
ಡ್ರಮ್ಮರ್ ಮಂಜು, ಇಂಟರ್ನ್ಯಾಷನಲ್ ಮ್ಯೂಜಿಷಿಯನ್ ಡ್ರಮ್ಮರ್ ಮಂಜುನಾಥ್ ಜೊತೆ ಅನನ್ಯಾ ಭಟ್ ಸಪ್ತಪದಿ ತುಳಿದಿದ್ದಾರೆ. ಇವರಿಬ್ಬರು ಒಂದೇ ಬ್ಯಾಂಡ್ನಲ್ಲಿ ಕೆಲಸ ಮಾಡುತ್ತಿದ್ದಾರೆ. ಇಬ್ಬರು ತುಂಬಾ ವರ್ಷಗಳ ಗೆಳೆಯರಾಗಿದ್ದರು. ನಿನ್ನೆ ತಿರುಪತಿಯಲ್ಲಿ (Tirupati) ಕುಟುಂಬಸ್ಥರು, ಆಪ್ತ ಬಳಗದ ಸಮ್ಮುಖದಲ್ಲಿ ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಖ್ಯಾತ ಜ್ಯೋತಿಷ್ಯ ಶಾಸ್ತ್ರದ ಲೇಖಕರು ಪಂಡಿತರು ಆದ ಪಂಡಿತ್ ಡಾ.ಅರುಣ್ ಗುರೂಜಿ ಅವರ ನೇತೃತ್ವದಲ್ಲಿ ತಿರುಪತಿಯಲ್ಲಿ ವಿವಾಹವಾಗಿದ್ದಾರೆ. ಅನನ್ಯಾ ಭಟ್ ಅವರು ಸಿನಿಮಾ ಹಾಡು, ಭಕ್ತಿ ಗೀತೆ, ಜಾನಪದ ಗೀತೆಗಳನ್ನ ತಮ್ಮ ಮಧುರ ಕಂಠದಿಂದ ಹಾಡಿ ಖ್ಯಾತಿ ಪಡೆದಿದ್ದಾರೆ.





