ಸೋನುಗೆ ಡಿ ಬಾಸ್ ಫ್ಯಾನ್ಸ್ ಕಾಟ ‘ದರ್ಶನ್ ರೌಡಿ ಆಗಬೇಕಿತ್ತು’ ಎಂದ ಕಂಟೆಂಟ್ ಕ್ರಿಯೇಟರ್​..

ದರ್ಶನ್ ಅಭಿಮಾನಿಗಳು ಸೋನು ಶೆಟ್ಟಿ ಅವರಿಗೆ ಅಶ್ಲೀಲ ಹಾಗೂ ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಾರೆ. ಸೋನು ಶೆಟ್ಟಿ ಅಭಿಮಾನಿಗಳ ದೌರ್ಜನ್ಯದ ಬಗ್ಗೆ ಮಾತನಾಡಿದ್ದಾರೆ. ರಮ್ಯಾ ಅವರು ಈ ಬಗ್ಗೆ ಪೊಲೀಸ್ ದೂರು ದಾಖಲಿಸಿದ್ದು, ಕೆಲವರನ್ನು ಬಂಧಿಸಲಾಗಿದೆ. ಇದಾದ ಬಳಿಕವೂ ಅವರು ಬುದ್ಧಿ ಕಲಿತಂತೆ ಕಾಣಿಸುತ್ತಿಲ್ಲ. ‘ದರ್ಶನ್ ರೌಡಿ ಆಗಬೇಕಿತ್ತು’ ಎಂದ ಕಂಟೆಂಟ್ ಕ್ರಿಯೇಟರ್​ ಸೋನುಗೆ ಡಿ

ನಟ ದರ್ಶನ್ ಅಭಿಮಾನಿಗಳಿಗೆ ಇತ್ತೀಚೆಗೆ ರಮ್ಯಾ  ಬಿಸಿ ಮುಟ್ಟಿಸಿದ್ದಾರೆ. ತಮಗೆ ಅಶ್ಲೀಲ ಸಂದೇಶ ಕಳುಹಿಸಿದ ಅನೇಕರ ಹೆಸರನ್ನು ಅವರು ಸೈಬರ್ ಕ್ರೈಮ್​ಗೆ ನೀಡಿದ್ದು, ಈ ಪೈಕಿ ಕೆಲವರ ಬಂಧನ ಆಗಿದೆ. ಆದಾಗ್ಯೂ ಅವರ ಅಭಿಮಾನಿಗಳು ತಮ್ಮ ಕಾಯಕ ಮುಂದುವರಿಸಿದ್ದಾರೆ. ‘ದರ್ಶನ್ ರೌಡಿ ಆಗಬೇಕಿತ್ತು, ಅಪ್ಪಿ ತಪ್ಪಿ ಹೀರೋ ಆಗಿದ್ದಾರೆ’ ಎಂದಿದ್ದ ಕಂಟೆಂಟ್ ಕ್ರಿಯೇಟರ್ ಸೋನು ಶೆಟ್ಟಿಗೆ ಡಿ ಬಾಸ್ ಫ್ಯಾನ್ಸ್ ಅಶ್ಲೀಲ ಪದ ಬಳಕೆ ಮಾಡಿ ಬೈದಿದ್ದಾರೆ.

‘ಡಿ ಬಾಸ್ ಹಾಗೂ ಅವರ ಫ್ಯಾನ್ಸ್ ಇಷ್ಟ ಆಗಲ್ಲ. ಅವರು ರೌಡಿ ಆಗಬೇಕಿತ್ತು. ಅಪ್ಪಿ-ತಪ್ಪಿ ಹೀರೋ ಆಗಿದ್ದಾರೆ. ಅದುವೇ ಪ್ರಾಬ್ಲಂ. ಅವರ ಫ್ಯಾನ್ಸ್ ಕೂಡ ಹಾಗೆಯೇ ಇದ್ದಾರೆ. ಅವರ ಫ್ಯಾನ್ಸ್​ಗೆ ಬುದ್ಧಿ ಕಲಿಸಬೇಕು’ ಎಂದು ವಾರಗಳ ಹಿಂದೆ ಸೋನು ಶೆಟ್ಟಿ ಪೋಸ್ಟ್ ಮಾಡಿದ್ದರು. ಇದಾದ ಬಳಿಕ ಅವರ ಕಮೆಂಟ್ ಬಾಕ್ಸ್ ಹಾಗೂ ಇನ್​ಸ್ಟಾಗ್ರಾಮ್ ಇನ್​​ಬಾಕ್ಸ್​​ನಲ್ಲಿ ದರ್ಶನ್ ಅಭಿಮಾನಿಗಳು ಅಶ್ಲೀಲ ಸಂದೇಶ ಹಾಗೂ ಬೆದರಿಕೆ ಒಡ್ಡುವ ಸಂದೇಶ ಕಳುಹಿಸುತ್ತಿದ್ದಾರೆ.

https://www.goodnews24x7.com/a-man-booked-a-taxi-for-exactly-%e2%82%b912000/ ಬಸ್‌ ಮುಷ್ಕರದ ಹಿನ್ನೆಲೆ ಬರೋಬ್ಬರಿ ₹12 ಸಾವಿರಕ್ಕೆ ಟ್ಯಾಕ್ಸಿ ಬುಕ್​ ಮಾಡಿದ ವ್ಯಕ್ತಿ.!

‘ದರ್ಶನ್ ಹೆಸರು ಬಳಸಿಕೊಂಡು ನೀವು ಪಬ್ಲಿಸಿಟಿ ಮಾಡಿಕೊಳ್ಳುತ್ತಿದ್ದೀರಾ ಎಂದು ಅನೇಕರು ಹೇಳುತ್ತಿದ್ದಾರೆ. ಆದರೆ, ನನಗೆ ಅವರ ಹೆಸರನ್ನು ತೆಗೆದುಕೊಂಡು ಪಬ್ಲಿಸಿಟಿ ಪಡೆದುಕೊಳ್ಳೋ ಅಗತ್ಯ ನನಗೆ ಇಲ್ಲ’ ಎಂದು ಸೋನು ಶೆಟ್ಟಿ ಹೇಳಿದ್ದಾರೆ. ಇದಾದ ಬಳಿಕ ಸೋನು ಶೆಟ್ಟಿ ಅವರು ಮತ್ತೊಂದು ವಿಡಿಯೋ ಹಂಚಿಕೊಂಡಿದ್ದು, ಇದರಲ್ಲಿ ದರ್ಶನ್ ಅಭಿಮಾನಿಗಳು ಮಾಡಿದ ಕೆಟ್ಟ ಕಮೆಂಟ್​ಗಳನ್ನು ತೋರಿಸಿದ್ದಾರೆ. ಸದ್ಯ ಅವರು ಕಮೆಂಟ್ ಬಾಕ್ಸ್ ಆಫ್ ಮಾಡಿದ್ದಾರೆ.

ರಮ್ಯಾ ಕೇಸ್
ರಮ್ಯಾ ಅವರು ‘ರೇಣುಕಾ ಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ನಿರೀಕ್ಷೆ ಇದೆ’ ಎಂದು ಹೇಳಿದ್ದರು. ಈ ಹೇಳಿಕೆಯ ಬೆನ್ನಲ್ಲೇ ದರ್ಶನ್ ಅಭಿಮಾನಿಗಳು ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದರು. ಕೆಲವರು ಬೆದರಿಕೆ ಹಾಕಿದ್ದರು. ಇದಕ್ಕೆ ರಮ್ಯಾ ಕೇಸ್ ಹಾಕಿದ್ದಾರೆ. ಈ ಪ್ರಕರಣದಲ್ಲಿ ಕೆಲವರ ಬಂಧನ ಆಗಿದೆ. ಇದಾದ ಬಳಿಕವೂ ಅವರು ಬುದ್ಧಿ ಕಲಿತಂತೆ ಕಾಣಿಸುತ್ತಿಲ್ಲ.

Related Posts

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸತತ 6 ಬಾರಿ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊತ್ತು ನಾಡಹಬ್ಬಕ್ಕೆ ಸಾಕ್ಷಿಯಾಗಿದ್ದ ದಸರಾ ಗಜಪಡೆಯ ದಿಗ್ಗಜ ಅಭಿಮನ್ಯು, 2026ರ ಮೈಸೂರು ದಸರಾದಲ್ಲಿ ನಿಶಾನೆ ಆನೆಯಾಗಿ ಹೆಜ್ಜೆ ಹಾಕಲು ಸಜ್ಜಾಗಿದ್ದಾನೆ. 60 ವರ್ಷ ವಯೋಮಿತಿ ಪೂರೈಸಿದ ಹಿನ್ನೆಲೆಯಲ್ಲಿ ಈ ಹಿಂದೆ ಆನೆಗೆ ನಿವೃತ್ತಿ…

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

‘ಟಾಕ್ಸಿಕ್‌’ ಸಿನಿಮಾದಲ್ಲಿ ರಾಕಿಂಗ್‌ ಸ್ಟಾರ್‌ ಯಶ್‌ ಅವರ ಅಭಿನಯ ಹಾಗೂ ವಿಭಿನ್ನ ಆವತಾರಕ್ಕೆ ಸ್ಯಾಂಡಲ್‌ವುಡ್‌ ಮಂದಿ ಫಿದಾ ಆಗಿದ್ದು, ಇದೀಗ ಕಿಚ್ಚ ಸುದೀಪ್‌ ಪುತ್ರಿ, ಗಾಯಕಿ ಸಾನ್ವಿ ಸುದೀಪ್‌ ಕೂಡ ಯಶ್ ಅವರ ಪರ್ಫಾರ್ಮೆನ್ಸ್ ಅನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ‘ಟಾಕ್ಸಿಕ್: ಎ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!