ಶ್ರೀ ಕೃಷ್ಣ ಜನ್ಮಾಷ್ಟಮಿ 48 ದಿನಗಳ ಮಂಡಲ ಉತ್ಸವಕ್ಕೆ ಸಿದ್ದರಾಮಯ್ಯಗೆ ಆಹ್ವಾನ.

ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ತ ಉಡುಪಿಯಲ್ಲಿ ನಡೆಯುವ 48 ದಿನಗಳ ಮಂಡಲ ಉತ್ಸವ ಉದ್ಘಾಟನಾ ಕಾರ್ಯಕ್ರಮಕ್ಕೆ ಪುತ್ತಿಗೆ ಮಠದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಲಾಗಿದೆ. ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ತ ಆಗಸ್ಟ್ 1ರಿಂದ ಸೆಪ್ಟೆಂಬರ್ 15ರವರೆಗೆ 48 ದಿನಗಳ ಕಾಲ ಮಂಡಲ ಉತ್ಸವ ಕಾರ್ಯಕ್ರಮ ನಡೆಯಲಿದೆ. ಈ ಮಂಡಲ ಉತ್ಸವ ಉದ್ಘಾಟನಾ ಕಾರ್ಯಕ್ರಮಕ್ಕೆ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀಗಳ ಕಾರ್ಯದರ್ಶಿ ರತೀಶ್ ತಂತ್ರಿ ಮತ್ತು ಬೆಂಗಳೂರು ಶಾಖಾ ಮಠದ ಎ ಬಿ ಕುಂಜಾರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶ್ರೀ ಕೃಷ್ಣ ಮುಖ್ಯಪ್ರಾಣರ ಪ್ರಸಾದ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

 

 

 

 

 

 

ಇನ್ನು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಡುಪಿ ಶ್ರೀ ಕೃಷ್ಣ ಮಠದಿಂದ ಹಲವು ದಶಕಗಳಿಂದ ಅಂತರ ಕಾಯ್ದುಕೊಂಡಿದ್ದಾರೆ. ಈ ಹಿಂದೆಯೂ ಹಲವು ಬಾರಿ ಕೃಷ್ಣಮಠದಿಂದ ವಿವಿಧ ಕಾರ್ಯಕ್ರಮಗಳಿಗೆ ಆಹ್ವಾನ ನೀಡಲಾಗಿತ್ತು. ಮುಖ್ಯಮಂತ್ರಿಗಳು ಉಡುಪಿಗೆ ಭೇಟಿ ನೀಡಿದಾಗಲೂ, ಕೃಷ್ಣ ಮಠದೊಂದಿಗೆ ಅಂತರ ಕಾಯ್ದುಕೊಂಡಿದ್ದರು. ಆದರೆ, ಈ ಬಾರಿಯ ಕೃಷ್ಣ ಜನ್ಮಾಷ್ಟಮಿಗೆ ಸಿದ್ದರಾಮಯ್ಯ ತೆರಳುತ್ತಾರಾ? ಕಾದು ನೋಡಬೇಕಿದೆ.
ದಶಕಗಳ ಹಿಂದೆ ಶ್ರೀಕೃಷ್ಣ ಮಠದಲ್ಲಿ ಕನಕ ಗೋಪುರ ವಿವಾದಕ್ಕೆ ಕಾರಣವಾಗಿತ್ತ್ತು. ಮಠದ ವಿರುದ್ಧದ ಪ್ರತಿಭಟನೆಯ ನೇತೃತ್ವವನ್ನು ಸಿದ್ದರಾಮಯ್ಯ ಅವರೇ ವಹಿಸಿಕೊಂಡಿದ್ದರು. ಅಂದಿನಿಂದ ಇಲ್ಲಿಯವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಶಕಗಳಿಂದಲೂ ಕೃಷ್ಣ ಮಠದೊಂದಿಗೆ ಯಾವುದೇ ಭಾಂದವ್ಯ ಹೊಂದಿಲ್ಲ ಎಂದು ತಿಳಿದುಬಂದಿದೆ.

 

 

 

 

 

 

ಏನಿದು ಕನಕ ಗೋಪುರ ವಿವಾದ?
ದಶಕಗಳ ಹಿಂದೆ ಉಡುಪಿ ಶ್ರೀ ಕೃಷ್ಣ ದೇಗುಲ ಹೊರಭಾಗದಲ್ಲಿ ಪುರಸಭೆ ಜಾಗದಲ್ಲಿದ್ದ ಹಳೆಯ ಕನಕ ಗೋಪುರ ಶಿಥಿಲಗೊಂಡಿತ್ತು. ಹೀಗಾಗಿ, ಕನಕ ಗೋಪುರವನ್ನು ತೆರವುಗೊಳಿಸಲಾಗಿತ್ತು. ಈ ವಿಚಾರ ವಿವಾದಕ್ಕೆ ಕಾರಣವಾಗಿತ್ತು. ಉಡಪಿ ಶ್ರೀ ಕೃಷ್ಣ ಮಠದ ವಿರುದ್ಧ ಪ್ರತಿಭಟನೆಗಳು ನಡೆದಿದ್ದವು. ಈ ಪ್ರತಿಭಟನೆಯ ನೇತೃತ್ವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಹಿಸಿಕೊಂಡಿದ್ದರು.
ಬಳಿಕ, ವಿಶ್ವೇಶತೀರ್ಥ ಶ್ರೀಪಾದರು ಪ್ರತಿಭಟನಾಕಾರರನ್ನು ಕರೆಸಿ ಮಾತನಾಡಿ, ಕನಕ ಪ್ರತಿಮೆ ಸಹಿತ ಗೋಪುರ ನಿರ್ಮಾಣ ಮಾಡಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಣೆಯಾಗುವಂತೆ ಮಾಡಿದರು. ಅಂದಿನಿಂದ ಇಲ್ಲಿಯವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೃಷ್ಣ ಮಠದೊಂದಿಗೆ ಯಾವುದೇ ಭಾಂದವ್ಯ ಹೊಂದಿಲ್ಲ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!