ಸುಗಮ ಸಂಚಾರಕ್ಕೆ, ಬೆಂಗಳೂರಿನ ಕೇಂದ್ರ ಭಾಗದಲ್ಲಿ ಕೆಲ ಬದಲಾವಣೆ.

ಬೆಂಗಳೂರು : ನಗರದ ಕೇಂದ್ರ ಭಾಗದಲ್ಲಿ ವಾಹನಗಳ ದಟ್ಟಣೆ ತಗ್ಗಿಸುವ ಹಾಗೂ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವ ಸಲುವಾಗಿ ಹೈಗ್ರೌಂಡ್ಸ್, ಶೇಷಾದ್ರಿಪುರಂ ವ್ಯಾಪ್ತಿಯ ಕೆಲ ರಸ್ತೆಗಳಲ್ಲಿ ಪಾರ್ಕಿಂಗ್, ಏಕಮುಖ ಸಂಚಾರ ಸೇರಿದಂತೆ ಕೆಲ ಮಾರ್ಪಾಡುಗಳನ್ನು ಮಾಡಿ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಆದೇಶ ಹೊರಡಿಸಿದ್ದಾರೆ.

ಕಂಟೋನ್ಮೆಂಟ್ ರೈಲ್ವೆ ನಿಲ್ದಾಣ, ಶೇಷಾದ್ರಿಪುರಂ ರಸ್ತೆಯ ಸುತ್ತಮುತ್ತಲ ಪ್ರದೇಶಗಳಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ತೊಡಕುಂಟಾಗುತ್ತಿದ್ದುದರಿಂದ ಅಧ್ಯಯನ ನಡೆಸಿ ಕೆಲ ಮಾರ್ಪಾಡುಗಳನ್ನು ಮಾಡಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ಆಯುಕ್ತರು ತಿಳಿಸಿದ್ದಾರೆ.

ಏಕಮುಖ ಸಂಚಾರ : ಶೇಷಾದ್ರಿಪುರಂ ವ್ಯಾಪ್ತಿಯ ನೆಹರು ಸರ್ಕಲ್ನಿಂದ ಎನ್. ಎಸ್. ಅಯ್ಯಂಗಾರ್ ಸ್ಟ್ರೀಟ್ (ದಕ್ಷಿಣದಿಂದ ಉತ್ತರ ಮಾರ್ಗ) ಹಾಗೂ ಎನ್. ಎಸ್ ಅಯ್ಯಂಗಾರ್ ಸ್ಟ್ರೀಟ್ನಿಂದ ನಾಗಪ್ಪ ಸ್ಟ್ರೀಟ್ ಹಾಗೂ 3ನೇ ಕ್ರಾಸ್ವರೆಗೆ (ಉತ್ತರದಿಂದ ದಕ್ಷಿಣ ಮಾರ್ಗ), ಸಂಪಿಗೆ ರಸ್ತೆಯಿಂದ ಶಿರೂರು ಪಾರ್ಕ್ ರಸ್ತೆಯ ಪಶ್ಚಿಮದಿಂದ ಪೂರ್ವ ವಿಭಾಗದ ಮಾರ್ಗದಲ್ಲಿ ಏಕಮುಖ ಸಂಚಾರಕ್ಕೆ ಮಾತ್ರವೇ ಅವಕಾಶ ನೀಡಲಾಗಿದೆ.

ವಾಹನ ನಿಲುಗಡೆಗೆ ನಿರ್ಬಂಧವಿರುವ ರಸ್ತೆಗಳು : ಆರ್.ಪಿ. ರಸ್ತೆ ಮತ್ತು ಹರೇಕೃಷ್ಣ ರಸ್ತೆ, ರೈಲ್ವೆ ಕೆಳಸೇತುವೆಯಿಂದ ಆರ್. ಪಿ. ರಸ್ತೆ ಮತ್ತು ಬಿಡಿಎ ಕಚೇರಿವರೆಗಿನ ಪಶ್ಚಿಮ ದಿಕ್ಕಿನ ರಸ್ತೆಯಲ್ಲಿ ಎಲ್ಲಾ ಮಾದರಿಯ ವಾಹನಗಳ ನಿಲುಗಡೆಗೆ ನಿರ್ಬಂಧಿಸಲಾಗಿದೆ.

ಹೈಗ್ರೌಂಡ್ಸ್ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ನಿಲುಗಡೆ : ಹೈಗ್ರೌಂಡ್ಸ್ ವ್ಯಾಪ್ತಿಯಲ್ಲಿನ ರೈಲ್ವೆ ಪ್ಯಾರಲಲ್ ರಸ್ತೆ (ಆರ್.ಪಿ ರಸ್ತೆ) ಮತ್ತು ಹರೇಕೃಷ್ಣ ರಸ್ತೆಯಲ್ಲಿ ರೈಲ್ವೆ ಕೆಳಸೇತುವೆಯಿಂದ ಕುಮಾರಪಾರ್ಕ್ ವೆಸ್ಟ್ 6ನೇ ಕ್ರಾಸ್ನ ಪೂರ್ವ ದಿಕ್ಕಿನವರೆಗೆ ದ್ವಿಚಕ್ರ ವಾಹನ ನಿಲುಗಡೆಗೆ ಅನುಮತಿ ನೀಡಲಾಗಿದೆ. ಕಾರು ಸೇರಿದಂತೆ ನಾಲ್ಕು ಚಕ್ರಗಳ ವಾಹನಗಳ ನಿಲುಗಡೆಗೆ ಆರ್.ಪಿ. ರಸ್ತೆ ಮತ್ತು ಕೆ. ಪಿ ವೆಸ್ಟ್ 6ನೇ ಕ್ರಾಸ್ ರಸ್ತೆಯಿಂದ ಆರ್. ಪಿ. ರಸ್ತೆ ಮತ್ತು ಬಿಡಿಎ ಕಚೇರಿವರೆಗೆ ಅವಕಾಶ ಕಲ್ಪಿಸಲಾಗಿದೆ.

ಶಿರೂರು ಪಾರ್ಕ್ ರಸ್ತೆ ಹಾಗೂ ಸೌತ್ ಎಂಡ್ ರಸ್ತೆ ಜಂಕ್ಷನ್ನಿಂದ ಎಸ್. ಪಿ. ರಸ್ತೆಯ ನಟರಾಜ ಚಿತ್ರಮಂದಿರವರೆಗಿನ ಪಶ್ಚಿಮ ದಿಕ್ಕಿನ ರಸ್ತೆ, ಸಂಪಿಗೆ ರಸ್ತೆಯ ಬಿಬಿಎಂಪಿ ಕಚೇರಿಯಿಂದ ಶಿರೂರು ಪಾರ್ಕ್ ರಸ್ತೆಯ ಉತ್ತರ ದಿಕ್ಕಿನ ರಸ್ತೆಗಳಲ್ಲಿ ದ್ವಿಚಕ್ರ ವಾಹನ ನಿಲುಗಡೆಯನ್ನ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮತ್ತು ಶಿರೂರು ಪಾರ್ಕ್ ರಸ್ತೆ ಮತ್ತು ಸೌತ್ ಎಂಡ್ ರಸ್ತೆ ಜಂಕ್ಷನ್ನಿಂದ ಎಸ್. ಸಿ. ರಸ್ತೆ, ಸಂಪಿಗೆ ರಸ್ತೆವರೆಗೆ ಪೂರ್ವ ಹಾಗೂ ದಕ್ಷಿಣ ದಿಕ್ಕಿನ ಕಡೆಗಿನ ರಸ್ತೆಗಳಲ್ಲಿ ಎಲ್ಲಾ ಮಾದರಿಯ ವಾಹನಗಳ ನಿಲುಗಡೆಯನ್ನು ನಿರ್ಬಂಧಿಸಿ ಆದೇಶಿಸಲಾಗಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!