ಸೋನಮ್ ಹನಿಮೂನ್ ಮ**ರ್ಡರ್ ಮಿಸ್ಟರಿ: ಬಸ್ನಲ್ಲಿ ಪ್ರಯಾಣಿಸಿದ್ದ ಯುವತಿಯಿಂದ ಮತ್ತೊಂದು ವಿಚಾರ ಬಯಲು!

ಮಧ್ಯಪ್ರದೇಶ : ರಾಜಾ ರಘವಂಶಿ ಕೊಲೆ ಪ್ರಕರಣದ ತನಿಖೆ ವೇಳೆ ಮತ್ತೊಂದು ಮಹತ್ವದ ಸುಳಿವು ತನಿಖಾಧಿಕಾರಿಗಳಿಗೆ ಲಭ್ಯವಾಗಿದೆ. ಹನಿಮೂನ್ ವೇಳೆ ರಾಜಾ ರಘುವಂಶಿ ಮತ್ತು ಅವರ ಪತ್ನಿ ಸೋನಮ್ ಹೋಮ್ ಸ್ಟೇ ಒಂದರಲ್ಲಿ ತಂಗಿದ್ದು, ಅಲ್ಲಿ ಹಣ ಪಾವತಿಸಿದ್ದಾರೆ ಎಂದು ತಿಳಿದುಬಂದಿದೆ. ಈ ನಡುವೆ ಸೋನಮ್ ವಾರಣಾಸಿಯಿಂದ ಘಾಜಿಪುರಕ್ಕೆ ರಸ್ತೆ ಮಾರ್ಗದ ಮೂಲಕ ಬಂದಿದ್ದು, ಆಗ ಆಕೆಯ ಪಕ್ಕದಲ್ಲಿ ಕುಳಿತು ಪ್ರಯಾಣಿಸಿದ ಯುವತಿಯೊಬ್ಬಳು ಪ್ರಮುಖ ವಿಚಾರಗಳನ್ನು ರಾಜಾ ಅವರ ಸಹೋದರನಿಗೆ ತಿಳಿಸಿದ್ದಾಳೆ.

ಈ ಮೊದಲು ಸೋನಮ್ ಕಾರಿನ ಮೂಲಕ ಘಾಜಿಪುರಕ್ಕೆ ಪ್ರಯಾಣಿಸಿದ್ದಳು ಎಂಬ ಮಾಹಿತಿ ಇತ್ತು. ಆದರೆ, ಆಕೆ ಬಸ್ನ ಮೂಲಕ ಪ್ರಯಾಣಿಸಿದ್ದು, ಅವರ ಪಕ್ಕದಲ್ಲಿಯೇ ಘಾಜಿಪುರದ ಸೈಯದ್ಪುರದ ನಿವಾಸಿ ಉಜಲಾ ಯಾದವ್ ಪ್ರಯಾಣಿಸಿದ್ದರು. ಈಕೆ ರಾಜಾ ರಘುವಂಶಿ ಸಹೋದರ ಸಚಿನ್ ರಘುವಂಶಿಗೆ ಕರೆ ಮಾಡಿ ಮಾತನಾಡಿರುವ ರೆಕಾರ್ಡಿಂಗ್ ಎಲ್ಲೆಡೆ ಹರಿದಾಡುತ್ತಿದೆ.
ವಾರಣಾಸಿಯಿಂದ ಘಾಜಿಪುರಕ್ಕೆ ಪ್ರಯಾಣಿಸಲು ಮುಂದಾದ ಸೋನಮ್ ನಂದಗಂಜ್ನಲ್ಲಿ ಇಳಿದಿದ್ದಳು. ಘಾಜಿಪುರದಿಂದ ಸ್ವಲ್ಪವೇ ದೂರದಲ್ಲಿರುವ ನಂದಗಂಜ್ನಲ್ಲಿ ಇಳಿದು ಅವಳು ಘಾಜಿಪುರಕ್ಕೆ ಹೋಗುವ ಮತ್ತೊಂದು ಬಸ್ ಏರಿದ್ದಳು.


ಈ ರೀತಿ ರೀಲ್ಸ್ ನೋಡಬೇಡಿ ಎಂದಿದ್ದ ಉಜಲಾ: ಸೋನಮ್ನನ್ನು ಬಸ್ ಹತ್ತಿಸಲು ಬಂದಿದ್ದ ವ್ಯಕ್ತಿಗಳು ಇದೀಗ ಪೊಲೀಸರ ಬಂಧನದಲ್ಲಿರುವ ಯುವಕರಲ್ಲ ಎಂದು ಉಜಲಾ ತಿಳಿಸಿದ್ದಾರೆ. ಸೋನಮ್ ನನ್ನ ಪಕ್ಕದಲ್ಲಿ ಕುಳಿತಿದ್ದರು. ರಾಜಾ ರಘುವಂಶಿ ಸಾವಿನ ಸುದ್ದಿಗೆ ಸಂಬಂಧಿಸಿದ ಸಾಮಾಜಿಕ ಮಾಧ್ಯಮದಲ್ಲಿ ನಾನು ರೀಲ್ಗಳನ್ನು ನೋಡುತ್ತಿದ್ದಾಗ, ಅವಳು ನನ್ನ ಮೇಲೆ ಕೋಪಗೊಂಡು ಇಂತಹ ರೀಲ್ಗಳನ್ನು ನೋಡಬೇಡಿ ಎಂದು ತನ್ನ ಮುಖವನ್ನು ಮರೆಮಾಡಿಕೊಂಡಳು.


ಘಾಜಿಪುರದಲ್ಲಿ ಇಳಿದ ನಾನು ಸೈಯದ್ಪುರ್ಕ್ಕೆ ಹೋಗುವ ಬಸ್ ಹತ್ತಿದೆ. ಮನೆಗೆ ಬಂದ ನಾನು ಮರುದಿನ ನೋಡಿದಾಗ ಎಲ್ಲೆಡೆ ಈ ಸುದ್ದಿ ಕಂಡೆ, ಈ ವೇಳೆ ಸೋನಮ್ ಫೋಟೋವನ್ನು ನೋಡಿದೆ. ಆಗ ಅದೇ ಯುವತಿ ಜೊತೆ ತಾನು ನಿನ್ನೆ ರಾತ್ರಿ ಪ್ರಯಾಣಿಸಿದ್ದು ಅನ್ನೋದು ತಿಳಿಯಿತು. ತಕ್ಷಣಕ್ಕೆ ನಾನು ನಂದಗಂಜ್ ಪೊಲೀಸರಿಗೆ ಕರೆ ಮಾಡಿ, ವಿಷಯ ತಿಳಿಸಿದೆ. ಘಾಜಿಪುರಕ್ಕೆ ಹೋಗಬೇಕು ಎಂದಿದ್ದ ಅವಳು, ಮಧ್ಯದಲ್ಲೇ ಇಳಿದಿದ್ದು, ನನಗೆ ಅರ್ಥವಾಗಲಿಲ್ಲ ಎಂದಿದ್ದಾರೆ.


ಸೋನಮ್ ವಿಚಾರಣೆ ವೇಳೆ ಮೇ 22 ರಂದು ಆಕೆಗೆ ಇಂದೋರ್ನಿಂದ ಅಸ್ಸೋಂ ತಲುಪಿದ್ದು, ಅಸ್ಸೋಂನ ಕಾಮಾಕ್ಯ ದೇವಿ ದರ್ಶನದ ಬಳಿಕ ಸಂಜೆಯೇ ಶಿಲ್ಲಾಂಗ್ಗೆ ತೆರಳಿದ್ದಾಗಿ ತಿಳಿಸಿದ್ದಾಳೆ.
ಸೋನಮ್ ಸೂಟ್ಕೇಸ್ ಕಾಣೆ: ಪೊಲೀಸರು ಸೊಹ್ರಾ ಹಿಲ್ಸ್ನಲ್ಲಿರುವ ಹೋಂಸ್ಟೇಯನ್ನು ತನಿಖೆ ಮಾಡಿದಾಗ ರಾಜಾ ಅವರ ವಸ್ತುಗಳು ಮಾತ್ರ ಕಂಡು ಬಂದಿದ್ದವು. ಅಲ್ಲಿ ಇದ್ದ ಸೂಟ್ಕೇಸ್ನಲ್ಲಿ ಸೋನಮ್ ಮಂಗಳಸೂತ್ರ ಮತ್ತು ಉಂಗುರ ಸಿಕ್ಕಿತ್ತು. ಇದು ತನಿಖೆಗೆ ಮಹತ್ವದ ತಿರುವು ನೀಡಿತ್ತು.


ಜಲಪಾತದ ಬಳಿ ಕರೆದೊಯ್ದಿದ್ದ ಸೋನಮ್: ಮೇ 23 ರಂದು ರಾಜಾ ಅವರ ತಾಯಿ ಉಮಾ ರಘುವಂಶಿ ಜೊತೆ ಮಾತನಾಡಿದಾಗ, ಸೋನಮ್ ಶಿಲ್ಲಾಂಗ್ನಲ್ಲಿರುವ ಜಲಪಾತಗಳಿಗೆ ಭೇಟಿ ನೀಡುವ ಬಗ್ಗೆ ಸೋನಮ್ ತಿಳಿಸಿದ್ದಳು. ಈ ವೇಳೆ ರಾತ್ರಿ ಜಲಪಾತದ ಬಳಿಯ ಸೊಹ್ರಾ ಬೆಟ್ಟಗಳಲ್ಲಿರುವ ಹೋಂಸ್ಟೇಯಲ್ಲಿ ತಂಗುವುದಾಗಿ ರಾಜಾ ತಾಯಿಗೆ ಹೇಳಿದ್ದು ತನಿಖೆಯಲ್ಲಿ ಗೊತ್ತಾಗಿದೆ.

ಆರೋಪಿಗಳ ತನಿಖೆ ಮಾಡುತ್ತಿರುವ ಶಿಲ್ಲಾಂಗ್ ಪೊಲೀಸರು: ರಾಜಾ ರಘುವಂಶಿ ಕೊಲೆ ಪ್ರಕರಣದಲ್ಲಿ ಇಂದೋರ್ ನಿವಾಸಿ ರಾಜ್ ಕುಶ್ವಾಹ, ಸೋನಮ್, ಆತನ ಸ್ನೇಹಿತರಾದ ವಿಶಾಲ್, ಆನಂದ್ ಮತ್ತು ಅಂಕಿತ್ ಅವರನ್ನು ಬಂಧಿಸಿ ಶಿಲ್ಲಾಂಗ್ಗೆ ಕರೆದೊಯ್ದು ಪೊಲೀಸರು ತನಿಖೆ ನಡೆಸಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು