ಹಿರಿಯ ನೈರ್ಮಲ್ಯ ಕಾರ್ಮಿಕರಿಗೆ ತಿಂಗಳಿಗೆ 2 ಲಕ್ಷ ಸಂಬಳ!

ಹೈದರಾಬಾದ್: ತೆಲಂಗಾಣದಲ್ಲಿ ಹಿರಿಯ ನೈರ್ಮಲ್ಯ ಕಾರ್ಮಿಕರು ತಿಂಗಳಿಗೆ ಸುಮಾರು 2 ಲಕ್ಷ ರೂ. ಸಂಬಳ  ಪಡೆಯುತ್ತಿರುವ ವಿಚಾರ ಬಳಕಿಗೆ ಬಂದಿದೆ.

ಹೌದು. ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್  ನಲ್ಲಿರುವ ಹಿರಿಯ ನೈರ್ಮಲ್ಯ ಕಾರ್ಮಿಕರು ದೀರ್ಘ ವರ್ಷಗಳ ಸೇವೆ ಮತ್ತು ಪರಿಷ್ಕರಣೆಗಳ ನಂತರ ತಿಂಗಳಿಗೆ ಸುಮಾರು 2 ಲಕ್ಷ ರೂ. ಸಂಬಳ ಪಡೆದರೆ ಉನ್ನತ ಸರ್ಕಾರಿ ಎಂಜಿನಿಯರ್‌ಗಳು ತಿಂಗಳಿಗೆ 7 ಲಕ್ಷ ರೂ. ಸಂಬಳ ಪಡೆಯುತ್ತಿದ್ದಾರೆ.

ತೆಲಂಗಾಣದಲ್ಲಿ ಅತಿ ಹೆಚ್ಚು ವೇತನ ತೆಲಂಗಾಣ ರಾಜ್ಯ ವಿದ್ಯುತ್ ಉತ್ಪಾದನಾ ನಿಗಮ ಲಿಮಿಟೆಡ್ , ತೆಲಂಗಾಣ ರಾಜ್ಯ ಪ್ರಸರಣ ನಿಗಮ ಲಿಮಿಟೆಡ್ , ಮತ್ತು DISCOM ಗಳಾದ ತೆಲಂಗಾಣ ಸದರ್ನ್ ಪವರ್ ಡಿಸ್ಟ್ರಿಬ್ಯೂಷನ್ ಕಂಪನಿ ಲಿಮಿಟೆಡ್ ಮತ್ತು ತೆಲಂಗಾಣ ನಾರ್ದರ್ನ್ ಪವರ್ ಡಿಸ್ಟ್ರಿಬ್ಯೂಷನ್ ಕಂಪನಿ ಲಿಮಿಟೆಡ್‌ನ ಮುಖ್ಯ ಎಂಜಿನಿಯರ್‌ಗಳಿಗೆ ಸಿಗುತ್ತಿದೆ.

ತೆಲಂಗಾಣದ ಸಂಬಳ ಮತ್ತು ಪಿಂಚಣಿ ಏರಿಕೆಯಾಗಿದ್ದು ಬಜೆಟ್‌ಗೆ ಭಾರೀ ಹೊರೆಯಾಗಿದೆ. ರಾಜ್ಯವು ಈಗ ಪ್ರತಿ ತಿಂಗಳು ಸುಮಾರು 6,000 ಕೋಟಿ ರೂ.ಗಳನ್ನು ವೇತನ ಮತ್ತು ಪಿಂಚಣಿಗಾಗಿ ಖರ್ಚು ಮಾಡುತ್ತಿದೆ. 2014 ರಲ್ಲಿ ರಾಜ್ಯ ರಚನೆಯ ಸಮಯದಲ್ಲಿ ಖರ್ಚು ಮಾಡಿದ್ದಕ್ಕಿಂತ ಸುಮಾರು ನಾಲ್ಕು ಪಟ್ಟು ಏರಿಕೆಯಾಗಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ.

ಹೈದರಾಬಾದ್ ನಗರವನ್ನು ನಿರ್ವಹಿಸುವ GHMC ಅಡಿ ಕೆಲಸ ಮಾಡುತ್ತಿರುವ ನೈರ್ಮಲ್ಯ ಕಾರ್ಮಿಕರು ತಿಂಗಳಿಗೆ ಸರಾಸರಿ 70 ಸಾವಿರ ರೂ. ಪಡೆಯುತ್ತಿದ್ದಾರೆ. ಆದರೆ ಆರಂಭಿಕ ಹಂತದ ಪುರಸಭೆಯ ಸಿಬ್ಬಂದಿ ಸುಮಾರು 28 ಸಾವಿರ ಪಡೆದರೆ, ದೀರ್ಘ ಸೇವೆಯನ್ನು ಹೊಂದಿರುವ ಹಿರಿಯ ವರ್ಗ -4ರ ಕಾರ್ಮಿಕರು ಮಾಸಿಕ 2 ಲಕ್ಷ ರೂ. ಗಳಿಸುತ್ತಿದ್ದಾರೆ. ಹೆಚ್ಚಿನ ಉದ್ಯೋಗಿಗಳು ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (NPS) ಅಡಿಯಲ್ಲಿದ್ದಾರೆ. ಇತ್ತೀಚಿನ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ವರದಿಯ ಪ್ರಕಾರ 2023-24ರಲ್ಲಿ ರಾಜ್ಯದ ಆದಾಯದ ಸುಮಾರು 45% ಸಂಬಳ, ಪಿಂಚಣಿ ಮತ್ತು ಸಾಲದ ಮೇಲಿನ ಬಡ್ಡಿಯನ್ನು ಪಾವತಿಸಲು ಹೋಗುತ್ತಿದೆ.

#Hyderabad #Telangana#MunicipalCorporation

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!