಿಂಗ್ ಮಾಡಬೇಕು ಎಂದು ಬಂದಿದ್ದ ಐನಾತಿಗಳು ನಂತರ ತಮ್ಮ ಅಸಲಿ ವರಸೆ ಶುರುವಿಟ್ಟುಕೊಂಡಿದ್ದರು. ಮನೆಯಲ್ಲಿಯೇ ಡ್ರಗ್ ಶೇಖರಿಸಿಕೊಟ್ಟು ಅದನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಹಣ ಗಳಿಸುತ್ತಿದ್ದರು.

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!