ಸೋನುಗೆ ಡಿ ಬಾಸ್ ಫ್ಯಾನ್ಸ್ ಕಾಟ ‘ದರ್ಶನ್ ರೌಡಿ ಆಗಬೇಕಿತ್ತು’ ಎಂದ ಕಂಟೆಂಟ್ ಕ್ರಿಯೇಟರ್​..

ದರ್ಶನ್ ಅಭಿಮಾನಿಗಳು ಸೋನು ಶೆಟ್ಟಿ ಅವರಿಗೆ ಅಶ್ಲೀಲ ಹಾಗೂ ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಾರೆ. ಸೋನು ಶೆಟ್ಟಿ ಅಭಿಮಾನಿಗಳ ದೌರ್ಜನ್ಯದ ಬಗ್ಗೆ ಮಾತನಾಡಿದ್ದಾರೆ. ರಮ್ಯಾ ಅವರು ಈ ಬಗ್ಗೆ ಪೊಲೀಸ್ ದೂರು ದಾಖಲಿಸಿದ್ದು, ಕೆಲವರನ್ನು ಬಂಧಿಸಲಾಗಿದೆ. ಇದಾದ ಬಳಿಕವೂ ಅವರು ಬುದ್ಧಿ ಕಲಿತಂತೆ ಕಾಣಿಸುತ್ತಿಲ್ಲ. ‘ದರ್ಶನ್ ರೌಡಿ ಆಗಬೇಕಿತ್ತು’ ಎಂದ ಕಂಟೆಂಟ್ ಕ್ರಿಯೇಟರ್​ ಸೋನುಗೆ ಡಿ

ನಟ ದರ್ಶನ್ ಅಭಿಮಾನಿಗಳಿಗೆ ಇತ್ತೀಚೆಗೆ ರಮ್ಯಾ  ಬಿಸಿ ಮುಟ್ಟಿಸಿದ್ದಾರೆ. ತಮಗೆ ಅಶ್ಲೀಲ ಸಂದೇಶ ಕಳುಹಿಸಿದ ಅನೇಕರ ಹೆಸರನ್ನು ಅವರು ಸೈಬರ್ ಕ್ರೈಮ್​ಗೆ ನೀಡಿದ್ದು, ಈ ಪೈಕಿ ಕೆಲವರ ಬಂಧನ ಆಗಿದೆ. ಆದಾಗ್ಯೂ ಅವರ ಅಭಿಮಾನಿಗಳು ತಮ್ಮ ಕಾಯಕ ಮುಂದುವರಿಸಿದ್ದಾರೆ. ‘ದರ್ಶನ್ ರೌಡಿ ಆಗಬೇಕಿತ್ತು, ಅಪ್ಪಿ ತಪ್ಪಿ ಹೀರೋ ಆಗಿದ್ದಾರೆ’ ಎಂದಿದ್ದ ಕಂಟೆಂಟ್ ಕ್ರಿಯೇಟರ್ ಸೋನು ಶೆಟ್ಟಿಗೆ ಡಿ ಬಾಸ್ ಫ್ಯಾನ್ಸ್ ಅಶ್ಲೀಲ ಪದ ಬಳಕೆ ಮಾಡಿ ಬೈದಿದ್ದಾರೆ.

‘ಡಿ ಬಾಸ್ ಹಾಗೂ ಅವರ ಫ್ಯಾನ್ಸ್ ಇಷ್ಟ ಆಗಲ್ಲ. ಅವರು ರೌಡಿ ಆಗಬೇಕಿತ್ತು. ಅಪ್ಪಿ-ತಪ್ಪಿ ಹೀರೋ ಆಗಿದ್ದಾರೆ. ಅದುವೇ ಪ್ರಾಬ್ಲಂ. ಅವರ ಫ್ಯಾನ್ಸ್ ಕೂಡ ಹಾಗೆಯೇ ಇದ್ದಾರೆ. ಅವರ ಫ್ಯಾನ್ಸ್​ಗೆ ಬುದ್ಧಿ ಕಲಿಸಬೇಕು’ ಎಂದು ವಾರಗಳ ಹಿಂದೆ ಸೋನು ಶೆಟ್ಟಿ ಪೋಸ್ಟ್ ಮಾಡಿದ್ದರು. ಇದಾದ ಬಳಿಕ ಅವರ ಕಮೆಂಟ್ ಬಾಕ್ಸ್ ಹಾಗೂ ಇನ್​ಸ್ಟಾಗ್ರಾಮ್ ಇನ್​​ಬಾಕ್ಸ್​​ನಲ್ಲಿ ದರ್ಶನ್ ಅಭಿಮಾನಿಗಳು ಅಶ್ಲೀಲ ಸಂದೇಶ ಹಾಗೂ ಬೆದರಿಕೆ ಒಡ್ಡುವ ಸಂದೇಶ ಕಳುಹಿಸುತ್ತಿದ್ದಾರೆ.

https://www.goodnews24x7.com/a-man-booked-a-taxi-for-exactly-%e2%82%b912000/ ಬಸ್‌ ಮುಷ್ಕರದ ಹಿನ್ನೆಲೆ ಬರೋಬ್ಬರಿ ₹12 ಸಾವಿರಕ್ಕೆ ಟ್ಯಾಕ್ಸಿ ಬುಕ್​ ಮಾಡಿದ ವ್ಯಕ್ತಿ.!

‘ದರ್ಶನ್ ಹೆಸರು ಬಳಸಿಕೊಂಡು ನೀವು ಪಬ್ಲಿಸಿಟಿ ಮಾಡಿಕೊಳ್ಳುತ್ತಿದ್ದೀರಾ ಎಂದು ಅನೇಕರು ಹೇಳುತ್ತಿದ್ದಾರೆ. ಆದರೆ, ನನಗೆ ಅವರ ಹೆಸರನ್ನು ತೆಗೆದುಕೊಂಡು ಪಬ್ಲಿಸಿಟಿ ಪಡೆದುಕೊಳ್ಳೋ ಅಗತ್ಯ ನನಗೆ ಇಲ್ಲ’ ಎಂದು ಸೋನು ಶೆಟ್ಟಿ ಹೇಳಿದ್ದಾರೆ. ಇದಾದ ಬಳಿಕ ಸೋನು ಶೆಟ್ಟಿ ಅವರು ಮತ್ತೊಂದು ವಿಡಿಯೋ ಹಂಚಿಕೊಂಡಿದ್ದು, ಇದರಲ್ಲಿ ದರ್ಶನ್ ಅಭಿಮಾನಿಗಳು ಮಾಡಿದ ಕೆಟ್ಟ ಕಮೆಂಟ್​ಗಳನ್ನು ತೋರಿಸಿದ್ದಾರೆ. ಸದ್ಯ ಅವರು ಕಮೆಂಟ್ ಬಾಕ್ಸ್ ಆಫ್ ಮಾಡಿದ್ದಾರೆ.

ರಮ್ಯಾ ಕೇಸ್
ರಮ್ಯಾ ಅವರು ‘ರೇಣುಕಾ ಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ನಿರೀಕ್ಷೆ ಇದೆ’ ಎಂದು ಹೇಳಿದ್ದರು. ಈ ಹೇಳಿಕೆಯ ಬೆನ್ನಲ್ಲೇ ದರ್ಶನ್ ಅಭಿಮಾನಿಗಳು ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದರು. ಕೆಲವರು ಬೆದರಿಕೆ ಹಾಕಿದ್ದರು. ಇದಕ್ಕೆ ರಮ್ಯಾ ಕೇಸ್ ಹಾಕಿದ್ದಾರೆ. ಈ ಪ್ರಕರಣದಲ್ಲಿ ಕೆಲವರ ಬಂಧನ ಆಗಿದೆ. ಇದಾದ ಬಳಿಕವೂ ಅವರು ಬುದ್ಧಿ ಕಲಿತಂತೆ ಕಾಣಿಸುತ್ತಿಲ್ಲ.

Related Posts

ಲೋಕಾ ರೈಡ್ ವೇಳೆ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು!

  ಮಂಡ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಕೆಲಸಗಳ ಇಲಾಖೆ (PWD) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ಸತೀಶ್ ಅವರ ನಿವಾಸ ಮತ್ತು ಕಚೇರಿ ಸೇರಿದಂತೆ ಒಟ್ಟು ನಾಲ್ಕು ಸ್ಥಳಗಳ ಮೇಲೆ…

ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆ

ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆ ಮೈಸೂರು : ಮೈಸೂರು ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್‌ಗೆ ೨೦೨೬-೨೯ರ ಅವಧಿಯ ಆಡಳಿತ ಮಂಡಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಎಲ್ಲಾ ಹುದ್ದೆಗಳಿಗೆ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೈಸೂರಿನ ಏರ್‌ಲೈನ್ಸ್ ಹೋಟೆಲ್ ಸಭಾಂಗಣದಲ್ಲಿ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!