ರಘು ದೀಕ್ಷಿತ್ ಜೊತೆ ನೆರವೇರಿತು ಗಾಯಕಿ ವಾರಿಜಶ್ರೀ ಮದುವೆ

ಸಂಗೀತ ನಿರ್ದೇಶಕ, ಗಾಯಕ ರಘು ದೀಕ್ಷಿತ್ ಹಾಗೂ ಗಾಯಕಿ ವಾರಿಜಶ್ರೀ ವೇಣುಗೋಪಾಲ್ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಆಪ್ತರು, ಸ್ನೇಹಿತರು ಹಾಗೂ ಕುಟುಂಬದವರ ಸಮ್ಮುಖದಲ್ಲಿ ಸಡಗರದಿಂದ ಈ ವಿವಾಹ ನೆರವೇರಿದೆ. ಸೋಶಿಯಲ್ ಮೀಡಿಯಾದಲ್ಲಿ ಮದುವೆಯ ಫೋಟೋಗಳು ವೈರಲ್ ಆಗುತ್ತಿದ್ದು, ಅಭಿಮಾನಿಗಳು ನವಜೋಡಿಗೆ ಶುಭಾಶಯ ತಿಳಿಸುತ್ತಿದ್ದಾರೆ.

ಖ್ಯಾತ ಗಾಯಕ, ಸಂಗೀತ ನಿರ್ದೇಶಕ ರಘು ದೀಕ್ಷಿತ್ (Raghu Dixit) ಅವರು 2ನೇ ಮದುವೆ ಆಗಿದ್ದಾರೆ. ಗಾಯಕಿ ವಾರಿಜಶ್ರೀ ವೇಣುಗೋಪಾಲ್ (Varijashree Venugopal) ಜೊತೆ ಅವರು ವೈವಾಹಿಕ ಜೀವನ ಆರಂಭಿಸಿದ್ದಾರೆ. ರಘು ದೀಕ್ಷಿತ್ ಮತ್ತು ವಾರಿಜಶ್ರೀ ಮದುವೆ ಆಗಲಿದ್ದಾರೆ ಎಂಬ ಬಗ್ಗೆ ಇತ್ತೀಚೆಗಷ್ಟೇ ಸುದ್ದಿ ಹೊರಬಿದ್ದಿತ್ತು. ಆ ಬಗ್ಗೆ ಮಾಧ್ಯಮವೊಂದಕ್ಕೆ ರಘು ದೀಕ್ಷಿತ್ ಅವರು ಪ್ರತಿಕ್ರಿಯೆ ಕೂಡ ನೀಡಿದ್ದರು. ಕುಟುಂಬದವರು ಮತ್ತು ಆಪ್ತರ ಸಮ್ಮುಖದಲ್ಲಿ ಈ ಮದುವೆ (Raghu Dixit Marriage) ನಡೆದಿದೆ. ಸೋಶಿಯಲ್ ಮೀಡಿಯಾದಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡು ಈ ಜೋಡಿಗೆ ಅಭಿನಂದನೆ ತಿಳಿಸಲಾಗಿದೆ.

ರಘು ದೀಕ್ಷಿತ್ ಮತ್ತು ವಾರಿಜಶ್ರೀ ವೇಣುಗೋಪಾಲ್ ಅವರು ಸಂಗೀತ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ. ಇಬ್ಬರಿಗೂ ಬೇಡಿಕೆ ಇದೆ. ಗಾಯಕಿಯಾಗಿ, ಕೊಳಲು ವಾದಕಿಯಾಗಿ ವಾರಿಜಶ್ರೀ ಅವರು ಖ್ಯಾತಿ ಗಳಿಸಿದ್ದಾರೆ. ಇಬ್ಬರು ಜೊತೆಯಾಗಿ ಕೆಲಸ ಮಾಡಿದ್ದಾರೆ. ಪರಿಚಯದಿಂದ ಪ್ರೀತಿ ಬೆಳೆದು, ಕುಟುಂಬದ ಒಪ್ಪಿಗೆ ಪಡೆದು ಅವರಿಬ್ಬರು ದಾಂಪತ್ಯ ಜೀವನ ಆರಂಭಿಸಿದ್ದಾರೆ.

ಕುಟುಂಬದವರು ಹಾಗೂ ಆಪ್ತ ಸ್ನೇಹಿತರು ರಘು ದೀಕ್ಷಿತ್-ವಾರಿಜಶ್ರೀ ವಿವಾಹಕ್ಕೆ ಸಾಕ್ಷಿ ಆಗಿದ್ದಾರೆ. ಯಮುನಾ ಶ್ರೀನಿಧಿ, ಅಯ್ಯೋ ಶ್ರದ್ಧಾ ಸೇರಿದಂತೆ ಹಲವರು ಈ ಮದುವೆಯಲ್ಲಿ ಭಾಗಿಯಾಗಿದ್ದಾರೆ. ರಘು ದೀಕ್ಷಿತ್ ಮದುವೆಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಫೋಟೋ ನೋಡಿದ ಅಭಿಮಾನಿಗಳು ಕಮೆಂಟ್ ಮೂಲಕ ಅಭಿನಂದನೆ ತಿಳಿಸಿದ್ದಾರೆ.

ಯಮುನಾ ಶ್ರೀನಿಧಿ ಅವರು ಮದುವೆಯ ಫೋಟೋಗಳನ್ನು ಹಂಚಿಕೊಂಡು ನವಜೋಡಿಗೆ ಶುಭ ಹಾರೈಸಿದ್ದಾರೆ. ‘ಕನ್ನಡ ನಾಡಿನ ಹೆಮ್ಮೆಯ ಸಂಗೀತಗಾರ ರಘು ದೀಕ್ಷಿತ್ ಹಾಗೂ ಪ್ರತಿಭಾವಂತ ಸಂಗೀತಗಾರ್ತಿ ವಾರಿಜಾ ವೇಣುಗೋಪಾಲ್ ಅವರ ವಿವಾಹದ ಈ ಶುಭ ಸಂದರ್ಭದಲ್ಲಿ ಹೃತ್ಪೂರ್ವಕ ಅಭಿನಂದನೆಗಳು! ನಿಮ್ಮ ಜೀವನ ಸಂಗಮವು ಪ್ರೀತಿ, ಸಂತೋಷ ಮತ್ತು ಸಂಗೀತದ ಸುಂದರ ರಾಗಗಳಿಂದ ತುಂಬಿರಲಿ’ ಎಂದು ಅವರು ಹಾರೈಸಿದ್ದಾರೆ.

50 ವರ್ಷ ವಯಸ್ಸಿನ ರಘು ದೀಕ್ಷಿತ್ ಅವರಿಗೆ ಇದು 2ನೇ ಮದುವೆ. ಈ ಮೊದಲು (2005) ಅವರು ಡ್ಯಾನ್ಸರ್ ಮಯೂರಿ ಉಪಾಧ್ಯ ಜೊತೆ ವಿವಾಹ ಆಗಿದ್ದರು. 2019ರಲ್ಲಿ ಅವರಿಬ್ಬರು ವಿಚ್ಛೇದನ ಪಡೆದರು. ಬಳಿಕ ಇನ್ನೊಂದು ಮದುವೆ ಬಗ್ಗೆ ರಘು ದೀಕ್ಷಿತ್ ಅವರು ಆಲೋಚನೆ ಮಾಡಿರಲಿಲ್ಲ. ಆದರೆ ವಾರಿಜಶ್ರೀ ಜೊತೆ ಒಡನಾಟ ಬೆಳೆದ ಬಳಿಕ ಮದುವೆ ಬಗ್ಗೆ ನಿರ್ಧರಿಸಿದರು. ವಾರಿಜಶ್ರೀ ಅವರಿಗೆ ಈಗ 34 ವರ್ಷ ವಯಸ್ಸು.

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!