ಮೈಸೂರು: ಅ*ತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್.
ಪಶ್ಚಿಮ ಬಂಗಾಳದ ಬಾರುಪುರ್ ಮತ್ತುರಾಜಸ್ಥಾನದ ಶ್ರೀ ಗಂಗಾ ನಗರದಲ್ಲಿ ಅ*ಪ್ರಾಪ್ತ ಮೇಲೆ ನಡೆದ ಅ*ತ್ಯಾಚಾ*ರ ಘಟನೆಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿವೆ. ಪ್ರಪಂಚವನ್ನೇ ಅರಿಯದ 13 ವರ್ಷದ ಒಬ್ಬ ಅಪ್ರಾಪ್ತ ಮೇಲೆ 30 ಜನ ನರರಾಕ್ಷಸರು ಎರಗುತ್ತಾರೆಂದರೆ ಇದೆಂಥ ಸಮಾಜ?. ಇಂತಹ ನೀಚ ಘಟನೆಗಳಲ್ಲಿ ಸರ್ಕಾರದ ಯಾವುದೇ ಕಣ್ಣೂರೆಸುವ ತನಿಖೆಯನ್ನಾಗಲಿ ಅಥವಾ ನಿಧಾನಗತಿಯ ಶಿಕ್ಷೆಯನ್ನಾಗಲಿ ಜನರು ಸಹಿಸುವುದಿಲ್ಲ. ಆರೋಪಿಗಳಿಗೆ ಕಠಿಣ ಶಿಕ್ಷೆ ಖಾತ್ರಿಪಡಿಸಬೇಕೆಂದು ಪತ್ರಿಕೆ ಹೇಳಿಕೆಯ ಮೂಲಕ ಒತ್ತಾಯಿಸಿದರು.
ಉತ್ತರಪ್ರದೇಶದಲ್ಲಿ ಈಚೆಗೆ 14 ವರ್ಷದ ಅಪ್ರಾಪ್ತ ಅ*ಶ್ಲೀ*ಲ ಸಿನಿಮಾ ಮತ್ತು ಮದ್ಯ, ಮಾದಕ ವಸ್ತುಗಳಿಗೆ ಬಲಿಯಾಗಿ 9 ತಿಂಗಳ ಹಸುಗೂಸಿನ ಮೇಲೆ ಅ*ತ್ಯಾಚಾ*ರ ಎಸಗಿರುವ ಘಟನೆ ನಾಗರಿಕ ಸಮಾಜವನ್ನೇ ತಲೆತಗ್ಗಿಸುಂತೆ ಮಾಡಿದೆ. ವಿಕೃತಿಗಳ ವಿರುದ್ಧ ಪ್ರಜ್ಞಾವಂತ ಜನತೆಯು ಸೇರಿ ಇಡೀ ಮಹಿಳಾ ಸಮುದಾಯ ಬಲಿಷ್ಠವಾದ ಹೋರಾಟ ಕಟ್ಟಲು ಮುಂದೆ ಬರಬೇಕೆಂದು ಪತ್ರಿಕೆಯ ಮೂಲಕ ಆಗ್ರಹಿಸಿದರು.




