ಅಮೆರಿಕ-ಇರಾನ್ ಸಂಘರ್ಷದ ನಡುವೆ ಸಂಕಷ್ಟಕ್ಕೆ ಸಿಲುಕಿದವರಿಗೆ ಸೋನು ಸೂದ್ ಕಡೆಯಿಂದ ವಸತಿ ಸೌಲಭ್ಯ

ಅಮೆರಿಕಾ ಮತ್ತು ಇರಾನ್ ನಡುವಿನ ಯುದ್ಧದಿಂದಾಗಿ ವಿದೇಶದ ಹಲವು ಪ್ರವಾಸಿಗರಿಗೆ ತೊಂದರೆ ಆಗಿದೆ. ದುಬೈನಲ್ಲಿ ಅನೇಕ ಭಾರತೀಯರು ಸಿಲುಕಿಕೊಂಡಿದ್ದಾರೆ. ತಾಯ್ನಾಡಿಗೆ ವಾಪಸ್ ಬರಲು ಆಗದೇ ಪರಡಾಡುತ್ತಿದ್ದಾರೆ. ಭಾರತೀಯರು ಮಾತ್ರವಲ್ಲದೇ ಬೇರೆ ದೇಶದ ಜನರಿಗೂ ನೆರವು ನೀಡಲು ನಟ ಸೋನು ಸೂದ್ ಮುಂದಾಗಿದ್ದಾರೆ.
ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿದವರಿಗೆ ಸೋನು ಸೂದ್ ಕಡೆಯಿಂದ ಉಚಿತ ವಸತಿ ಸೌಲಭ್ಯ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಅಮೆರಿಕ-ಇರಾನ್ ಸಂಘರ್ಷದ ನಡುವೆ, ವಿಮಾನಯಾನ ರದ್ದತಿಯಿಂದಾಗಿ ದುಬೈನಲ್ಲಿ ಸಿಲುಕಿರುವ ನೂರಾರು ಪ್ರವಾಸಿಗರ ನೆರವಿಗೆ ಬಾಲಿವುಡ್ ನಟ ಸೋನು ಸೂದ್ (Sonu Sood) ಧಾವಿಸಿದ್ದಾರೆ. ಸಂಕಷ್ಟದಲ್ಲಿ ಇರುವವರಿಗೆ ಉಚಿತವಾಗಿ ವಸತಿ ಸೌಲಭ್ಯ ಕಲ್ಪಿಸುವುದಾಗಿ ಘೋಷಿಸುವ ಮೂಲಕ ಅವರು ಮತ್ತೊಮ್ಮೆ ತಮ್ಮ ದೊಡ್ಡ ಗುಣವನ್ನು ಪ್ರದರ್ಶಿಸಿದ್ದಾರೆ. ಈ ಹಿಂದೆ 2020-21ರ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಲಕ್ಷಾಂತರ ವಲಸೆ ಕಾರ್ಮಿಕರನ್ನು ಅವರ ಮನೆಗಳಿಗೆ ತಲುಪಿಸುವ ಮೂಲಕ ಸೋನು ಸೂದ್ ದೇಶಾದ್ಯಂತ ಅಪಾರ ಪ್ರೀತಿ ಗಳಿಸಿದ್ದರು. ಇದೀಗ ಅಂತರಾಷ್ಟ್ರೀಯ ಮಟ್ಟದಲ್ಲೂ ಸಂಕಷ್ಟಕ್ಕೆ ಸ್ಪಂದಿಸುವ ಮೂಲಕ ಅವರು ಸುದ್ದಿಯಲ್ಲಿದ್ದಾರೆ.

ಇತ್ತೀಚಿನ ಜಾಗತಿಕ ಮಟ್ಟದ ರಾಜಕೀಯ ಉದ್ವಿಗ್ನತೆಯಿಂದಾಗಿ ಹಲವು ವಿಮಾನಯಾನ ಸಂಸ್ಥೆಗಳು ತಮ್ಮ ಹಾರಾಟವನ್ನು ರದ್ದುಗೊಳಿಸಿವೆ. ಇದರಿಂದಾಗಿ ಪ್ರವಾಸಿಗರು ತಾಯ್ನಾಡಿಗೆ ಮರಳಲಾಗದೆ ದುಬೈನಲ್ಲಿ ಪರದಾಡುತ್ತಿದ್ದಾರೆ. ಈ ಪರಿಸ್ಥಿತಿಯನ್ನು ಗಮನಿಸಿದ ಸೋನು ಸೂದ್, ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ.

‘ಮಧ್ಯಪ್ರಾಚ್ಯದ ಬಿಕ್ಕಟ್ಟಿನಿಂದಾಗಿ ಯಾರೆಲ್ಲಾ ದುಬೈನಲ್ಲಿ ಸಿಲುಕಿಕೊಂಡಿದ್ದಾರೋ, ಅವರಿಗೆ ನಾವು ನೆರವಾಗಲು ಸಿದ್ಧರಿದ್ದೇವೆ. ನೀವು ಉಳಿದುಕೊಳ್ಳಲು ನಾವು ಉಚಿತ ವ್ಯವಸ್ಥೆ ಮಾಡುತ್ತೇವೆ’ ಎಂದು ಅವರು ಭರವಸೆ ನೀಡಿದ್ದಾರೆ. ಕೇವಲ ಭಾರತೀಯರಿಗೆ ಮಾತ್ರವಲ್ಲದೆ, ಯಾವುದೇ ದೇಶದವರಾಗಿದ್ದರೂ ಅವರಿಗೆ ಆಶ್ರಯ ನೀಡುವುದಾಗಿ ಸೋನು ಸೂದ್ ತಿಳಿಸಿದ್ದಾರೆ.

‘ನಮ್ಮ ಭಾರತೀಯ ಸಹೋದರರು ಇರಲಿ ಅಥವಾ ಬೇರೆ ಯಾವುದೇ ರಾಷ್ಟ್ರದವರೇ ಇರಲಿ, ನೀವು ದುಬೈನಲ್ಲಿ ಸಂಕಷ್ಟದಲ್ಲಿದ್ದರೆ ದಯವಿಟ್ಟು ನಮಗೆ ಅಥವಾ ದುಗಾಸ್ತ ಪ್ರಾಪರ್ಟೀಸ್ ಸಂಸ್ಥೆಗೆ ನೇರವಾಗಿ ಸಂದೇಶ ಕಳುಹಿಸಿ. ನೀವು ಸುರಕ್ಷಿತವಾಗಿ ನಿಮ್ಮ ದೇಶಕ್ಕೆ ಮರಳುವವರೆಗೆ ನಿಮ್ಮ ವಾಸ್ತವ್ಯದ ಜವಾಬ್ದಾರಿ ನಮ್ಮದು’ ಎಂದು ಸೋನು ಸೂದ್ ಹೇಳಿದ್ದಾರೆ.

ಸೋನು ಸೂದ್ ಅವರ ಈ ಕಾರ್ಯಕ್ಕೆ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ‘ಬಾಲಿವುಡ್‌ನ ಏಕೈಕ ರಿಯಲ್ ಹೀರೋ ಎಂದರೆ ನೀವೇ’, ‘ಮಾನವೀಯತೆ ಎಲ್ಲಕ್ಕಿಂತ ದೊಡ್ಡದು ಎಂಬುದನ್ನು ನೀವು ಸಾಬೀತುಪಡಿಸಿದ್ದೀರಿ’ ಎಂಬಿತ್ಯಾದಿ ಕಮೆಂಟ್​ಗಳ ಮೂಲಕ ಸೋನು ಸೂದ್ ಅವರನ್ನು ಹೊಗಳಲಾಗಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!