ಸುಗಮ ಸಂಚಾರಕ್ಕೆ, ಬೆಂಗಳೂರಿನ ಕೇಂದ್ರ ಭಾಗದಲ್ಲಿ ಕೆಲ ಬದಲಾವಣೆ.

ಬೆಂಗಳೂರು : ನಗರದ ಕೇಂದ್ರ ಭಾಗದಲ್ಲಿ ವಾಹನಗಳ ದಟ್ಟಣೆ ತಗ್ಗಿಸುವ ಹಾಗೂ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವ ಸಲುವಾಗಿ ಹೈಗ್ರೌಂಡ್ಸ್, ಶೇಷಾದ್ರಿಪುರಂ ವ್ಯಾಪ್ತಿಯ ಕೆಲ ರಸ್ತೆಗಳಲ್ಲಿ ಪಾರ್ಕಿಂಗ್, ಏಕಮುಖ ಸಂಚಾರ ಸೇರಿದಂತೆ ಕೆಲ ಮಾರ್ಪಾಡುಗಳನ್ನು ಮಾಡಿ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಆದೇಶ ಹೊರಡಿಸಿದ್ದಾರೆ.

ಕಂಟೋನ್ಮೆಂಟ್ ರೈಲ್ವೆ ನಿಲ್ದಾಣ, ಶೇಷಾದ್ರಿಪುರಂ ರಸ್ತೆಯ ಸುತ್ತಮುತ್ತಲ ಪ್ರದೇಶಗಳಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ತೊಡಕುಂಟಾಗುತ್ತಿದ್ದುದರಿಂದ ಅಧ್ಯಯನ ನಡೆಸಿ ಕೆಲ ಮಾರ್ಪಾಡುಗಳನ್ನು ಮಾಡಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ಆಯುಕ್ತರು ತಿಳಿಸಿದ್ದಾರೆ.

ಏಕಮುಖ ಸಂಚಾರ : ಶೇಷಾದ್ರಿಪುರಂ ವ್ಯಾಪ್ತಿಯ ನೆಹರು ಸರ್ಕಲ್ನಿಂದ ಎನ್. ಎಸ್. ಅಯ್ಯಂಗಾರ್ ಸ್ಟ್ರೀಟ್ (ದಕ್ಷಿಣದಿಂದ ಉತ್ತರ ಮಾರ್ಗ) ಹಾಗೂ ಎನ್. ಎಸ್ ಅಯ್ಯಂಗಾರ್ ಸ್ಟ್ರೀಟ್ನಿಂದ ನಾಗಪ್ಪ ಸ್ಟ್ರೀಟ್ ಹಾಗೂ 3ನೇ ಕ್ರಾಸ್ವರೆಗೆ (ಉತ್ತರದಿಂದ ದಕ್ಷಿಣ ಮಾರ್ಗ), ಸಂಪಿಗೆ ರಸ್ತೆಯಿಂದ ಶಿರೂರು ಪಾರ್ಕ್ ರಸ್ತೆಯ ಪಶ್ಚಿಮದಿಂದ ಪೂರ್ವ ವಿಭಾಗದ ಮಾರ್ಗದಲ್ಲಿ ಏಕಮುಖ ಸಂಚಾರಕ್ಕೆ ಮಾತ್ರವೇ ಅವಕಾಶ ನೀಡಲಾಗಿದೆ.

ವಾಹನ ನಿಲುಗಡೆಗೆ ನಿರ್ಬಂಧವಿರುವ ರಸ್ತೆಗಳು : ಆರ್.ಪಿ. ರಸ್ತೆ ಮತ್ತು ಹರೇಕೃಷ್ಣ ರಸ್ತೆ, ರೈಲ್ವೆ ಕೆಳಸೇತುವೆಯಿಂದ ಆರ್. ಪಿ. ರಸ್ತೆ ಮತ್ತು ಬಿಡಿಎ ಕಚೇರಿವರೆಗಿನ ಪಶ್ಚಿಮ ದಿಕ್ಕಿನ ರಸ್ತೆಯಲ್ಲಿ ಎಲ್ಲಾ ಮಾದರಿಯ ವಾಹನಗಳ ನಿಲುಗಡೆಗೆ ನಿರ್ಬಂಧಿಸಲಾಗಿದೆ.

ಹೈಗ್ರೌಂಡ್ಸ್ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ನಿಲುಗಡೆ : ಹೈಗ್ರೌಂಡ್ಸ್ ವ್ಯಾಪ್ತಿಯಲ್ಲಿನ ರೈಲ್ವೆ ಪ್ಯಾರಲಲ್ ರಸ್ತೆ (ಆರ್.ಪಿ ರಸ್ತೆ) ಮತ್ತು ಹರೇಕೃಷ್ಣ ರಸ್ತೆಯಲ್ಲಿ ರೈಲ್ವೆ ಕೆಳಸೇತುವೆಯಿಂದ ಕುಮಾರಪಾರ್ಕ್ ವೆಸ್ಟ್ 6ನೇ ಕ್ರಾಸ್ನ ಪೂರ್ವ ದಿಕ್ಕಿನವರೆಗೆ ದ್ವಿಚಕ್ರ ವಾಹನ ನಿಲುಗಡೆಗೆ ಅನುಮತಿ ನೀಡಲಾಗಿದೆ. ಕಾರು ಸೇರಿದಂತೆ ನಾಲ್ಕು ಚಕ್ರಗಳ ವಾಹನಗಳ ನಿಲುಗಡೆಗೆ ಆರ್.ಪಿ. ರಸ್ತೆ ಮತ್ತು ಕೆ. ಪಿ ವೆಸ್ಟ್ 6ನೇ ಕ್ರಾಸ್ ರಸ್ತೆಯಿಂದ ಆರ್. ಪಿ. ರಸ್ತೆ ಮತ್ತು ಬಿಡಿಎ ಕಚೇರಿವರೆಗೆ ಅವಕಾಶ ಕಲ್ಪಿಸಲಾಗಿದೆ.

ಶಿರೂರು ಪಾರ್ಕ್ ರಸ್ತೆ ಹಾಗೂ ಸೌತ್ ಎಂಡ್ ರಸ್ತೆ ಜಂಕ್ಷನ್ನಿಂದ ಎಸ್. ಪಿ. ರಸ್ತೆಯ ನಟರಾಜ ಚಿತ್ರಮಂದಿರವರೆಗಿನ ಪಶ್ಚಿಮ ದಿಕ್ಕಿನ ರಸ್ತೆ, ಸಂಪಿಗೆ ರಸ್ತೆಯ ಬಿಬಿಎಂಪಿ ಕಚೇರಿಯಿಂದ ಶಿರೂರು ಪಾರ್ಕ್ ರಸ್ತೆಯ ಉತ್ತರ ದಿಕ್ಕಿನ ರಸ್ತೆಗಳಲ್ಲಿ ದ್ವಿಚಕ್ರ ವಾಹನ ನಿಲುಗಡೆಯನ್ನ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮತ್ತು ಶಿರೂರು ಪಾರ್ಕ್ ರಸ್ತೆ ಮತ್ತು ಸೌತ್ ಎಂಡ್ ರಸ್ತೆ ಜಂಕ್ಷನ್ನಿಂದ ಎಸ್. ಸಿ. ರಸ್ತೆ, ಸಂಪಿಗೆ ರಸ್ತೆವರೆಗೆ ಪೂರ್ವ ಹಾಗೂ ದಕ್ಷಿಣ ದಿಕ್ಕಿನ ಕಡೆಗಿನ ರಸ್ತೆಗಳಲ್ಲಿ ಎಲ್ಲಾ ಮಾದರಿಯ ವಾಹನಗಳ ನಿಲುಗಡೆಯನ್ನು ನಿರ್ಬಂಧಿಸಿ ಆದೇಶಿಸಲಾಗಿದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!