ಧರ್ಮಸ್ಥಳದಲ್ಲಿ ಅಸ್ಥಿಪಂಜರ ಹುಡುಕಾಟ : ಎಸ್​ಐಟಿ ತಂಡ ಹರಸಾಹಸ ಸವಾಲಾಯ್ತು 13ನೇ ಪಾಯಿಂಟ್..!

ಮಂಗಳೂರು: ಧರ್ಮಸ್ಥಳದಲ್ಲಿ ಅಸ್ಥಿಪಂಜರ ಹುಡುಕಾಟಕ್ಕೆ ಹರಸಾಹಸ ಪಡ್ತಿರೋ ಎಸ್​ಐಟಿ ತಂಡಕ್ಕೆ 13ನೇ ಪಾಯಿಂಟ್​ ಸವಾಲಾಗಿದೆ. ನಿನ್ನೆ 18 ಅಡಿ ಆಳಕ್ಕೆ ಇಳಿದಿದ್ದ ಎಸ್​ಐಟಿ ಟೀಂ ಇಂದು ಮತ್ತಷ್ಟು ಆಳ ಭೂಮಿಯ ಬಗೆಯಲು ಸಜ್ಜಾಗಿದೆ. 13ನೇ ಸ್ಪಾಟ್​ನ 18 ಅಡಿ ಆಳ, 22 ಅಡಿ ಅಗಲ ಅಗೆದ್ರೂ ಎಸ್​ಐಟಿಗೆ ಯಾವುದೇ ಕಳೇಬರ ಪತ್ತೆಯಾಗಿಲ್ಲ.

ಧರ್ಮಸ್ಥಳದಲ್ಲಿ ಅಸ್ಥಿಪಂಜರ ಹುಡುಕಾಟಕ್ಕೆ ಎಸ್​ಐಟಿ ತಂಡ ಹರಸಾಹಸ ಪಡುತ್ತಿದೆ. ಈಗ ಎಸ್​ಐಟಿ ಅಧಿಕಾರಿಗಳಿಗೆ 13ನೇ ಪಾಯಿಂಟ್​ ಸವಾಲಾಗಿದೆ. ನಿನ್ನೆ ಅಗೆದು.. ಅಗೆದು 18 ಅಡಿ ಆಳಕ್ಕೆ ಇಳಿದಿದ್ದ ಎಸ್​ಐಟಿ ಟೀಂ ಇಂದು ಮತ್ತಷ್ಟು ಆಳ ಭೂಮಿಯ ಬಗೆಯಲು ಸಜ್ಜಾಗಿದೆ.

ಅನಾಮಿಕ ದೂರುದಾರನ ಜೊತೆ ಎಸ್​ಐಟಿ ತಂಡ
13ನೇ ಸ್ಪಾಟ್​ನ 18 ಅಡಿ ಆಳ, 22 ಅಡಿ ಅಗಲ ಅಗೆದ್ರೂ ಎಸ್​ಐಟಿಗೆ ಯಾವುದೇ ಕಳೇಬರ ಪತ್ತೆಯಾಗಿಲ್ಲ. ಕಾರ್ಯಾಚರಣೆ ವೇಳೆ ಭೂಮಿಯಿಂದ ಚಿಮ್ಮಿದ ಜಲರಾಶಿಯಿಂದ ಕಾರ್ಯಾಚರಣೆಗೆ ತೊಡಕಾಗಿತ್ತು. ನಿನ್ನೆ ಕತ್ತಲಾದ ಕಾರಣ ಕಾರ್ಯಾಚರಣೆಗೆ ಬ್ರೇಕ್ ಬಿದ್ದಿದ್ದು, ಅನಾಮಿಕ ದೂರುದಾರ ಉಳಿದ ಜಾಗವನ್ನು ಅಗೆಯಲು ಪಟ್ಟು ಹಿಡಿದಿದ್ದ. ಹೀಗಾಗಿ ಇಂದು 13ನೇ ಸ್ಪಾಟ್​ನಲ್ಲಿ ಮತ್ತಷ್ಟು ಅಡಿ ಆಳ ಮಣ್ಣು ಅಗೆಯುವ ಕಾರ್ಯ ನಡೆಯಲಿದೆ.

ಇನ್ನೂ, ಮತ್ತೊಂದು ಕಡೆ ತನಿಖೆಗೆ ದೆಹಲಿಯಿಂದ ರಾಷ್ಟ್ರೀಯ ಮಾನವಹಕ್ಜು ಆಯೋಗದ ಅಧಿಕಾರಿಗಳು ಬಂದಿದ್ದಾರೆ. ಹಿರಿಯ ಐಪಿಎಸ್ ಅಧಿಕಾರಿ ಯುವರಾಜ್ ನೇತೃತ್ವದಲ್ಲಿ NHRC ಅಧಿಕಾರಿಗಳು ಪ್ರಕರಣದ ತನಿಖೆ ಆರಂಭಿಸಿದ್ದಾರೆ. ಈಗಾಗಲೇ NHRC ಅಧಿಕಾರಿಗಳು ಅನಾಮಿಕ ದೂರುದಾರನ ವಿಚಾರಣೆ ನಡೆಸಿದ್ದಾರೆ. ಅಲ್ಲದೇ NHRC ಅಧಿಕಾರಿಗಳು ಧರ್ಮಸ್ಥಳ ಗ್ರಾಮ ಪಂಚಾಯತ್​ನಿಂದ ದಾಖಲೆಗಳನ್ನು ಪಡೆಯುತ್ತಿದ್ದಾರೆ. ಹೀಗಾಗಿ ಬೆಳ್ತಂಗಡಿ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಯಿಂದ UDR ಪ್ರಕರಣದ ದಾಖಲೆ ಸಂಗ್ರಹಿಸಲಾಗಿದೆ. ಪಡೆದ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲನೆ ನಟೆಸುತ್ತಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!