ಪವನ್ ಒಡೆಯರ್ ನಿರ್ದೇಶನದ ಚಿತ್ರದಲ್ಲಿ ನಟಿಸಲಿದ್ದಾರೆ ಹ್ಯಾಟ್ರಿಕ್ ಹೀರೋ ಶಿವಣ್ಣ

ನಿರ್ದೇಶಕ ಪವನ್ ಒಡೆಯರ್ ಅವರು ಇದೇ ಮೊದಲ ಬಾರಿಗೆ ಶಿವರಾಜ್​​ಕುಮಾರ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ‘ಕೆವಿಎನ್ ಪ್ರೊಡಕ್ಷನ್’ ಸಂಸ್ಥೆ ಕೂಡ ಮೊದಲ ಬಾರಿಗೆ ಶಿವಣ್ಣನ ಸಿನಿಮಾಗೆ ಬಂಡವಾಳ ಹೂಡಲು ಮುಂದಾಗಿದೆ. ಸೆಪ್ಟೆಂಬರ್ 3 ರಂದು ಈ ಚಿತ್ರಕ್ಕೆ ಶೂಟಿಂಗ್ ಶುರುವಾಗಲಿದೆ. ಹಲವು ಕಲಾವಿದರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಜತೆ ಶಿವರಾಜ್​​ಕುಮಾರ್ ಹೊಸ ಸಿನಿಮಾ; ಪವನ್ ಒಡೆಯರ್ ನಿರ್ದೇಶನ

ಯಶ್ ನಟನೆಯ ‘ಟಾಕ್ಸಿಕ್’, ಧ್ರುವ ಸರ್ಜಾ ನಟನೆಯ ‘ಕೆಡಿ’, ದಳಪತಿ ವಿಜಯ್ ಅಭಿನಯದ ‘ಜನ ನಾಯಗನ್’ ಸೇರಿ ಹಲವು ಬಹುನಿರೀಕ್ಷಿತ ಸಿನಿಮಾಗಳನ್ನು ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ನಿರ್ಮಾಣ ಮಾಡುತ್ತಿದೆ. ಇತ್ತೀಚೆಗೆ ಈ ಸಂಸ್ಥೆ ತೆಲುಗು ಚಿತ್ರರಂಗಕ್ಕೂ ಎಂಟ್ರಿ ನೀಡಿತು. ಈಗ ನಟ ಶಿವರಾಜ್​​ಕುಮಾರ್ ಜೊತೆ ಸಿನಿಮಾ ಮಾಡಲು ‘ಕೆವಿಎನ್ ಪ್ರೊಡಕ್ಷನ್ಸ್’ ಮುಂದಾಗಿದೆ. ಈ ಸಿನಿಮಾಗೆ ಖ್ಯಾತ ನಿರ್ದೇಶಕ ಪವನ್ ಒಡೆಯರ್ ಅವರು ಆ್ಯಕ್ಷನ್-ಕಟ್ ಹೇಳಿದ್ದಾರೆ. ಇತ್ತೀಚೆಗೆ ಈ ಸಿನಿಮಾಗೆ ಸ್ಕ್ರಿಪ್ಟ್ ಪೂಜೆ ಮಾಡಲಾಯಿತು.

ನಿರ್ದೇಶಕ ಪವನ್‌ ಒಡೆಯರ್‌ ಅವರು ಪುನೀತ್‌ ರಾಜ್‌ಕುಮಾರ್‌ ಜೊತೆ ಎರಡು ಸಿನಿಮಾಗಳನ್ನು ಮಾಡಿದ್ದಾರೆ. ಈಗ ಇದೇ ಮೊದಲ ಬಾರಿಗೆ ಶಿವರಾಜ್‌ಕುಮಾರ್‌ ಜೊತೆ ಸಿನಿಮಾ ಮಾಡುವ ಅವಕಾಶ ಅವರಿಗೆ ಸಿಕ್ಕಿದೆ. ಸೆಪ್ಟೆಂಬರ್ 3ರಂದು ಈ ಸಿನಿಮಾದ ಶೂಟಿಂಗ್ ಆರಂಭವಾಗಲಿದೆ. ನಿರ್ದೇಶನ ಮಾಡುವುದರ ಜೊತೆಗೆ ಪವನ್ ಒಡೆಯರ್ ಅವರು ನಿರ್ಮಾಣದಲ್ಲೂ ಕೈ ಜೋಡಿಸುತ್ತಿದ್ದಾರೆ.

ವೆಂಕಟ್ ಕೊನಂಕಿ ಅವರ ‘ಕೆವಿಎನ್ ಪ್ರೊಡಕ್ಷನ್ಸ್’ ಮತ್ತು ಪವನ್ ಒಡೆಯರ್ ಅವರ ‘ಒಡೆಯರ್ ಮೂವೀಸ್’ ಜಂಟಿಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡಲಿವೆ. ದೇಶದ ಹಲವು ಭಾಗಗಳಲ್ಲಿ ಈ ಸಿನಿಮಾಗೆ ಶೂಟಿಂಗ್ ನಡೆಯಲಿದೆ. ಸೆಪ್ಟೆಂಬರ್ ‌3ರಂದು ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಶುರು ಆಗಲಿದೆ. ನಂತರ ಮಂಡ್ಯ , ಮುಂಬೈ, ಹೈದರಾಬಾದ್ ಮತ್ತು ಹಿಮಾಚಲ ಪ್ರದೇಶದಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ.

ಇದು ಒಂದು ಕಮರ್ಷಿಯಲ್ ಎಂಟರ್ಟೈನ್ಮೆಂಟ್ ಸಿನಿಮಾ ಆಗಿರಲಿದೆ ಎಂದು ಚಿತ್ರತಂಡ ಹೇಳಿದೆ. ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಶಶಾಂಕ್ ನಾರಾಯಣ್ ಅವರು ಸಂಕಲನದ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಶಿವರಾಜ್​​ಕುಮಾರ್ , ಪವನ್ ಒಡೆಯರ್ ಮತ್ತು ಕೆವಿಎನ್ ಪ್ರೊಡಕ್ಷನ್ಸ್ ಕಾಂಬಿನೇಷನ್​ ಆದ್ದರಿಂದ ನಿರೀಕ್ಷೆ ಜೋರಾಗಿದೆ.

ಈ ಸಿನಿಮಾದಲ್ಲಿ ಶಿವರಾಜ್​​ಕುಮಾರ್ ಜೊತೆ ಹಲವು ಕಲಾವಿದರು ಅಭಿನಯಿಸಲಿದ್ದಾರೆ. ಜಯರಾಮ್, ಗೋಪಾಲಕೃಷ್ಣ ದೇಶಪಾಂಡೆ, ಪ್ರಕಾಶ್ ಬೆಳವಾಡಿ, ಸಾಯಿ ಕುಮಾರ್, ಸಂಜನಾ ಆನಂದ್, ದೀಕ್ಷಿತ್ ಶೆಟ್ಟಿ ಮುಂತಾದವರು ಕೂಡ ಪಾತ್ರವರ್ಗದಲ್ಲಿ ಇದ್ದಾರೆ. ಇತ್ತೀಚೆಗೆ ನಡೆದ ಸ್ಕ್ರಿಪ್ಟ್ ಪೂಜೆಯಲ್ಲಿ ಚಿತ್ರತಂಡದ ಹಲವರು ಭಾಗಿಯಾಗಿದ್ದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ರಾಮ್‌ಚರಣ್‌, ಕಿಚ್ಚ ಸುದೀಪ್‌ ಬಾಡಿಗಾರ್ಡ್‌ಗಳ ನಂತರ ಈಗ ಯಶ್‌ ಅಂಗರಕ್ಷಕನ ಹವಾ!

ಚಿತ್ರರಂಗದಲ್ಲಿ ನೆಚ್ಚಿನ ನಟರ ಜೊತೆಗೆ ಅವರ ಪರ್ಸನಲ್‌ ಬಾಡಿಗಾರ್ಡ್‌ಗಳೂ ಇತ್ತೀಚೆಗೆ ಭಾರಿ ಸದ್ದು ಮಾಡುತ್ತಿದ್ದು, ಅಭಿಮಾನಿಗಳಲ್ಲಿ ಸಖತ್ ಟ್ರೆಂಡ್ ಸೃಷ್ಟಿಸುತ್ತಿದ್ದಾರೆ. ನಟ ರಾಮ್‌ ಚರಣ್‌ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾ ‘ಪೆದ್ದಿ’ ಪ್ರಚಾರದ ವೇಳೆಯಲ್ಲಿ ಅವರ ಪರ್ಸನಲ್ ಸೆಕ್ಯೂರಿಟಿ ಗಾರ್ಡ್, ಆಫ್ರಿಕಾ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!