ಹಿರಿಯ ನೈರ್ಮಲ್ಯ ಕಾರ್ಮಿಕರಿಗೆ ತಿಂಗಳಿಗೆ 2 ಲಕ್ಷ ಸಂಬಳ!

ಹೈದರಾಬಾದ್: ತೆಲಂಗಾಣದಲ್ಲಿ ಹಿರಿಯ ನೈರ್ಮಲ್ಯ ಕಾರ್ಮಿಕರು ತಿಂಗಳಿಗೆ ಸುಮಾರು 2 ಲಕ್ಷ ರೂ. ಸಂಬಳ  ಪಡೆಯುತ್ತಿರುವ ವಿಚಾರ ಬಳಕಿಗೆ ಬಂದಿದೆ.

ಹೌದು. ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್  ನಲ್ಲಿರುವ ಹಿರಿಯ ನೈರ್ಮಲ್ಯ ಕಾರ್ಮಿಕರು ದೀರ್ಘ ವರ್ಷಗಳ ಸೇವೆ ಮತ್ತು ಪರಿಷ್ಕರಣೆಗಳ ನಂತರ ತಿಂಗಳಿಗೆ ಸುಮಾರು 2 ಲಕ್ಷ ರೂ. ಸಂಬಳ ಪಡೆದರೆ ಉನ್ನತ ಸರ್ಕಾರಿ ಎಂಜಿನಿಯರ್‌ಗಳು ತಿಂಗಳಿಗೆ 7 ಲಕ್ಷ ರೂ. ಸಂಬಳ ಪಡೆಯುತ್ತಿದ್ದಾರೆ.

ತೆಲಂಗಾಣದಲ್ಲಿ ಅತಿ ಹೆಚ್ಚು ವೇತನ ತೆಲಂಗಾಣ ರಾಜ್ಯ ವಿದ್ಯುತ್ ಉತ್ಪಾದನಾ ನಿಗಮ ಲಿಮಿಟೆಡ್ , ತೆಲಂಗಾಣ ರಾಜ್ಯ ಪ್ರಸರಣ ನಿಗಮ ಲಿಮಿಟೆಡ್ , ಮತ್ತು DISCOM ಗಳಾದ ತೆಲಂಗಾಣ ಸದರ್ನ್ ಪವರ್ ಡಿಸ್ಟ್ರಿಬ್ಯೂಷನ್ ಕಂಪನಿ ಲಿಮಿಟೆಡ್ ಮತ್ತು ತೆಲಂಗಾಣ ನಾರ್ದರ್ನ್ ಪವರ್ ಡಿಸ್ಟ್ರಿಬ್ಯೂಷನ್ ಕಂಪನಿ ಲಿಮಿಟೆಡ್‌ನ ಮುಖ್ಯ ಎಂಜಿನಿಯರ್‌ಗಳಿಗೆ ಸಿಗುತ್ತಿದೆ.

ತೆಲಂಗಾಣದ ಸಂಬಳ ಮತ್ತು ಪಿಂಚಣಿ ಏರಿಕೆಯಾಗಿದ್ದು ಬಜೆಟ್‌ಗೆ ಭಾರೀ ಹೊರೆಯಾಗಿದೆ. ರಾಜ್ಯವು ಈಗ ಪ್ರತಿ ತಿಂಗಳು ಸುಮಾರು 6,000 ಕೋಟಿ ರೂ.ಗಳನ್ನು ವೇತನ ಮತ್ತು ಪಿಂಚಣಿಗಾಗಿ ಖರ್ಚು ಮಾಡುತ್ತಿದೆ. 2014 ರಲ್ಲಿ ರಾಜ್ಯ ರಚನೆಯ ಸಮಯದಲ್ಲಿ ಖರ್ಚು ಮಾಡಿದ್ದಕ್ಕಿಂತ ಸುಮಾರು ನಾಲ್ಕು ಪಟ್ಟು ಏರಿಕೆಯಾಗಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ.

ಹೈದರಾಬಾದ್ ನಗರವನ್ನು ನಿರ್ವಹಿಸುವ GHMC ಅಡಿ ಕೆಲಸ ಮಾಡುತ್ತಿರುವ ನೈರ್ಮಲ್ಯ ಕಾರ್ಮಿಕರು ತಿಂಗಳಿಗೆ ಸರಾಸರಿ 70 ಸಾವಿರ ರೂ. ಪಡೆಯುತ್ತಿದ್ದಾರೆ. ಆದರೆ ಆರಂಭಿಕ ಹಂತದ ಪುರಸಭೆಯ ಸಿಬ್ಬಂದಿ ಸುಮಾರು 28 ಸಾವಿರ ಪಡೆದರೆ, ದೀರ್ಘ ಸೇವೆಯನ್ನು ಹೊಂದಿರುವ ಹಿರಿಯ ವರ್ಗ -4ರ ಕಾರ್ಮಿಕರು ಮಾಸಿಕ 2 ಲಕ್ಷ ರೂ. ಗಳಿಸುತ್ತಿದ್ದಾರೆ. ಹೆಚ್ಚಿನ ಉದ್ಯೋಗಿಗಳು ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (NPS) ಅಡಿಯಲ್ಲಿದ್ದಾರೆ. ಇತ್ತೀಚಿನ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ವರದಿಯ ಪ್ರಕಾರ 2023-24ರಲ್ಲಿ ರಾಜ್ಯದ ಆದಾಯದ ಸುಮಾರು 45% ಸಂಬಳ, ಪಿಂಚಣಿ ಮತ್ತು ಸಾಲದ ಮೇಲಿನ ಬಡ್ಡಿಯನ್ನು ಪಾವತಿಸಲು ಹೋಗುತ್ತಿದೆ.

#Hyderabad #Telangana#MunicipalCorporation

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!